ಕ್ರಿಕೆಟ್ನೌಕರರೊಡನೆ ದಿನವಿಡೀ ಮೈದಾನದಲ್ಲಿ ಆಟವಾಡಿ ಸ್ಪೂರ್ತಿ ತುಂಬಿದ ಸರಳತೆಯ ಸಾಹುಕಾರ-ಡಾ‌.ಗೋವಿಂದ ಬಾಬು...

ನೌಕರರೊಡನೆ ದಿನವಿಡೀ ಮೈದಾನದಲ್ಲಿ ಆಟವಾಡಿ ಸ್ಪೂರ್ತಿ ತುಂಬಿದ ಸರಳತೆಯ ಸಾಹುಕಾರ-ಡಾ‌.ಗೋವಿಂದ ಬಾಬು ಪೂಜಾರಿ

-

- Advertisment -spot_img
ಗೆದ್ದ ತಂಡವಷ್ಟೇ ಅಲ್ಲ,ಸೋತ ತಂಡದವರ ಬೆನ್ನು ತಟ್ಟಿ ಹುರಿದುಂಬಿಸಿ ಕ್ರೀಡಾ ಸ್ಪೂರ್ತಿ ಮೆರೆದ ಉದ್ಯಮ ರತ್ನ ಡಾ.ಗೋವಿಂದ ಬಾಬು ಪೂಜಾರಿ.
ಶೆಫ್ ಟಾಕ್ ಫುಡ್&ಹಾಸ್ಪಿಟಾಲಿಟಿ ಸರ್ವಿಸಸ್ಸ್ ಪ್ರೈ.ಲಿ ಉದ್ಯಮ ಸಂಸ್ಥೆಯನ್ನು ಸ್ಥಾಪಿಸಿ,ಹಲವು ರಾಜ್ಯಗಳಲ್ಲಿ ಅಂಗ ಸಂಸ್ಥೆಯನ್ನು ಸ್ಥಾಪಿಸಿ ಸಾವಿರಾರು ಜನರಿಗೆ ಉದ್ಯೋಗಾವಕಾಶ ಕಲ್ಪಿಸಿ,ಸಮಾಜಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಮಾಜರತ್ನ ಡಾ.ಗೋವಿಂದ ಬಾಬು ಪೂಜಾರಿ ಇವರು ತಮ್ಮ‌‌ ಸಂಸ್ಥೆಗಳಲ್ಲಿ ದಿನಂಪ್ರತಿ ದುಡಿಯುವ ನೌಕರರಿಗಾಗಿ 2 ನೇ ಬಾರಿ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿದ್ದರು.
ಬೆಂಗಳೂರು ಕೂಡ್ಲುಗೇಟ್ ಸಮೀಪದ ಮೈದಾನದಲ್ಲಿ ಡಿಸೆಂಬರ್ 25 ರಂದು 60 ಗಜಗಳ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದ್ದ ಈ ಪಂದ್ಯಾವಳಿಯಲ್ಲಿ ಗೋವಿಂದ ಬಾಬು ಪೂಜಾರಿ ಇವರ ಒಡೆತನದ 8 ಸಂಸ್ಥೆಗಳಾದ
1)ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ
2)ಮತ್ಸ್ಯ ಬಂಧನ ಪ್ರೈ.ಲಿಮಿಟೆಡ್
3)ಪ್ರಗ್ನ್ಯಾ ಸಾಗರ(ಹೋಟೆಲ್ಸ್&ರೆಸಾರ್ಟ್ಸ್)
4)ಶೆಫ್ ಟಾಕ್ ನ್ಯೂಟ್ರಿಫುಡ್‌ ಪ್ರೈ.ಲಿಮಿಟೆಡ್
5)ಶ್ರೀ ನಾರಾಯಣ ಗುರು ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್
6)ಮತ್ಸ್ಯ ಲೋಕ
7)ಫೆಲಿಜ್ ನ್(FELIZ N)
8)ಇಂದಿರಾ ಕ್ಯಾಂಟೀನ್ ಭಾಗವಹಿಸಿದ್ದರು.
ಅಂತಿಮವಾಗಿ ರೋಚಕ ಫೈನಲ್ ನಲ್ಲಿ ಇಂದಿರಾ ಕ್ಯಾಂಟೀನ್ ತಂಡ ಫೈನಲ್ ನಲ್ಲಿ ಅಸಾಧ್ಯ ಗುರಿಯನ್ನು ಬೆಂಬತ್ತಿ ಜಯದಾಖಲಿಸಿದರು.ಇಂದಿರಾ ಕ್ಯಾಂಟೀನ್ ತಂಡದ ಆಟಗಾರನೋರ್ವ ಒಂದೇ ಇನ್ನಿಂಗ್ಸ್ ನಲ್ಲಿ 8 ಸಿಕ್ಸರ್ ಸಿಡಿಸಿ ಡಾ.ಗೋವಿಂದ ಬಾಬು ಪೂಜಾರಿಯವರು ಘೋಷಿಸಿದ 8000 ನಗದು ಬಹುಮಾನವನ್ನು ಪಡೆದರು.ವಿಶೇಷವಾಗಿ ಡಾ‌.ಗೋವಿಂದ ಬಾಬು ಪೂಜಾರಿಯವರು 2 ಪಂದ್ಯಗಳಲ್ಲಿ 4 ಓವರ್ ಬೌಲಿಂಗ್ ನಡೆಸಿ,ಬ್ಯಾಟಿಂಗ್ ನಲ್ಲಿಯೂ ಮಿಂಚಿದರು.
ವಿಶೇಷ ಆಕರ್ಷಣೆ ಎಂಬಂತೆ ರಾಜ್ಯದ ಪ್ರಸಿದ್ಧ ಡ್ಯಾನ್ಸಿಂಗ್ ಅಂಪಾಯರ್ ಮದನ್ ಮಡಿಕೇರಿ ನಿರ್ಣಾಯಕರಾಗಿ ಹಾಗೂ ವೀಕ್ಷಕ ವಿವರಣೆಕಾರರಾಗಿ ಭಾಗವಹಿಸಿದರು.ವಿಶೇಷ ಅತಿಥಿಯಾಗಿ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ‌ ಸಂಪಾದಕರಾದ ಕೋಟ ರಾಮಕೃಷ್ಣ ಆಚಾರ್,ಪಂದ್ಯಾವಳಿಯ ಆಯೋಜಕರಾದ ಸುಮಂತ್ ಬಿಲ್ಲವ,ಚೇತನ್ ಮತ್ತು ಕಂಪೆನಿಯ ನೌಕರರ ಕುಟುಂಬ
ಯುವಕ,ಯುವತಿಯರು ಉಪಸ್ಥಿತರಿದ್ದರು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

thirteen − two =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you