ಭರವಸೆಯ ಬೆಳಕುಉಡುಪಿ-"ಸಮಾಜಸೇವೆ ಚಿಂತನೆಯ ವಿಶ್ವಕರ್ಮ-ಹುಮ್ಯಾನಿಟಿ ಪಂದ್ಯಾಟದ ಆಯೋಜನೆ ಶ್ಲಾಘನೀಯ"-ವಾದಿರಾಜ್ ಆಚಾರ್ಯ ಏಳಿಂಜೆ

ಉಡುಪಿ-“ಸಮಾಜಸೇವೆ ಚಿಂತನೆಯ ವಿಶ್ವಕರ್ಮ-ಹುಮ್ಯಾನಿಟಿ ಪಂದ್ಯಾಟದ ಆಯೋಜನೆ ಶ್ಲಾಘನೀಯ”-ವಾದಿರಾಜ್ ಆಚಾರ್ಯ ಏಳಿಂಜೆ

-

- Advertisment -spot_img
ವಿಶ್ವಕರ್ಮ ಸಮಾಜದ 5 ಬಡಕುಟುಂಬಗಳಿಗೆ ನೆರವಿನ ಹಸ್ತ ನೀಡುವ ಸದುದ್ದೇಶದಿಂದ,ಸ್ಕಾರ್ಪಿಯನ್ ಏಳಿಂಜೆ ತಂಡ ಆಯೋಜಿಸಿರುವ ವಿಶ್ವಕರ್ಮ ಹುಮ್ಯಾನಿಟಿ ಕಪ್ ಪಂದ್ಯಾಟ ನಿಜಕ್ಕೂ ಶ್ಲಾಘನೀಯ,ಸಮಾಜ ಬಾಂಧವರ ಸಂಪೂರ್ಣ ಸಹಕಾರ ಈ ತಂಡದ ಮೇಲಿರಲಿ ಎಂದು ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಹಿರಿಯ ಅಧಿಕಾರಿಗಳಾದ ಶ್ರೀ.ವಾದಿರಾಜ ಆಚಾರ್ಯ ಏಳಿಂಜೆ ಹೇಳಿದರು.
ಇವರು ಮಂಗಳವಾರ ಉಡುಪಿ ಸಮ್ಮರ್ ಪಾರ್ಕ್ ಹೋಟೆಲ್ ನಲ್ಲಿ ಜರುಗಿದ ವಿಶ್ವಕರ್ಮ ಪ್ರೀಮಿಯರ್‌ ಲೀಗ್ ಪಂದ್ಯಾಟದ ಟ್ರೋಫಿ ಅನಾವರಣ ಮತ್ತು ಆಟಗಾರರ ಆಕ್ಷನ್ ಪ್ರಕ್ರಿಯೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭ ಮುಖ್ಯ ಅತಿಥಿಗಳಾಗಿ ವೆಂಕಟರಮಣ ಪಿತ್ರೋಡಿ ತಂಡದ ನಾಯಕರಾದ ಪ್ರವೀಣ್ ಪಿತ್ರೋಡಿ, ಉಡುಪಿ ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ಕಿಶೋರ್ ಆಚಾರ್,ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಉಡುಪಿ ಜಿಲ್ಲೆ ಯುವಘಟಕಾಧ್ಯಕ್ಷರು ಮತ್ತು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ‌ ಪ್ರವರ್ತಕರಾದ ಕೋಟ ರಾಮಕೃಷ್ಣ ಆಚಾರ್,ಟೂರ್ನಮೆಂಟ್ ನ ಪ್ರಮುಖ ಆಯೋಜಕರಾದ ಶಿವರಾಮ ಆಚಾರ್ ಏಳಿಂಜೆ,ರಾಜ್ಯ ಮಟ್ಟದ ಹಿರಿಯ ಆಟಗಾರರಾದ ಭಾಸ್ಕರ್ ಆಚಾರ್ ಉಡುಪಿ,ಶ್ರೀಮತಿ ದಿವ್ಯಾ ಶಿವರಾಮ್ ಆಚಾರ್,ಶ್ರೀಮತಿ ಆಶಾ ಭಾಸ್ಕರ್ ಆಚಾರ್
 ಮತ್ತು 12 ಫ್ರಾಂಚೈಸಿಗಳ ಮಾಲೀಕರು ಮತ್ತು ಐಕಾನ್ ಆಟಗಾರರು ಉಪಸ್ಥಿತರಿದ್ದರು.
ಸುಮನ್ ಆಚಾರ್ ಪ್ರಾರ್ಥನೆಗೈದರೆ,ಕಾರ್ಯಕ್ರಮ ನಿರೂಪಣೆ ಮತ್ತು ಆಕ್ಷನ್ ಪ್ರಕ್ರಿಯೆಯನ್ನು ರಾಜ್ಯ ಮಟ್ಟದ ವೀಕ್ಷಕ ವಿವರಣೆಕಾರರಾದ ರಾಘವೇಂದ್ರ ಮಟಪಾಡಿ ನಡೆಸಿಕೊಟ್ಟರು.
ವಿಶ್ವಕರ್ಮ ಪ್ರೀಮಿಯರ್‌ ಲೀಗ್-ಹುಮ್ಯಾನಿಟಿ ಕಪ್ ಏಪ್ರಿಲ್ 23 ಮತ್ತು 24 ರಂದು ಕಿನ್ನಿಗೋಳಿ ಐಕಳ ಶಕ್ತಿ ಕಲ್ಯಾಣಿ ಮೈದಾನದಲ್ಲಿ ನಡೆಯಲಿದ್ದು,M9 ಸ್ಪೋರ್ಟ್ಸ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

2 × 3 =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you