21.3 C
London
Saturday, May 11, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ದಿ.ಸುರೇಶ್ ಡಿ ಪಡುಕೋಣೆ-ದಿ.ಪ್ರಭು ಅರ್ಥರ್ ಪಿರೇರಾ ಸ್ಮರಣಾರ್ಥ ಪಡುಕೋಣೆಯಲ್ಲಿ ಹೊನಲು ಬೆಳಕಿನ ವಾಲಿಬಾಲ್ ಮತ್ತು ಕ್ರಿಕೆಟ್...

ದಿ.ಸುರೇಶ್ ಡಿ ಪಡುಕೋಣೆ-ದಿ.ಪ್ರಭು ಅರ್ಥರ್ ಪಿರೇರಾ ಸ್ಮರಣಾರ್ಥ ಪಡುಕೋಣೆಯಲ್ಲಿ ಹೊನಲು ಬೆಳಕಿನ ವಾಲಿಬಾಲ್ ಮತ್ತು ಕ್ರಿಕೆಟ್ ಪಂದ್ಯಾಟ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಪಡುಕೋಣೆ-ಕಳೆದ 15 ವರ್ಷಗಳಿಂದ ಶೈಕ್ಷಣಿಕ, ಸಾಮಾಜಿಕ ಹಾಗೂ ಕ್ರೀಡಾ ಸೇವೆಯಲ್ಲಿ ತೊಡಗಿಸಿಕೊಂಡ ಪಡುಕೋಣೆ ಎಜ್ಯುಕೇಶನ್ & ಸ್ಪೋರ್ಟ್ಸ್ ಪ್ರಮೋಟರ್ಸ್ ಇವರ ವತಿಯಿಂದ ಅಗಲಿದ ಹಿರಿಯ ಕ್ರೀಡಾಪ್ರೋತ್ಸಾಹಕರಾದ ದಿ‌‌.ಸುರೇಶ್.ಡಿ. ಪಡುಕೋಣೆ ಮತ್ತು ದಿ.ಪ್ರಭು ಅರ್ಥರ್ ಪಿರೇರಾ ಇವರ ಸ್ಮರಣಾರ್ಥ ನಾಡ ಪಡುಕೋಣೆಯ ಗ್ರೆಗರಿ ಪ್ರೌಢಶಾಲಾ ಮೈದಾನದಲ್ಲಿ ಮಾರ್ಚ್ 24 ರಿಂದ 26 ರ ವರೆಗೆ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಆಟಗಾರರನ್ನೊಳಗೊಂಡ ಹೊನಲು ಬೆಳಕಿನ ವಾಲಿಬಾಲ್ ಮತ್ತು ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
*ದಿ.ಪ್ರಭು ಅರ್ಥರ್ ಪಿರೇರಾ ಸ್ಮರಣಾರ್ಥ ವಾಲಿಬಾಲ್ ಪಂದ್ಯಾಟ*
ದಿ.ಪ್ರಭು ಅರ್ಥರ್ ಪಿರೇರಾ ಇವರು ನಾಡ ಗುಡ್ಡೆ ಅಂಗಡಿಯ ಗೇರುಕಟ್ಟೆ ಪರಿಸರದಲ್ಲಿ ಜನಿಸಿ,
ಶೈಕ್ಷಣಿಕ,ಸಾಮಾಜಿಕ ಮತ್ತು ಕ್ರೀಡಾ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಸಂಸ್ಥೆಯ ಸ್ಥಾಪಕ ಸದಸ್ಯರಾಗಿ ಹಾಗೂ ಕೋಶಾಧಿಕಾರಿಯಾಗಿ 8 ವರ್ಷಗಳ ದೀರ್ಘಾವಧಿಯ ಸೇವೆ ಸಲ್ಲಿಸಿ 25-4-2021 ರಂದು ನಿಧನರಾದರು. ಇವರ ಸ್ಮರಣಾರ್ಥ ಮಾರ್ಚ್ 24 ರಂದು ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಆಯೋಜಿಸಲಾಗಿದೆ.
*ದಿ.ಸುರೇಶ್.ಡಿ.ಪಡುಕೋಣೆ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ*
ದಿ.ಸುರೇಶ್.ಡಿ.ಪಡುಕೋಣೆ ಇವರು ಪಡುಕೋಣೆಯ ಕೋಟಿನಕಳಿಯಲ್ಲಿ ಜನಿಸಿ,ತಮ್ಮೂರಿನ ಹೆಸರನ್ನು ಗಗನದೆತ್ತರಕ್ಕೇರಿಸಿದ ಮಹಾನ್ ವ್ಯಕ್ತಿ.ಇವರು ಉಡುಪಿ ಮತ್ತು ಮುಂಬಯಿಯಲ್ಲಿ ಅಪೋಲೋ ಬೋರಿಂಗ್ ಇಂಜಿನಿಯರಿಂಗ್ ವರ್ಕ್ಸ್ ಎಂಬ ಸಂಸ್ಥೆಯನ್ನು ಸ್ಥಾಪಿಸಿ ನೂರಾರು ಜನರಿಗೆ ಉದ್ಯೋಗ ನೀಡಿ,ಪ್ರಗತಿಪರ ಉದ್ಯಮಿ ಎನಿಸಿಕೊಂಡು ತಾನು ಕಲಿತ ಶಾಲೆಗೆ,ಬಡ ಮಕ್ಕಳ ಶಿಕ್ಷಣ,ದೈವಿಕ ಕಾರ್ಯಗಳಿಗೆ ಪ್ರೋತ್ಸಾಹ ನೀಡುತ್ತಾ,ಪಡುಕೋಣೆಯಲ್ಲಿ ಅಪೋಲೋ ಟ್ರೋಫಿ ಪಂದ್ಯಾಟ ಸಂಘಟಿಸಿ,ಕ್ರಿಕೆಟ್ ಕ್ರಾಂತಿ ಎಬ್ಬಿಸಿ,
13/2/2022 ರಂದು ನಿಧನರಾದರು.ಇವರ ಸ್ಮರಣಾರ್ಥ ಮಾರ್ಚ್ 25 ಮತ್ತು 26 ರಂದು ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
ಮಾರ್ಚ್ 24 ರ ಸಂಜೆ 5.30 ಕ್ಕೆ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು,ವೇದಿಕೆಯಲ್ಲಿ ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ.ಈ ಸಂದರ್ಭ ವಿದ್ಯಾರ್ಥಿ ವೇತನ ವಿತರಣೆ ಮತ್ತು ಗಣ್ಯ ವ್ಯಕ್ತಿಗಳಿಗೆ ಸನ್ಮಾನ‌ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾರ್ಚ್ 26 ರ ಸಂಜೆ 6.30 ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ.
ಪಡುಕೋಣೆ ಎಜ್ಯುಕೇಶನ್ ಮತ್ತು ಸ್ಪೋರ್ಟ್ಸ್ ಪ್ರಮೋಟರ್ಸ್ ಇವರ ಸಾಮಾಜಿಕ,ಶೈಕ್ಷಣಿಕ ಮತ್ತು ಕ್ರೀಡಾಸೇವೆಯಲ್ಲಿ ಕೈ ಜೋಡಿಸಿವವರು ಈ ಕೆಳಗೆ ನಮೂದಿಸಿದ ಬ್ಯಾಂಕ್ ಖಾತೆಗೆ ಆರ್ಥಿಕ ಸಹಾಯವನ್ನು ಮಾಡಬಹುದಾಗಿದೆ.
*ಬ್ಯಾಂಕ್ ಮಾಹಿತಿ*
 Bank Name-BANK OF BARODA
Account Holder-Padukone Education & Sports Promoters
Acount Number-81920100007634
IFSC Code-BARB0VJNADA
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

three × 4 =