10.1 C
London
Tuesday, April 23, 2024
Homeಕ್ರಿಕೆಟ್ತುಂಗಾ ಕಪ್-2022-ಅಂಡರ್ 14 ಟಿ 20-ಮಂಗಳೂರು ಕರಾವಳಿ ಕ್ರಿಕೆಟ್ ಅಕಾಡೆಮಿಗೆ ಪ್ರಶಸ್ತಿ

ತುಂಗಾ ಕಪ್-2022-ಅಂಡರ್ 14 ಟಿ 20-ಮಂಗಳೂರು ಕರಾವಳಿ ಕ್ರಿಕೆಟ್ ಅಕಾಡೆಮಿಗೆ ಪ್ರಶಸ್ತಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಶಿರ್ವ-ಹಿಂದೂ ಜೂನಿಯರ್ ಕಾಲೇಜು ಹಳೆ ವಿದ್ಯಾರ್ಥಿ ಸಂಘ ಶಿರ್ವ, ವಿದ್ಯಾವರ್ಧಕ ಸಂಘ ( ರಿ ) ಶಿರ್ವ ಇವರ ಸಹಭಾಗಿತ್ವದಲ್ಲಿ,ಹೆಚ್. ಜೆ.ಸಿ ಕ್ರಿಕೆಟ್ ಅಕಾಡೆಮಿ-ಸದಾನಂದ ಶಿರ್ವ ಇವರ ಸಾರಥ್ಯದಲ್ಲಿ ರಾಜ್ಯಮಟ್ಟದ 14 ರ ವಯೋಮಿತಿಯ ಬಾಲಕರ ಟಿ20 ಪಂದ್ಯಾಕೂಟ, “ಶಿರ್ವ ಅಂಡರ್ 14 ತುಂಗಾ ಕಪ್-2022” ,
ತುಂಗಾ ಹಾಸ್ಪಿಟಲ್ಸ್ ಮುಂಬೈ ಇದರ ಸಹಯೋಗದೊಂದಿಗೆ,
ಇತ್ತೀಚೆಗೆ ಹಿಂದೂ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು. ಪಂದ್ಯಾಕೂಟವನ್ನು , ಹಳೆ ವಿದ್ಯಾರ್ಥಿ ಸಂಘದ ಮುಂಬೈ ಘಟಕದ ಅಧ್ಯಕ್ಷರಾದ ಸೊರ್ಕಳ ಉದಯ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು.
ಅವಿಭಜಿತ ದ.ಕ ಜಿಲ್ಲೆಯ 5 ತಂಡಗಳು,ಬೆಂಗಳೂರಿನ 3 ತಂಡಗಳು ಸೇರಿದಂತೆ, ಒಟ್ಟು ಎಂಟು ಪ್ರತಿಷ್ಠಿತ ತಂಡಗಳು ಭಾಗವಹಿಸಿದ್ದವು.ಅತ್ಯಂತ ಜಿದ್ದಾಜಿದ್ದಿನ ಅಂತಿಮ ಪಂದ್ಯದಲ್ಲಿ ಮಂಗಳೂರಿನ ಕರಾವಳಿ ಕ್ರಿಕೆಟ್ ಅಕಾಡೆಮಿ, ಮಂಗಳೂರಿನ ಮತ್ತೊಂದು ಪ್ರಬಲ ತಂಡ ಜ್ಯೂಯಿಸ್ ಕ್ರಿಕೆಟ್ ಅಕಾಡೆಮಿಯನ್ನು ಕೇವಲ ಮೂರು ರನ್ನುಗಳಿಂದ ಪರಾಭವಗೊಳಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು.
ಉದ್ಘಾಟನಾ ಹಾಗೂ ಪ್ರಶಸ್ತಿ ವಿತರಣಾ ಸಮಾರಂಭ ದಲ್ಲಿ, ಹಿಂದೂ ಜೂನಿಯರ್ ಕಾಲೇಜು ಇದರ ನಿವೃತ್ತ ಪ್ರಾಂಶುಪಾಲರಾದ ಕೆ.ರಾಜಗೋಪಾಲ್, ಎಂ.ಎಸ್.
ಆರ್.ಎಸ್ ಕಾಲೇಜಿನ ಉಪ ಪ್ರಾಂಶುಪಾಲರಾದ ಕೆ.ಜಿ.ಮಂಜುನಾಥ್ ,ಹಳೆ ವಿದ್ಯಾರ್ಥಿ ಸಂಘದ ಶಿರ್ವ ಇದರ ಅಧ್ಯಕ್ಷರಾದ ರಮಾನಂದ ಶೆಟ್ಟಿಗಾರ್, ಗೌರವಾಧ್ಯಕ್ಷ ರಾದ ಸಚ್ಚಿದಾನಂದ ಹೆಗ್ಡೆ, ಮುಂಬೈ ಘಟಕದ ಪದಾಧಿಕಾರಿಗಳಾದ ಕಾಂದೇಶ್ ಭಾಸ್ಕರ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ, ಪದಾಧಿಕಾರಿಗಳಾದ ಉಮೇಶ್ ಆಚಾರ್ಯ, ಪವನ್ ಶೆಟ್ಟಿ, ಶಬರಿ ರಾಜೇಶ್ ಶೆಟ್ಟಿ, ಅರುಣಾಕರ್ ಶೆಟ್ಟಿ ಇನ್ನೂ ಮುಂತಾದ ಅನೇಕ ಗಣ್ಯರು ಉಪಸ್ಥಿತರಿದ್ದರು.
ಪಂದ್ಯಾಕೂಟದ ವೀಕ್ಷಕ ವಿವರಣೆಯನ್ನು ಅರವಿಂದ್ ಮಣಿಪಾಲ, ಶಿವರಾಜ್ ದೇವಾಡಿಗ ಹಾಗೂ ಪ್ರಕಾಶ್ ಪಡುಬಿದ್ರಿ ನಿರ್ವಹಿಸಿದರು.
ಹೆಚ್.ಜೆ.ಸಿ ಕ್ರಿಕೆಟ್ ಅಕಾಡೆಮಿಯ ಪ್ರದಾನ ತರಬೇತುದಾರ ಸದಾನಂದ ಶಿರ್ವ ಸ್ವಾಗತಿಸಿ ವಂದಿಸಿದರು. ಸಹಾಯಕ ತರಬೇತುದಾರ ಶೇಖರ್ ಸಹಕರಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

one × three =