ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ದಿ. ಶ್ರೀಮತಿ ಲೂಸಿ ಸಲ್ದಾನ‌ ಮೆಮೋರಿಯಲ್ ಕಪ್ - 2023 ಅಂಡರ್...

ದಿ. ಶ್ರೀಮತಿ ಲೂಸಿ ಸಲ್ದಾನ‌ ಮೆಮೋರಿಯಲ್ ಕಪ್ – 2023 ಅಂಡರ್ -14 ರಾಜ್ಯ ಮಟ್ಟದ ಲೆದರ್ ಬಾಲ್ ಟಿ20 ಕ್ರಿಕೆಟ್ ಪಂದ್ಯಾವಳಿ

-

- Advertisment -spot_img
ಕಾರ್ಕಳ ಸಮೀಪದ ರಂಗನಪಲ್ಕೆ ಕೌಡೂರು ಸ್ಟೇಡಿಯಂ ನಲ್ಲಿ ರಾಜ್ಯಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಅಂಡರ್ ೧೪ ಕ್ರಿಕೆಟ್ ಪಂದ್ಯಾಟಕ್ಕೆ ಸನ್ ರೈಸ್ ಕ್ರಿಕೆಟ್ ಅಕಾಡೆಮಿಯ ಪ್ರಧಾನ ಕೋಚ್, ಹಿರಿಯ  ಆಟಗಾರರಾದ ಸದಾನಂದ ಶಿರ್ವ ಚಾಲನೆ ನೀಡಿದರು.
ಸಾಗರ, ಭದ್ರಾವತಿ,ಮೈಸೂರು, ಬ್ರಹ್ಮಾವರ, ಮಂಗಳೂರು, ಮಣಿಪಾಲ, ಶಿರ್ವ, ಪುತ್ತೂರು ಭಾಗದ ಒಟ್ಟು ೧೨ ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿವೆ. ಮುಂದಿನ ಐದು ದಿನಗಳ ಕಾಲ ಪಂದ್ಯಾವಳಿ ನಡೆಯಲಿದೆ.
ಈ ಸಂದರ್ಭ ಕೌಡೂರು ಸ್ಟೇಡಿಯಂ ಸಂಸ್ಥಾಪಕ ಲಾರೆನ್ಸ್ ಸಲ್ದಾನ ಕೌಡೂರು, ಮೈದಾನದ ವ್ಯವಸ್ಥಾಪಕ ಮೆಲ್ವಿನ್ ನೊರೊನ್ಹಾ ,  ಪಂದ್ಯಾಟ ಸಂಯೋಜಕ ಸದಾನಂದ ಶಿರ್ವ ಮತ್ತಿತರರು ಇದ್ದರು.
ಸನ್ ರೈಸ್ ಕ್ರಿಕೆಟ್ ಅಕಾಡೆಮಿಯ ಆಶ್ರಯದಲ್ಲಿ ಏಪ್ರಿಲ್ 8 ರಿಂದ 12 ರ ವರೆಗೆ, ಲೀಗ್ ಕಮ್ ನಾಕ್ ಔಟ್ ರೂಪದಲ್ಲಿ ಪ್ರತೀ ದಿನ ಮೂರು ಪಂದ್ಯಗಳು ನಡೆಯಲಿವೆ.
ಭಾಗವಹಿಸುವ ತಂಡಗಳು:
ಬೆಳ್ಳಿಪಾಡಿ ಆಳ್ವಾಸ್ ಅಕಾಡೆಮಿ ಬ್ರಹ್ಮಾವರ,
22 ಯಾರ್ಡ್ಸ್ ಸ್ಕೂಲ್ ಆಫ್  ಅಕಾಡೆಮಿ ಮಂಗಳೂರು,
ಪುತ್ತೂರು ಕ್ರಿಕೆಟ್ ಅಕಾಡೆಮಿ ಪುತ್ತೂರು,
ಸೇಂಟ್ ಅಲೋಶಿಯಸ್ ಕ್ರಿಕೆಟ್ ಅಕಾಡೆಮಿ ಮಂಗಳೂರು,HJC ಕ್ರಿಕೆಟ್ ಅಕಾಡೆಮಿ ಶಿರ್ವ,
ಉಡುಪಿ ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಷನ್  ಮಣಿಪಾಲ,ದಕ್ಷಿಣ ಕನ್ನಡ ಕ್ರಿಕೆಟ್ ಅಸೋಸಿಯೇಷನ್ ಮಂಗಳೂರು,ಕರಾವಳಿ ಕ್ರಿಕೆಟ್ ಅಸೋಸಿಯೇಷನ್ ಮಂಗಳೂರು,ಸಾಗರ್ ಬಾಯ್ಸ್ ಇಲೆವೆನ್ ಸಾಗರ,
ಹೆರಿಟೇಜ್ ಕ್ರಿಕೆಟ್ ಅಕಾಡೆಮಿ ಮೈಸೂರು,
ರಘುವೀರ್  ಕ್ರಿಕೆಟ್ ಅಕಾಡೆಮಿ ಭದ್ರಾವತಿ.
ಸನ್ ರೈಸ್ ಕ್ರಿಕೆಟ್ ಅಕಾಡೆಮಿ  ಆಯೋಜಿಸಿರುವ  ದಿ. ಶ್ರೀಮತಿ ಲೂಸಿ ಸಲ್ದಾನ  ಇವರ  ಸ್ಮರಣಾರ್ಥ ನಡೆಯುವ ರಾಜ್ಯಮಟ್ಟದ 14 ರ ವಯೋಮಿತಿಯ ಈ ಲೆದರ್ ಬಾಲ್ T-20 ಕ್ರಿಕೆಟ್ ಪಂದ್ಯಾವಳಿಗೆ ಸ್ಪೋರ್ಟ್ಸ್ ಕನ್ನಡ. ಕಾಮ್ ಶುಭಾಶಯ ಕೋರುತ್ತಿದೆ. ಕ್ರಿಕೆಟ್ ನಮ್ಮ ಪ್ರಮುಖ ಆಟ.  ಈ ಪಂದ್ಯಾವಳಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಆಟಗಾರರು ಕ್ರೀಡಾ ಕೌಶಲ್ಯ ಮತ್ತು ಸಾಮರ್ಥ್ಯವನ್ನು ಅಭಿವೃದ್ಧಿಪಡಿಸಿ , ಕ್ರಿಕೆಟ್‌ನಲ್ಲಿ ಉತ್ಸಾಹವನ್ನು ಹೊಂದಿ ಮತ್ತು ಉತ್ತಮ ಪ್ರದರ್ಶನ  ತೋರ್ಪಡಿಸಿ  ಮುಂದಿನ ಕ್ರಿಕೆಟ್ ತಾರೆಯಾಗುವ ಅವಕಾಶವನ್ನು ಪಡೆದುಕೊಳ್ಳಿ ಎಂದು ಹಾರೈಸುತ್ತಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

10 + 18 =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you