ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕುಂದಾಪುರ-ಟಿ.ಸಿ.ಎ ಅಭೂತಪೂರ್ವ ಯಶಸ್ಸಿನ ಹಿಂದೆ ಪ್ರತಿಯೊಬ್ಬ ಆಟಗಾರರ ಪಾತ್ರವಿದೆ-ಗೌತಮ್ ಶೆಟ್ಟಿ

ಕುಂದಾಪುರ-ಟಿ.ಸಿ.ಎ ಅಭೂತಪೂರ್ವ ಯಶಸ್ಸಿನ ಹಿಂದೆ ಪ್ರತಿಯೊಬ್ಬ ಆಟಗಾರರ ಪಾತ್ರವಿದೆ-ಗೌತಮ್ ಶೆಟ್ಟಿ

-

- Advertisment -spot_img
ಇಲೆವೆನ್ ಅಪ್ ಕೋಟ ಮತ್ತು ಅಂಶು ಕೋಟೇಶ್ವರ ಚಾಂಪಿಯನ್ಸ್
ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಪ್ರಾಯೋಜಿತ ಬ್ರಹ್ಮಾವರ ಹಾಗೂ ಕುಂದಾಪುರ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಇಲೆವೆನ್ ಅಪ್ ಕೋಟ ಮತ್ತು ಅಂಶು ಕೋಟೇಶ್ವರ ತಂಡ ಪ್ರಶಸ್ತಿ ಜಯಿಸಿದರು.
ಬ್ರಹ್ಮಾವರ ತಾಲೂಕಿನ ಪಂದ್ಯಾಟದ ಫೈನಲ್ ನಲ್ಲಿ ಅಭಿ ಕೋಟ ಸರ್ವಾಂಗೀಣ ಆಟದ ಫಲವಾಗಿ,ಪಾರಂಪಳ್ಳಿ ಕ್ರಿಕೆಟರ್ಸ್ ತಂಡವನ್ನು ಸೋಲಿಸಿ ಪ್ರಥಮ ಪ್ರಶಸ್ತಿ ತನ್ನದಾಗಿಸಿಕೊಂಡಿತು.
ಫೈನಲ್ ನ ಪಂದ್ಯಶ್ರೇಷ್ಟ ಮತ್ತು ಸರಣಿ ಶ್ರೇಷ್ಠ ಅಭಿ ಕೋಟ,ಬೆಸ್ಟ್ ಬ್ಯಾಟ್ಸ್‌ಮನ್ ಪುಂಡಲೀಕ ಸಾಸ್ತಾನ ಮತ್ತು ಬೆಸ್ಟ್ ಬೌಲರ್ ಪ್ರಶಸ್ತಿಯನ್ನು ಯೋಗೀಶ್ ಕೋಟ ತನ್ನದಾಗಿಸಿಕೊಂಡರು.
ಕುಂದಾಪುರ ತಾಲೂಕಿನ ಫೈನಲ್ ಪಂದ್ಯದಲ್ಲಿ ಅಂಶು ಕೋಟೇಶ್ವರ ತಂಡದ ಸಚಿನ್ ಕೋಟೇಶ್ವರ ಅದ್ಭುತ ಬ್ಯಾಟಿಂಗ್ ನಿಂದ  ಟೊರ್ಪೆಡೋಸ್ ಕುಂದಾಪುರವನ್ನು ಮಣಿಸಿ ಪ್ರಥಮ ಪ್ರಶಸ್ತಿ ತನ್ನದಾಗಿಸಿಕೊಂಡರು.
ಫೈನಲ್ ನ ಪಂದ್ಯಶ್ರೇಷ್ಟ ಪ್ರಶಸ್ತಿ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿ ಸಚಿನ್ ಕೋಟೇಶ್ವರ, ಬೆಸ್ಟ್ ಬ್ಯಾಟ್ಸ್‌ಮನ್‌ ಗಣೇಶ್(ಬೀಜಾಡಿ) ಟೊರ್ಪೆಡೋಸ್,ಬೆಸ್ಟ್ ಬೌಲರ್ ಸಚಿನ್ ಶೆಟ್ಟಿ ಪಡೆದುಕೊಂಡರು.
*ಸಮಾರೋಪ ಸಮಾರಂಭ*
ಹಿರಿಯ ಆಟಗಾರರು,ಟಿ‌.ಸಿ.ಎ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಟಿ.ಸಿ.ಅಧ್ಯಕ್ಷರಾದ ಗೌತಮ್ ಶೆಟ್ಟಿ “ಯುವ ಆಟಗಾರರ ಭಾಗವಹಿಸುವಿಕೆಯಿಂದ ಟಿ.ಸಿ.ಎ 7 ತಾಲೂಕುಗಳಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.10 ಓವರ್ ಗಳಲ್ಲಿ ಆಟಗಾರರ ಪರಿಪೂರ್ಣ ಪ್ರದರ್ಶನ ಹೊರಹೊಮ್ಮಿದೆ.ಉಡುಪಿ ಜಿಲ್ಲೆ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಯೋಜನೆಗಳು  ರಾಜ್ಯದ ಹೆಚ್ಚಿನ‌ ಜಿಲ್ಲೆಗಳ ಗಮನ ಸೆಳೆದಿದ್ದು,ಮೇ 7 ಮತ್ತು 8 ರಂದು ಟಿ.ಸಿ.ಎ ಜಿಲ್ಲಾ ಮತ್ತು ರಾಜ್ಯಮಟ್ಟದ ಪಂದ್ಯಾಟಗಳನ್ನು ಹಮ್ಮಿಕೊಳ್ಳಲಾಗಿದೆ” ಎಂದರು.
ಟಿ.ಸಿ.ಎ ಗೌರವಾಧ್ಯಕ್ಷರಾದ ಶ್ರೀಧರ್ ಶೆಟ್ಟಿ ಪ್ಯಾರಡೈಸ್ ಬನ್ನಂಜೆ ಮಾತನಾಡಿ “ಇತ್ತೀಚಿನ ದಿನಗಳಲ್ಲಿ ಓವರ್ ಗಳ ಕಡಿತದಿಂದಾಗಿ ಆಟಗಾರರಿಗೆ ಪ್ರತಿಭೆ ತೋರ್ಪಡಿಸುವ ಅವಕಾಶ ಸಿಗುತ್ತಿಲ್ಲ ಆದ್ದರಿಂದ ಟಿ.ಸಿ.ಎ 10 ಓವರ್ ಗಳ ಪಂದ್ಯಾಟ ಆಯೋಜಿಸಿದೆ.ಈ ಯೋಜನೆ ಯಶಸ್ವಿಯಾಗಲು ಆಟಗಾರರ ಒಗ್ಗಟ್ಟು ಅಗತ್ಯ” ಎಂದರು.
ಹಿರಿಯರಾದ ಗೋಪಾಲಕೃಷ್ಣ ಶೆಟ್ಟಿ ಮಾರ್ಕೋಡು ಮಾತನಾಡಿ “ಆಟಗಾರರು ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳುವುದು ಅತಿ ಮುಖ್ಯ. ಟಿ.ಸಿ.ಎ ಯುವಕರಿಗೆ ಒಳ್ಳೆಯ ಅವಕಾಶ ಕಲ್ಪಿಸಿದೆ ಹಾಗೂ ಆಟಗಾರರ ಪರಿಪೂರ್ಣ ಪ್ರದರ್ಶನ ಹೊರಹೊಮ್ಮಿದೆ” ಎಂದರು.
ಟಿ.ಸಿ.ಎ ಗೌರವಾಧ್ಯಕ್ಷರಾದ ಶರತ್ ಶೆಟ್ಟಿ ಪಡುಬಿದ್ರಿ ಮಾತನಾಡಿ “T.C.A ಯುವ ಆಟಗಾರರ ಪ್ರತಿಭಾ ಪ್ರದರ್ಶನಕ್ಕೆ ಅತ್ಯುತ್ತಮ ವೇದಿಕೆ ಸೃಷ್ಟಿಸಿದ್ದು, ಆಟಗಾರರು ಸಮರ್ಪಕವಾಗಿ ಬಳಸಿಕೊಂಡಿದ್ದಾರೆ.
30,40  ಗಜಗಳ ಪಂದ್ಯಾಟಗಳನ್ನು ನಿಯಂತ್ರಿಸುವ ಕೆಲಸ ಆಗಬೇಕಿದೆ” ಎಂದರು.
ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಟಿ‌.ಸಿ.ಎ ಗೌರವಾಧ್ಯಕ್ಷರಾದ ಶ್ರೀಪಾದ ಉಪಾಧ್ಯಾಯ,
ರಾಘವೇಂದ್ರ ಹೊಳ್ಳ,ಸತೀಶ್ ಕುಂದರ್,ನಾಗೇಶ್ ರಾವ್ ಶ್ರೀಲತಾ ಕುಂದಾಪುರ,ಸುಧೀರ್ ಕುಮಾರ್ ಶೆಟ್ಟಿ ಮಾರ್ಕೋಡು,ಯಾದವ್ ನಾಯಕ್ ಕೆಮ್ಮಣ್ಣು, ಪ್ರವೀಣ್ ಪಿತ್ರೋಡಿ, ಸತೀಶ್ ಕೋಟ್ಯಾನ್,ನಾರಾಯಣ ಶೆಟ್ಟಿ ಕೋಟೇಶ್ವರ,ಕೋಟ ರಾಮಕೃಷ್ಣ ಆಚಾರ್,ಅರ್ಮಾನ್ ಮತ್ತಿತರರು ಉಪಸ್ಥಿತರಿದ್ದರು.
ಕೆ.ಪಿ.ಸತೀಶ್,ಮನೋಜ್ ನಾಯರ್ ಸಮಾರೋಪ ಸಮಾರಂಭದ ನಿರೂಪಣೆ ನಡೆಸಿದರು.
M9 ಸ್ಪೋರ್ಟ್ಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ನೇರಪ್ರಸಾರ ಬಿತ್ತರಗೊಂಡರೆ,ವೀಕ್ಷಕ ವಿವರಣೆಯಲ್ಲಿ ಅಜಯ್ ರಾಜ್ ಮಂಗಳೂರು,ನಾಸೀರ್ ಕೋಟೇಶ್ವರ,ನಿತೇಶ್ ಗೋಲ್ಡನ್ ಮಿಲ್ಲರ್,ರಾಘವೇಂದ್ರ ಚರಣ್ ನಾವಡ ಮತ್ತು ರಂಜಿತ್ ಶೆಟ್ಟಿ ಸಹಕರಿಸಿದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

four + 9 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you