10 C
London
Tuesday, April 23, 2024
Homeಕ್ರಿಕೆಟ್ವಿಶ್ವಮಾನ್ಯತೆಯ ಸಾಧನೆಯ ಪುಟವನ್ನು ಸೇರಿದ ವಿರಾಟ್ ಕೊಹ್ಲಿಯ ವಿಶಿಷ್ಟ ಕಲಾಕೃತಿ

ವಿಶ್ವಮಾನ್ಯತೆಯ ಸಾಧನೆಯ ಪುಟವನ್ನು ಸೇರಿದ ವಿರಾಟ್ ಕೊಹ್ಲಿಯ ವಿಶಿಷ್ಟ ಕಲಾಕೃತಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಿತ್ರಪಾಡಿ ಗ್ರಾಮದ ಕಾರ್ತಟ್ಟು ಇಲ್ಲಿನ ಸುಬ್ರಾಯ ಆಚಾರ್ ಹಾಗೂ ಸುಶೀಲ ದಂಪತಿಯ ಹಿರಿಯ ಪುತ್ರರಾದ ನಾಗೇಶ್ ಆಚಾರ್ಯ ಕೋಟ ಎಂಬ ಇವರು ಇತ್ತಿಚಿಗೆ ತೆಂಗಿನ ಗರಿಯಲ್ಲಿ ರಚಿಸಿದ ಭಾರತೀಯ ಕ್ರಿಕೆಟ್‌ ತಾರೆಯಾದ ವಿರಾಟ್ ಕೊಹ್ಲಿಯ ಕಲಾಕೃತಿಯು Exclusive World Records ಹಿರಿಮೆಗೆ ಪಾತ್ರವಾಗಿದೆ.
ಶ್ರೀಯುತ ನಾಗೇಶ್ ಆಚಾರ್ಯ ಇವರು  ಸ್ವಂತ ಮರದ ಕೆತ್ತನೆಯ ಶಿಲ್ಪಕಲಾ ವೃತ್ತಿಯನ್ನು ನಿರ್ವಹಿಸುತ್ತಿದ್ದಾರೆ. ತನ್ನ ವೃತ್ತಿ ಬದುಕಿನ ಬಿಡುವಿನ ವೇಳೆಯಲ್ಲಿ ಎಳೆಯ ವಯಸ್ಸಿನಲ್ಲಿ ಆಸಕ್ತಿ ಹೊಂದಿದ್ದ ಚಿತ್ರಕಲೆಯನ್ನೇ ನೆಚ್ಚಿನ ಹವ್ಯಾಸವಾಗಿ ಮುಂದುವರಿಸಿಕೊಂಡು ತನ್ನೊಳಗಿನ ಕಲಾ ಕುಸುಮವು  ಹೊಸತನದಿ ಅರಳುವಂತೆ ಪ್ರಯತ್ನಿಸಲು ಆರಂಭಿಸಿದರು. ಮೊದಮೊದಲು ಪೆನ್ಸಲ್ ಆರ್ಟ್ ರಚಿಸುತ್ತಿದ್ದ ಇವರ ಪ್ರತಿಭೆಯು ಮತ್ತಷ್ಟು ಪರಿಪಕ್ವಗೊಳ್ಳುತ್ತ ಪೇಪರ್ ಕಟ್ಟಿಂಗ್ ಆರ್ಟ್ , ಲೀಫ್ ಆರ್ಟ್ ಗಳಾಗಿ ಮುಂದುವರಿದು ಸಾಕಷ್ಟು  ಯಶಸ್ವಿ ಕಲಾಕೃತಿಗಳು ಇವರ ಕರದಿಂದ  ರಚಿತಗೊಂಡಿದೆ. ಅಶ್ವಥ ಎಲೆಯಲ್ಲಿ ಹಲವಾರು ಸಾಧಕರ ಚಿತ್ರವನ್ನು , ದೈವ ದೇವರುಗಳ ಚಿತ್ರಕೆಯನ್ನು ರಚಿಸಿದ್ದಾರೆ. ಬಾಳೆ ಎಲೆಯಲ್ಲಿ ವಿಶೇಷವಾಗಿ ರಚಿತಗೊಂಡ ಗಣಪತಿ ಚಿತ್ರಿಕೆ ಹಾಗೂ ಮೊಳೆ ಹಾಗೂ ದಾರದ ಸಹಾಯದಿಂದ ವಿಶೇಷವಾಗಿ ರಚಿಸಲ್ಪಟ್ಟ ಪುನಿತ್ ರಾಜ್ ಕುಮಾರ್ ಅವರ ಚಿತ್ರಿಕೆ ಜನಮನ್ನಣೆಯನ್ನು ಗಳಿಸಿದೆ. ಇತ್ತೀಚಿಗಷ್ಟೆ ತೆಂಗಿನ ಗರಿಯಲ್ಲಿ ಕೇವಲ 9 ನಿಮಿಷಗಳ ಅವಧಿಯಲ್ಲಿ ರಚಿಸಿದ ಭಾರತೀಯ ಕ್ರಿಕೆಟ್‌ ತಾರೆ ವಿರಾಟ್ ಕೊಹ್ಲಿಯ ಕಲಾಕೃತಿಯನ್ನು  I.S.O ದಿಂದ ಪ್ರಮಾಣೀಕೃತ ಗೊಂಡಿರುವ LB exclusive talent & creation co. ಎಂಬ ಉತ್ತರ ಪ್ರದೇಶದ ಬರೇಲಿಯಾದ ಸಂಸ್ಥೆಯಿಂದ ಆಯ್ಕೆಗೊಳ್ಳುವ   ಪ್ರತಿಷ್ಠಿತ Exclusive World Records ಗೆ ಕಳುಹಿಸಲಾಗಿದ್ದು ,
ಇವರ ಕಲಾಪ್ರತಿಭೆಯ ನೈಪುಣ್ಯತೆಯನ್ನು ಪರಾಮರ್ಶಿಸಿ ಅರ್ಹವಾಗಿ ಇವರಿಂದ ರಚಿತಗೊಂಡ ಕಲಾಕೃತಿಯು exclusive world records ಪಟ್ಟಿಗೆ  ನಾಮಾಂಕಿತಗೊಂಡಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

two + 15 =