ಕ್ರಿಕೆಟ್ಫಾಲ್ಕನ್ ಕ್ಲಬ್ ನ ಆಂಬುಲೆನ್ಸ್ ಸಾರ್ವಜನಿಕ ಸೇವೆಗೆ ನೀಡುವ ಸದುದ್ದೇಶ-ಇಂದಿನಿಂದ ಕುಂದಾಪುರದಲ್ಲಿ‌...

ಫಾಲ್ಕನ್ ಕ್ಲಬ್ ನ ಆಂಬುಲೆನ್ಸ್ ಸಾರ್ವಜನಿಕ ಸೇವೆಗೆ ನೀಡುವ ಸದುದ್ದೇಶ-ಇಂದಿನಿಂದ ಕುಂದಾಪುರದಲ್ಲಿ‌ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಹಬ್ಬ “ಗೋಲ್ಡನ್ ಟ್ರೋಫಿ-2023

-

- Advertisment -spot_img
ಕುಂದಾಪುರ-ಇಲ್ಲಿನ ತೆಕ್ಕಟ್ಟೆ ಕನ್ನುಕೆರೆ ಪರಿಸರದ ಹಿರಿಯ ತಂಡ ದಿ ಫಾಲ್ಕನ್ ಕ್ಲಬ್ ತೆಕ್ಕಟ್ಟೆ.1986 ರಲ್ಲಿ ಸ್ಥಾಪನೆಯಾದ ಈ ಸಂಸ್ಥೆ ಕರ್ನಾಟಕ ಮಾತ್ರವಲ್ಲದೇ ಕೊಲ್ಲಿ ರಾಷ್ಟ್ರಗಳಲ್ಲಿ ಕೂಡ ಊರಿನ ಆಟಗಾರರ ಫಾಲ್ಕನ್ ತಂಡ ಹೊಂದಿದ್ದು ಅನೇಕ ಕ್ರಿಕೆಟ್ ಪಂದ್ಯಾಟಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ ಹಾಗೂ ಕ್ರಿಕೆಟ್,ವಾಲಿಬಾಲ್ ಹೀಗೆ ಅನೇಕ ಕ್ರೀಡಾಕೂಟಗಳನ್ನು ಆಯೋಜಿಸಿದ ಸಂಸ್ಥೆ ಕೂಡ ಹೌದು.ಕ್ರೀಡೆ ಮಾತ್ರವಲ್ಲದೇ ಸದ್ದಿಲ್ಲದೇ ಸಮಾಜಸೇವೆಯಲ್ಲಿ ತೊಡಗಿಸಿಕೊಂಡ ಫಾಲ್ಕನ್ ತಂಡ ಬಡವರ ವೈದ್ಯಕೀಯ ನೆರವಿಗಾಗಿ ಆ್ಯಾಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿದ್ದು,ಕೊರೋನಾ ಸಂದರ್ಭ ಕೋವಿಡ್ ಸಂತ್ರಸ್ತರ ಮನೆ ಮನೆಗೆ ಕಿಟ್ ತಲುಪಿಸುವ ಮೂಲಕ ಮಾನವೀಯತೆ ಮೆರೆದಿದೆ.ಬಡ ಕುಟುಂಬದ ವಿದ್ಯಾಭ್ಯಾಸಕ್ಕೂ ಕೂಡ ಈ ಸಂಸ್ಥೆ ಸಹಾಯಹಸ್ತ ನೀಡಿದೆ.
ಫಾಲ್ಕನ್ ಕ್ರಿಕೆಟ್ ಕ್ಲಬ್ ಇದೀಗ ತನ್ನ ಸೇವಾ ಪರಿಧಿಯನ್ನು ವಿಸ್ತರಿಸುವ ಸದುದ್ದೇಶ-ಆಂಬುಲೆನ್ಸ್ ವಾಹನ ಸುಸ್ಥಿತಿ ಹಾಗೂ ನಿರ್ವಹಣೆಯೊಂದಿಗೆ ಸಾರ್ವಜನಿಕ ಸೇವೆಗೆ ಉಪಯೋಗಿಸಲು ಇಂದಿನಿಂದ (ಫೆಬ್ರವರಿ 3,4 ಮತ್ತು 5) ಕುಂದಾಪುರದ ಗಾಂಧಿಮೈದಾನದಲ್ಲಿ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟ “ಫಾಲ್ಕನ್ ಟ್ರೋಫಿ-2023”
ಆಯೋಜಿಸಿದ್ದಾರೆ.
ಮೂರು ದಿನಗಳ‌ ಕಾಲ‌ ಹೊನಲು ಬೆಳಕಿನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಈ ಕ್ರಿಕೆಟ್ ಪಂದ್ಯಾಟವನ್ನು ಇಂದು ಸಂಜೆ  ದೋಹಾ ಕತಾರ್ ನ ಗೋಲ್ಡನ್ ಟ್ರೇಡಿಂಗ್  ಮತ್ತು ಡೆಕೋರೇಶನ್ ನ ಮಾಲೀಕರಾದ ಅಸ್ಮತ್ ಆಲಿ ಉದ್ಘಾಟಿಸಲಿದ್ದಾರೆ.ಸಮಾಜ ಸೇವಕರು ಎಮ್.ಶಿವರಾಮ್ ಶೆಟ್ಟಿ (ಮಹಾದೇವಿ ಪ್ರಸಾದ್ ಮಲ್ಯಾಡಿ) ಮತ್ತು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಕೋಟ ರಾಮಕೃಷ್ಣ ಆಚಾರ್ ಮತ್ತು ಗಣ್ಣರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭದಂದು ಸುನಾಮಿ ಕಿಟ್ಟಿ ಅಭಿನಯದ “ಕೋರ” ಚಿತ್ರ ತಂಡ ಭಾಗವಹಿಸಲಿದೆ.
ಫಾಲ್ಕನ್ ಗೋಲ್ಡನ್ ಟ್ರೋಫಿ ರಾಷ್ಟ್ರೀಯ ಮಟ್ಟದ ಪಂದ್ಯಾಟದಲ್ಲಿ ಹೊರರಾಜ್ಯ ಮತ್ತು ಕರ್ನಾಟಕದ ಒಟ್ಟು 22 ಪ್ರತಿಷ್ಠಿತ ತಂಡಗಳು ಭಾಗವಹಿಸಲಿದ್ದು,ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಪಂದ್ಯಾಟ ಸಾಗಲಿದೆ. ಪ್ರಥಮ ಪ್ರಶಸ್ತಿ ವಿಜೇತ ತಂಡ 3,03,333 ರೂ ನಗದು,ದ್ವಿತೀಯ ಸ್ಥಾನಿ 2,02,222 ರೂ ನಗದು ಸಹಿತ ಆಕರ್ಷಕ ಪಾರಿತೋಷಕಗಳನ್ನು ಪಡೆಯಲಿದ್ದಾರೆ.ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಉಡುಗೊರೆ ಹಾಗೂ ಸರಣಿ ಶ್ರೇಷ್ಠ ಗೌರವಕ್ಕೆ ಭಾಜನರಾಗುವ ಆಟಗಾರ 55,055 ರೂ ನಗದು ಬಹುಮಾನ ಪಡೆಯಲಿದ್ದಾರೆ ಎಂದು ದಿ ಫಾಲ್ಕನ್ ಕ್ಲಬ್ ಅಧ್ಯಕ್ಷ ಸಲಾಂ ಸ್ಪೋರ್ಟ್ಸ್ ಕನ್ನಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
M9 ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದ್ದು,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯನಿರ್ವಹಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

7 − six =

Latest news

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...
- Advertisement -spot_imgspot_img

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

Must read

- Advertisement -spot_imgspot_img

You might also likeRELATED
Recommended to you