ಕ್ರಿಕೆಟ್ಚಾಲೆಂಜ್ ರಾಷ್ಟ್ರೀಯ ಮಟ್ಟದ ಟ್ರೋಫಿ ಅನಾವರಣಗೊಳಿಸಿದ ಚಕ್ರವರ್ತಿ ಶ್ರೀಪಾದ ಉಪಾಧ್ಯಾಯ...

ಚಾಲೆಂಜ್ ರಾಷ್ಟ್ರೀಯ ಮಟ್ಟದ ಟ್ರೋಫಿ ಅನಾವರಣಗೊಳಿಸಿದ ಚಕ್ರವರ್ತಿ ಶ್ರೀಪಾದ ಉಪಾಧ್ಯಾಯ ಮತ್ತು ಪ್ರದೀಪ್ ವಾಜ್ ಇವರಿಗೆ ಸನ್ಮಾನ

-

- Advertisment -spot_img
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಚಾಲೆಂಜ್ ಟ್ರೋಫಿ-2022 ಅಂತಿಮ‌ ದಿನವಾದ ರವಿವಾರ ಬೆಳಿಗ್ಗೆ ಚಕ್ರವರ್ತಿ ಕ್ರಿಕೆಟ್ ಕ್ಲಬ್ ಕುಂದಾಪುರ ತಂಡದ ಯಶಸ್ವಿ ನಾಯಕರಾದ ಶ್ರೀಪಾದ ಉಪಾಧ್ಯಾಯ ಮತ್ತು ಸವ್ಯಸಾಚಿ ಆಟಗಾರರಾದ ಪ್ರದೀಪ್ ವಾಜ್ ಇವರನ್ನು ಚಾಲೆಂಜ್ ಕ್ರಿಕೆಟರ್ಸ್ ವತಿಯಿಂದ ಸನ್ಮಾನಿಸಲಾಯಿತು
ತದನಂತರ ಚಾಲೆಂಜ್ ಟ್ರೋಫಿಯನ್ನು ಶ್ರೀಪಾದ ಉಪಾಧ್ಯಾಯ ಮತ್ತು ಪ್ರದೀಪ್ ವಾಜ್ ಮತ್ತು ಕೆನರಾ ಕಿನ್ನಿಮೂಲ್ಕಿ ಉದಯ್ ಕುಮಾರ್ ಜೊತೆಯಾಗಿ ಅನಾವರಣಗೊಳಿಸಿದರು.
ಈ ಸಂದರ್ಭ ಸನ್ನಿ ಉಡುಪಿ ಅಮರನಾಥ್ ಭಟ್,ಕಿಶೋರ್,ಕೆನರಾ ಉದಯ್ ಕುಮಾರ್ ಕಿನ್ನಿಮೂಲ್ಕಿ,ರಾಜಾ ಚಕ್ರವರ್ತಿ ಇವರನ್ನು ಕೂಡ ಗೌರವಿಸಲಾಯಿತು.
ಚಕ್ರವರ್ತಿ ಕ್ರಿಕೆಟ್ ಕ್ಲಬ್ ಕಪ್ತಾನರಾದ ಶ್ರೀಪಾದ್ ಉಪಾಧ್ಯಾಯರು ಅವಿಘ್ನ‌ ಸೃಷ್ಟಿ ಮತ್ತು ಫ್ರೆಂಡ್ಸ್ ಬೆಂಗಳೂರು ತಂಡಗಳ ನಡುವಿನ ನಿರ್ಣಾಯಕ ಕ್ವಾರ್ಟರ್ ಫೈನಲ್ ಟಾಸ್ ನಡೆಸಿದರು.ಆ ಪಂದ್ಯದ ವಿಜೇತ ತಂಡ ಫ್ರೆಂಡ್ಸ್ ಬೆಂಗಳೂರು ತಂಡದ ಸಾಗರ್ ಭಂಡಾರಿ ಇವರಿಗೆ ಪ್ರದೀಪ್ ವಾಜ್ ರವರು ಪಂದ್ಯಶ್ರೇಷ್ಟ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭ ಹಿರಿಯ ಆಟಗಾರರಾದ ಜಗದೀಶ್ ಕಾಮತ್ ಕಟಪಾಡಿ,ಅಮರನಾಥ ಭಟ್ ಸನ್ನಿ,
ಭೂಷಣ್ ಸನ್ನಿ ಉಡುಪಿ,ಕುಂದಾಪುರ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಶಿಧರ್ ಹೆಮ್ಮಾಡಿ,ಹಿರಿಯ ಪತ್ರಕರ್ತ ನಾಗರಾಜ್ ರಾಯಪ್ಪನಮಠ,ಚಕ್ರವರ್ತಿ ಕುಂದಾಪುರದ ಹಿರಿಯ ಆಟಗಾರರಾದ ಮನೋಜ್ ನಾಯರ್,ಕೆ‌.ಪಿ.ಸತೀಶ್,ರಂಜಿತ್ ಶೆಟ್ಟಿ,ಸ್ಪೋರ್ಟ್ಸ್ ಕನ್ನಡ ಕೋಟ ರಾಮಕೃಷ್ಣ ಆಚಾರ್,ಚಾಲೆಂಜ್ ತಂಡದ ವ್ಯವಸ್ಥಾಪಕರಾದ ಚಾಲೆಂಜ್ ಚಂದ್ರ,ಪಂದ್ಯಾಟ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಮತ್ತು ಚಾಲೆಂಜ್ ತಂಡದ ಆಟಗಾರರು ಉಪಸ್ಥಿತರಿದ್ದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

1 × two =

Latest news

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’   ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...
- Advertisement -spot_imgspot_img

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...

Must read

- Advertisement -spot_imgspot_img

You might also likeRELATED
Recommended to you