ಕ್ರಿಕೆಟ್ಮಾರ್ಕ್ ಮಹೇಶ್ ಬೌಲಿಂಗ್ ದಾಳಿಗೆ ಮುಗ್ಗರಿಸಿದ ನ್ಯಾಶ್-ಹೊಸ ನಗರದಲ್ಲಿ ಹೊಸ ಅಧ್ಯಾಯ...

ಮಾರ್ಕ್ ಮಹೇಶ್ ಬೌಲಿಂಗ್ ದಾಳಿಗೆ ಮುಗ್ಗರಿಸಿದ ನ್ಯಾಶ್-ಹೊಸ ನಗರದಲ್ಲಿ ಹೊಸ ಅಧ್ಯಾಯ ಬರೆದ ಜೈ ಕರ್ನಾಟಕ

-

- Advertisment -spot_img
ಹೊಸನಗರ ಬ್ರದರ್ಸ್ ಇವರ ಆಶ್ರಯದಲ್ಲಿ ಇಲ್ಲಿನ ನೆಹರೂ ಮೈದಾನದಲ್ಲಿ‌ ಆಯೋಜಿಸಲಾದ  ರಾಷ್ಟ್ರೀಯ ಮಟ್ಟದ ಹೊನಲುಬೆಳಕಿನ “ಹೊಸನಗರ ಟ್ರೋಫಿ-2023” ಪ್ರಶಸ್ತಿಯನ್ನು ಜೈ ಕರ್ನಾಟಕ ಬೆಂಗಳೂರು ಜಯಿಸುವುದರ ಮೂಲಕ ಸತತ ಎರಡನೇ ಬಾರಿಗೆ ಚಾಂಪಿಯನ್ಸ್ ಪಟ್ಟ ಅಲಂಕರಿಸಿ  ಹೊಸನಗರದಲ್ಲಿ ಹೊಸ ಅಧ್ಯಾಯ ಬರೆಯಿತು.
*ಮಾರ್ಕ್ ಮಹೇಶ್ ಬೌಲಿಂಗ್ ದಾಳಿಗೆ ಮುಗ್ಗರಿಸಿದ ನ್ಯಾಶ್*
ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಜೈ ಕರ್ನಾಟಕ ಬೆಂಗಳೂರು-ಡಿ.ಜೆ ನ್ಯಾಶ್ ಬೌಲರ್ ಗಳ ನೇರ ನಿಖರ ಎಸೆತಗಳಿಗೆ ರನ್ ಗಳಿಸಲು ಪರದಾಡಿದರೂ ಅಂತಿಮವಾಗಿ 5 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 29 ರನ್ ಕಲೆಹಾಕಿತ್ತು.
ಚೇಸಿಂಗ್ ವೇಳೆ ನ್ಯಾಶ್ ತಂಡ ಮಾರ್ಕ್ ಮಹೇಶ್ ಅತ್ಯುತ್ತಮ ಬೌಲಿಂಗ್ ದಾಳಿಗೆ ಹಠಾತ್ ವಿಕೆಟ್ ಪತನ ಕಂಡಿತ್ತು.ಮಾರ್ಕ್ 2 ಓವರ್ ಗಳಲ್ಲಿ ಕೇವಲ 6 ರನ್ ನೀಡಿ 4 ಅಮೂಲ್ಯ ವಿಕೆಟ್ ಗಳನ್ನು ಪಡೆದುಕೊಂಡರು. ಕೊನೆಯ ಓವರ್ ನಲ್ಲಿ ನ್ಯಾಶ್ ಗೆಲುವಿಗೆ 8 ರನ್ ಅಗತ್ಯತೆಯ ಸಂದರ್ಭದಲ್ಲಿ ಮೊಹ್ಸಿನ್ ಕೇವಲ 3 ರನ್ ನೀಡಿ ಗೆಲುವಿಗೆ ಕಾರಣೀಭೂತರಾದರು.
ಪ್ರಥಮ ಪ್ರಶಸ್ತಿ ರೂಪದಲ್ಲಿ ಜೈ ಕರ್ನಾಟಕ ಬೆಂಗಳೂರು 2,22,222 ರೂ,ದ್ವಿತೀಯ ಸ್ಥಾನಿ ಡಿ.ಜೆ ನ್ಯಾಶ್ 1,11,111 ರೂ,ತೃತೀಯ ಸ್ಥಾನಿ ಸೂರಜ್ ಇಲೆವೆನ್ 33,333 ಮತ್ತು ಚತುರ್ಥ ಸ್ಥಾನಿ ಜೈಹಿಂದ್ ಶಿವಮೊಗ್ಗ 22,222 ರೂ ನಗದು ಸಹಿತ ಆಕರ್ಷಕ ಪಾರಿತೋಷಕಗಳನ್ನು ಪಡೆದುಕೊಂಡರು.
ಫೈನಲ್ ಪಂದ್ಯಶ್ರೇಷ್ಟ ಮಾರ್ಕ್ ಮಹೇಶ್,ಬೆಸ್ಟ್ ಬ್ಯಾಟರ್ ಡೇವಿಡ್ ಜೈ ಕರ್ನಾಟಕ, ಬೆಸ್ಟ್ ಬೌಲರ್ ಸನತ್ ಕೋಡೂರು ಮತ್ತು ಪಂದ್ಯಾಟದುದ್ದಕ್ಕೂ ಶ್ರೇಷ್ಠ ಸವ್ಯಸಾಚಿ ಪ್ರದರ್ಶನ ನೀಡಿದ ಡಿ.ಜೆ ನ್ಯಾಶ್ ನ‌ ಸ್ವಸ್ತಿಕ್ ನಾಗರಾಜ್ ಸರಣಿಶ್ರೇಷ್ಟ ಪ್ರಶಸ್ತಿ ರೂಪದಲ್ಲಿ ಚಿನ್ನದ ಉಂಗುರವನ್ನು ಪಡೆದುಕೊಂಡರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two × one =

Latest news

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’   ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...
- Advertisement -spot_imgspot_img

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...

Must read

- Advertisement -spot_imgspot_img

You might also likeRELATED
Recommended to you