ಕ್ರಿಕೆಟ್ಎ.ಜೆ ಕಾರ್ಪೊರೇಟ್ ಪ್ರೀಮಿಯರ್ ಲೀಗ್-ಮಂಗಳೂರಿನ ಎ.ಜೆ.ರಾಯಲ್ಸ್ ಚಾಂಪಿಯನ್ಸ್

ಎ.ಜೆ ಕಾರ್ಪೊರೇಟ್ ಪ್ರೀಮಿಯರ್ ಲೀಗ್-ಮಂಗಳೂರಿನ ಎ.ಜೆ.ರಾಯಲ್ಸ್ ಚಾಂಪಿಯನ್ಸ್

-

- Advertisment -spot_img
ಮಂಗಳೂರು-ಎ.ಜೆ ಕಾರ್ಪೊರೇಟ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2023 ರ ಮೊದಲನೇಯ ಆವೃತ್ತಿಯು ವಾರಾಂತ್ಯದಲ್ಲಿ ಮಂಗಳೂರಿನ ಎ ಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮೈದಾನದಲ್ಲಿ ನಡೆಯಿತು.
ಎ.ಜೆ. ರಾಯಲ್ಸ್ ತಂಡವು ಟೀಮ್ ಮಣಿಪಾಲ ವಿರುದ್ಧದ ಫೈನಲ್‌ನಲ್ಲಿ ವೀರೋಚಿತ ಜಯ ದಾಖಲಿಸಿತು. ಸಂಘಟಕರಾದ ಡಾಕ್ಟರ್ ಶರಣ್ ಜೆ ಶೆಟ್ಟಿಯವರ  ಎ.ಜೆ. ರಾಯಲ್ಸ್  ಸೇರಿದಂತೆ   16 ಕ್ಕೂ ಹೆಚ್ಚು ಕಾರ್ಪೊರೇಟ್ ತಂಡಗಳು ಕಾರ್ಪೊರೇಟ್ ಕ್ರಿಕೆಟ್  ಟೂರ್ನಮೆಂಟ್‌ನಲ್ಲಿ ಚಾಂಪಿಯನ್ ಪ್ರಶಸ್ತಿಗಾಗಿ ಸ್ಪರ್ಧಿಸಿದವು, ಎ.ಜೆ. ರಾಯಲ್ಸ್ ತಂಡ  ತಾನು ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡು ಅಂತಿಮ ಸುತ್ತಿಗೆ ಪ್ರವೇಶಿಸಿತು ಮತ್ತು  ಪ್ರತಿಷ್ಠಿತ  ಎ.ಜೆ ಕಾರ್ಪೊರೇಟ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ ಟ್ರೋಫಿಯನ್ನು ಮುಡಿಗೇರಿಸಿತು.
ವಾರಾಂತ್ಯದಲ್ಲಿ ಎರಡು ದಿನಗಳ ಕಾಲ  ಲೀಗ್ ಪಂದ್ಯಗಳು, ಕ್ವಾರ್ಟರ್ ಫೈನಲ್ ನಾಕೌಟ್ ಪಂದ್ಯಗಳು  ಮತ್ತು ಸೆಮಿ-ಫೈನಲ್‌ಗಳನ್ನು  ಟೂರ್ನಮೆಂಟ್‌ ಒಳಗೊಂಡಿತ್ತು, ಪಂದ್ಯಾವಳಿಯ ಭಾಗವಾಗಿ, ನಾಕೌಟ್ ಸುತ್ತಿಗೆ ಅರ್ಹತೆ ಪಡೆಯಲು ಪ್ರತಿ ಭಾಗವಹಿಸುವ ತಂಡವು ಮೂರು ಲೀಗ್ ಪಂದ್ಯಗಳನ್ನು ಆಡಬೇಕಾಗಿತ್ತು, ನಂತರ ಸೆಮಿಫೈನಲ್ ಮತ್ತು ಗ್ರ್ಯಾಂಡ್ ಫೈನಲ್ ಪಂದ್ಯಕ್ಕೆ ಹೋರಾಡಲು ನಾಲ್ಕು ತಂಡಗಳನ್ನು ಆಯ್ಕೆ ಮಾಡಲಾಯಿತು . ಡಾಕ್ಟರ್ ವಿನೋದ್ ನಾಯಕ್ ನೇತೃತ್ವದ ಟೀಮ್ ಮಣಿಪಾಲ ತಂಡವು ಸೆಮಿ ಫೈನಲ್ ನಲ್ಲಿ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ತಂಡವನ್ನು ರೋಚಕ ಸೆಮಿ ಫೈನಲ್ ಪಂದ್ಯದಲ್ಲಿ ಪರಾಭವಗೊಳಿಸಿತು. ಎ ಜೆ ರಾಯಲ್ಸ್ ತಂಡವು ಎಂ ಸಿ ಎಫ್ ಕ್ರಿಕೆಟ್ ಕ್ಲಬ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತ್ತು. ನಂತರ ನಡೆದ ಫೈನಲ್ ಪಂದ್ಯವು ಪ್ರೇಕ್ಷಕರನ್ನುಮೈದಾನದಲ್ಲಿ  ಬೇರೂರಿಸಿತು. ಎ.ಜೆ. ರಾಯಲ್ಸ್ ನ ಪ್ರಮುಖ ಆಟಗಾರ ಲೋಕೇಶ್ (ಲೋಕಿ ಪುತ್ತೂರು ) ಟೂರ್ನಮೆಂಟ್ನ ಉದ್ದಕ್ಕೂ ಅತ್ಯದ್ಭುತವಾಗಿ ಆಡಿ ತನ್ನ ಸಾಹಸವನ್ನು ತೋರ್ಪಡಿಸಿ ನೆರೆದಿದ್ದ ಪ್ರೇಕ್ಷಕರನ್ನು ಮೂಕ ವಿಸ್ಮಿತರನ್ನಾಗಿ ಮಾಡಿದರು. ಡೇ ಅಂಡ್ ನೈಟ್ ರೂಪದಲ್ಲಿ ನಡೆದ ಟೂರ್ನಮೆಂಟ್ ಅದ್ಭುತವಾಗಿ  ಮುಕ್ತಾಯ ಕಂಡಿತು.
ನೇರ ಪಂದ್ಯಗಳು ಮತ್ತು ಸ್ಕೋರ್‌ಕಾರ್ಡ್ ಅನ್ನು ಪ್ರಸಾರ ಮಾಡಲು ದೊಡ್ಡ ಡಿಜಿಟಲ್ ಪರದೆಯು ಸ್ಥಳದಲ್ಲಿತ್ತು. ಸ್ಥಳಕ್ಕೆ ಬರಲು ಸಾಧ್ಯವಾಗದ ಕ್ರಿಕೆಟ್ ಉತ್ಸಾಹಿಗಳಿಗಾಗಿ ಪಂದ್ಯಗಳನ್ನು M9  ಸ್ಪೋರ್ಟ್ಸ್ ಯೂಟ್ಯೂಬ್‌ನಲ್ಲಿ ನೇರ ಪ್ರಸಾರ ಮಾಡಲಾಯಿತು. ಡ್ಯಾನ್ಸಿಂಗ್ ಅಂಪೈರ್ ಮದನ್ ಮಡಿಕೇರಿ, ದೀಕ್ಷಿತ್ ಮಂಗಳೂರು, ಪ್ರಭಾಕರ್ ಉಜಿರೆ ಮತ್ತು ಸ್ವರೂಪ್ ತೀರ್ಥಹಳ್ಳಿ ಟೂರ್ನಮೆಂಟ್ ನ ತೀರ್ಪುಗಾರರಾಗಿದ್ದರು. ಅರವಿಂದ ಮಣಿಪಾಲ ಮತ್ತು ಸುರೇಶ್ ಭಟ್ ಮುಲ್ಕಿ ವೀಕ್ಷಕ ವಿವರಣೆಯನ್ನು ನೀಡಿದರು.
ಮಹಿಳಾ ತಂಡಗಳ ನಡುವೆ ಕೂಡಾ ರೋಚಕ ಮಹಿಳಾ ಕ್ರಿಕೆಟ್ ಪಂದ್ಯವೂ ನಡೆಯಿತು.
ಪಂದ್ಯಾವಳಿಯ ನಂತರ ಮಾತನಾಡಿದ ಆಯೋಜಕರಲ್ಲಿ ಪ್ರಮುಖರಾದ  ಡಾ. ಶರಣ್ ಜೆ ಶೆಟ್ಟಿ ಭವಿಷ್ಯದಲ್ಲಿ ಪ್ರತಿವರ್ಷವೂ ಕೂಡಾ ಈ ರೀತಿಯ ಟೂರ್ನಮೆಂಟ್ ನಡೆಯಲಿದೆ ಮತ್ತು ಹೆಚ್ಚಿನ ತಂಡಗಳ ಭಾಗವಹಿಸುವಿಕೆಗಾಗಿ ನಾವು ಆಶಿಸುತ್ತೇವೆ ಎಂದರು. ಡಾಕ್ಟರ್ ಸಾಕ್ಷಾತ್ ರೈ ಟೂರ್ನಮೆಂಟ್ ಯಶಸ್ವಿಯಾಗಿ ನಡೆಯುವಲ್ಲಿ ಸಹಕರಿಸಿದರು.
ಸುರೇಶ್ ಭಟ್ ಮೂಲ್ಕಿ
ಸ್ಪೋರ್ಟ್ಸ್ ಕನ್ನಡ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

19 − 12 =

Latest news

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...
- Advertisement -spot_imgspot_img

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

Must read

- Advertisement -spot_imgspot_img

You might also likeRELATED
Recommended to you