ಅಥ್ಲೆಟಿಕ್ಸ್ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ರಶ್ಮಿ ಶೆಟ್ಟಿ ಸ್ಮಾರಕ ಅಖಿಲ ಭಾರತ...

ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ರಶ್ಮಿ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟೆಡ್ ರ‌್ಯಾಪಿಡ್ ಚೆಸ್ ಪಂದ್ಯಾವಳಿ

-

- Advertisment -spot_img
ಉಡುಪಿ-ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ,ಶ್ರೀಯುತ  ಗೌತಮ್ ಶೆಟ್ಟಿಯವರ  ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಇವರ ಆಶ್ರಯದಲ್ಲಿ ಅಕ್ಟೋಬರ್ 15 ಮತ್ತು 16 ರಂದು  2 ನೇ ಆವೃತ್ತಿಯ ರಶ್ಮಿ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟೆಡ್ ಚೆಸ್ ಪಂದ್ಯಾವಳಿ ಕುಂದಾಪುರದ ನಾರಾಯಣ ಎ.ಸಿ ಹಾಲ್ ನಲ್ಲಿ ನಡೆಯಲಿದೆ.
ಅಕ್ಟೋಬರ್ 15 ರಂದು ಬೆಳಿಗ್ಗೆ 9 ಗಂಟೆಗೆ
ಉದ್ಘಾಟನೆಗೊಳ್ಳಲಿದ್ದು,10.30 ಸರಿಯಾಗಿ
ಮೊದಲ ಸುತ್ತಿನ ಪಂದ್ಯಾವಳಿ ಆರಂಭವಾಗಲಿದೆ.
ಅಕ್ಟೋಬರ್ 16 ಸಂಜೆ 5.30 ಕ್ಕೆ ಬಹುಮಾನ ವಿತರಣಾ ಸಮಾಂಭ ನಡೆಯಲಿದೆ.
ಮುಕ್ತ,ರೇಟೆಡ್,ಉಡುಪಿ ಜಿಲ್ಲೆ ಬೆಸ್ಟ್ ಪ್ಲೇಯರ್ ಸಹಿತ ನಾನಾ ವಯೋಮಿತಿಯ ವಿಜೇತರಿಗೆ 2 ಲಕ್ಷ ಮೌಲ್ಯದ ಒಟ್ಟು 165 ಬಹುಮಾನ ನೀಡಲಾಗುತ್ತದೆ.
ಮುಕ್ತ ವಿಭಾಗದ ವಿಜೇತರಿಗೆ ಪ್ರಥಮ 30,000 ರೂ,ದ್ವಿತೀಯ 20,000ರೂ,ತೃತೀಯ 10,000ರೂ,
4ನೇ  ಸ್ಥಾನ 8,000,5ನೇ ಸ್ಥಾನ 7,000ರೂ,6 ನೇ ಸ್ಥಾನ 6,000ರೂ,7 ನೇ ಸ್ಥಾನ 5,000 ರೂ,8 ನೇ ಸ್ಥಾನ 4,000ರೂ,9 ನೇ ಸ್ಥಾನ 3,500ರೂ,10 ನೇ ಸ್ಥಾನ 3,000 ರೂ,11 ರಿಂದ 15 ನೇ ಸ್ಥಾನಿಗಳಿಗೆ ತಲಾ 2,500 ರೂ,16 ರಿಂದ 20 ನೇ ಸ್ಥಾನಿಗಳಿಗೆ  ತಲಾ 2,000ರೂ,21 ರಿಂದ 25 ನೇ ಸ್ಥಾನಿಗಳಿಗೆ ತಲಾ 1,500 ರೂ ಮತ್ತು ಟ್ರೋಫಿ ನೀಡಲಾಗುತ್ತದೆ.
7,9,11,13,15 ವಯೋಮಿತಿಯ ಪ್ರತಿ ವಿಭಾಗದ ಟಾಪ್ 10 ಬಾಲಕ-ಬಾಲಕಿಯರಿಗೆ ಟ್ರೋಫಿ,ಹಾಗೂ ಉಡುಪಿ
ಜಿಲ್ಲೆಯ ಬೆಸ್ಟ್ ಪ್ಲೇಯರ್ ಟಾಪ್ 10 ವಿಜೇತರಿಗೆ ಮೊದಲ ಬಹುಮಾನ 2,000 ರೂ,ದ್ವಿತೀಯ 1,500 ರೂ,ತೃತೀಯ 1,500 ರೂ,4 ರಿಂದ 10 ನೇ ಸ್ಥಾನಿಗಳಿಗೆ ಟ್ರೋಫಿ ನೀಡಲಾಗುತ್ತಿದೆ.
1,000 ದಿಂದ 1,199, 1,200 ರಿಂದ 1,399,1400 ರಿಂನ1,599 ಹಾಗೂ1,600 ರಿಂದ 1799 ರೇಟಿಂಗ್ ಹೊಂದಿದ ಹಾಗೂ ಅನ್ ರೇಟೆಡ್ ವಿಜೇತ ಮೊದಲ ಸ್ಥಾನಿಗೆ 3,500 ರೂ,ದ್ವಿತೀಯ 3,000 ರೂ,ತೃತೀಯ 2,500ರೂ,4 ನೇ ಸ್ಥಾನ 2,000,5 ನೇ ಸ್ಥಾನಿಗೆ 1,500ರೂ ಹಾಗೂ ಟ್ರೋಫಿ ನೀಡಲಾಗುತ್ತಿದೆ.
ಉತ್ತಮ ಹಿರಿಯ ಆಟಗಾರ(60 ಕ್ಕಿಂತ ಮೇಲಿನವರು) ವಿಭಾಗದ ವಿಜೇತ ಮೊದಲ‌ ಸ್ಥಾನಿಗೆ 2,500 ರೂ ಮತ್ತು ದ್ವಿತೀಯ 2,000 ರೂ,ತೃತೀಯ 1,500 ರೂ ಹಾಗೂ ಬೆಸ್ಟ್ ಯಂಗೆಸ್ಟ್ ಪ್ಲೇಯರ್ ಮೊದಲ ಹಾಗೂ ದ್ವಿತೀಯ ಸ್ಥಾನಿಗೆ ಟ್ರೋಫಿ ನೀಡಲಾಗುತ್ತಿದೆ.
ಅಕ್ಟೋಬರ್ 13 ನೋಂದಣಿಗೆ ಕೊನೆಯ ದಿನವಾಗಿದ್ದು www.udupichessassociation.com ಅಥವಾ www.chessfee.com ಸಂಪರ್ಕಿಸಬಹುದು ಎಂದು ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ  ಗೌತಮ್ ಶೆಟ್ಟಿ ಕುಂದಾಪುರ ಹಾಗೂ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾದ ಅಮಿತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

11 + fourteen =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you