ಕ್ರಿಕೆಟ್ಅಂಧರ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ ದಾಖಲಾಯ್ತು ತ್ರಿಶತಕ..!!!

ಅಂಧರ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ ದಾಖಲಾಯ್ತು ತ್ರಿಶತಕ..!!!

-

- Advertisment -spot_img
ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಶತಕ ಸಿಡಿಸುವುದು ಬ್ಯಾಟ್ಸ್‌ಮನ್‌ ಪಾಲಿಗೆ ಅದು ಅದ್ಭುತ ಸಾಧನೆಯಾಗಿದೆ ಅದರಲ್ಲಿಯೂ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಲು ಸಾಧ್ಯವಾದರೆ ಆತನ ಪಾಲಿಗದು ಮಹಾನ್ ಸಾಧನೆಯೆ ಹೌದು.
ನೂರಾರು ವರ್ಷಗಳ ಇತಿಹಾಸವಿರುವ ಏಕದಿನ ಕ್ರಿಕೆಟ್‌ ನಲ್ಲಿ ಬೆರಳೆಣಿಕೆಯ ಆಟಗಾರಷ್ಟೇ ಈವರೆಗೆ ದ್ವಿಶತಕ ಸಿಡಿಸಲು ಸಾಧ್ಯವಾಗಿದೆ . ಕ್ರಿಕೆಟ್ ದೇವರೆಂದು ಕರೆಯಲ್ಪಡುವ ವಿಶ್ವದ ಅಗ್ರಮಾನ್ಯ ಆಟಗಾರ ಭಾರತದ ಹೆಮ್ಮೆಯ ಕ್ರಿಕೆಟ್ ಪಟು ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌, ಭಾರತದ ಪರವಾಗಿ ಆರಂಭ
ಆಟಗಾರನಾಗಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡುತ್ತಿದ್ದ ವೀರೇಂದ್ರ ಸೆಹ್ವಾಗ್‌ ಹಾಗೂ ಮತ್ತೊಬ್ಬ ಭಾರತದ ಹೆಮ್ಮೆಯ ಕ್ರಿಕೆಟಿಗ ರೋಹಿತ್‌ ಶರ್ಮಾ, ನ್ಯೂಜಿಲೆಂಡ್‌ ತಂಡದ ಮಾರ್ಟಿನ್‌ ಗಪ್ಟಿಲ್‌,ವೆಸ್ಟ್ ಇಂಡಿಸ್ ತಂಡದ ಕ್ರಿಸ್‌ ಗೇಲ್‌ , ಪಾಕಿಸ್ತಾನ ತಂಡದ ಫಾಕರ್ ಜಮಾನ್ ಅಂತಹ ಸಾಧಕರು ಏಕದಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಇದುವರೆಗೂ ದ್ವಿಶತಕ ಹೊಡೆಯಲು ಸಾಧ್ಯವಾಗಿದೆ. ಅದರೆ ಏಕದಿನ ಕ್ರಿಕೆಟ್‌ ನಲ್ಲಿ ಈ ವರೆಗೆ ತ್ರಿಶತಕ ದಾಖಲಾಗಿಲ್ಲ. ರೋಹಿತ್‌ ಶರ್ಮಾ ಶ್ರೀಲಂಕಾ ವಿರುದ್ಧ ಕಲೆಹಾಕಿದ  264 ರನ್‌ ಈ ವರೆಗಿನ ಅತ್ಯಧಿಕ ವೈಯುಕ್ತಿಕ ರನ್ ದಾಖಲೆಯಾಗಿದೆ.ಇದೀಗ ಆಸ್ಟ್ರೇಲಿಯಾದ ಯುವ ಆಟಗಾರನೊಬ್ಬ ಏಕದಿನ ಕ್ರಿಕೆಟ್‌ನಲ್ಲಿ ತ್ರಿಶತಕ ಸಿಡಿಸುವ ಮೂಲಕ ಇಡೀ ಕ್ರಿಕೆಟ್‌ ಜಗತ್ತು ಬೆರಗಾಗುವಂತೆ ಮಾಡಿದ್ದಾನೆ.
ಆಸ್ಟ್ರೇಲಿಯಾದ ಅಂಧರ ಕ್ರಿಕೆಟ್‌ನ ಆರಂಭಿಕ ಬ್ಯಾಟ್ಸ್‌ಮನ್ ಸ್ಟೀಫನ್ ನೀರೋ ಬ್ರಿಸ್ಬೇನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 140 ಎಸೆತಗಳಲ್ಲಿ 309 ರನ್ ಗಳಿಸಿ ವಿಶ್ವದಾಖಲೆ ಬರೆದಿದ್ದಾನೆ ಈ ಪಂದ್ಯದಲ್ಲಿ ಅಕ್ಷರಶಃ ಅಬ್ಬರಿಸಿದ ನೀರೋ 49 ಬೌಂಡರಿ ಹಾಗೂ ಒಂದು ಸಿಕ್ಸರ್‌ ಗಳೊಂದಿಗೆ ದಾಖಲೆ ಮಾಡಿದ್ದಾರೆ.
ನೀರೋ ಅವರ ಅಬ್ಬರದ ಸ್ಫೋಟಕ ಬ್ಯಾಟಿಂಗ್ ನಿಂದ  ಆಸ್ಟ್ರೇಲಿಯಾ ತಂಡವು ನಿಗದಿತ 40 ಓವರ್‌ ಗಳಲ್ಲಿ 541 ರನ್‌ ಕಲೆಹಾಕಿತು. ಇದು ಅಂಧರ ಕ್ರಿಕೆಟ್‌ ನಲ್ಲಿ ನೂತನ ದಾಖಲೆಯಾಗಿದೆ.

ಈ ಪಂದ್ಯದಲ್ಲಿ ಆಸ್ಟ್ರೇಲಿಯಾ 269 ರನ್‌ ಗಳಿಂದ ಗೆದ್ದು ಬೀಗಿದೆ. ನೀರೋ ತ್ರಿಶತಕ ಸಿಡಿಸುವ ಮೂಲಕ 1998 ರ ಅಂಧರ ಕ್ರಿಕೆಟ್ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಮಸೂದ್ ಜಾನ್ ನಿರ್ಮಿಸಿದ 262 ರನ್ ಔಟಾಗದೆ ಹೊಡೆದಿದ್ದು ಇದು ವರೆಗಿನ ಅತ್ಯದಿಕ ಮೊತ್ತದ ಜೊತೆಗೆ ವಿಶ್ವದಾಖಲೆಯಾಗಿತ್ತು ಈ ದಾಖಲೆಯನ್ನು ಪುಡಿಗಟ್ಟುವುದರ ಜೊತೆಗೆ ತ್ರಿ ಶತಕವನ್ನು ಸ್ಟೀಫನ್ ನೀರೋ ಬಾರಿಸುವುದರ ಜೊತೆಗೆ ವಿಶ್ವದಾಖಲೆಯನ್ನು ಮಾಡಿದ್ದಾರೆ.
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

two + six =

Latest news

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...
- Advertisement -spot_imgspot_img

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

Must read

- Advertisement -spot_imgspot_img

You might also likeRELATED
Recommended to you