15.6 C
London
Tuesday, May 14, 2024
Homeಕ್ರಿಕೆಟ್ಶೀಘ್ರದಲ್ಲೇ ಬರಲಿದೆ ಜಿ ಎಸ್ ಬಿಗಳ ಬಹು ನಿರೀಕ್ಷಿತ ಹರಾಜು ಆಧಾರಿತ ಕ್ರಿಕೆಟ್ ಟೂರ್ನಮೆಂಟ್...

ಶೀಘ್ರದಲ್ಲೇ ಬರಲಿದೆ ಜಿ ಎಸ್ ಬಿಗಳ ಬಹು ನಿರೀಕ್ಷಿತ ಹರಾಜು ಆಧಾರಿತ ಕ್ರಿಕೆಟ್ ಟೂರ್ನಮೆಂಟ್ ‘ವೊಳಲಂಕೆ ಪ್ರೀಮಿಯರ್ ಲೀಗ್’!!!

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಮುಲ್ಕಿ- ಜಿ. ಎಸ್. ಬಿ ಕ್ರಿಕೆಟ್ ಪ್ರಿಯರಿಗೆ ಸಂಭ್ರಮದ ಸುದ್ದಿ. ಈ ಋತುವಿನ ಅತ್ಯಂತ ದೊಡ್ಡ ಕ್ರಿಕೆಟ್ ಹಬ್ಬ ಮುಲ್ಕಿಯಲ್ಲಿ ಶುರುವಾಗಲಿದೆ.
ವೊಳಲಂಕೆ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಇವರು ಅಕ್ಟೋಬರ್ ತಿಂಗಳಿನಲ್ಲಿ  ಜಿ ಎಸ್ ಬಿ ಗಳ   ಶ್ರೀಮಂತ ಕ್ರಿಕೆಟ್ ಲೀಗ್ ಪಂದ್ಯಾವಳಿ ಆಯೋಜಿಸಲು ಮುಂದಾಗಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಸಂಭ್ರಮ ಮನೆ ಮಾಡಿದೆ.  ಜಿ ಎಸ್ ಬಿ ಕ್ರಿಕೆಟ್ ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ವೊಳಲಂಕೆ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಹಗಲು ರಾತ್ರಿ  ಪಂದ್ಯಾಕೂಟ ಆಯೋಜಿಸಲು ಹಸಿರು ನಿಶಾನೆ ತೋರಿಸಿದೆ. ಜಿ. ಎಸ್. ಬಿ ಕ್ರಿಕೆಟ್ ಇತಿಹಾಸದಲ್ಲಿ ಇದೊಂದು ಮಹತ್ವದ ಮೈಲಿಗಲ್ಲು.
ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್ ಬಿ) ಸಮಾಜದ ಇತಿಹಾಸದಲ್ಲಿ  ಐಪಿಎಲ್ ಮಾದರಿಯಲ್ಲಿ ವಿಪಿಎಲ್ ಕ್ರಿಕೆಟ್ ಟೂರ್ನಮೆಂಟ್-2023 ನ್ನು ಹಮ್ಮಿಕೊಳ್ಳಲಾಗಿದೆ.  ಇದು ಹರಾಜು ಆಧಾರಿತ ಕ್ರಿಕೆಟ್ ಪಂದ್ಯಾವಳಿಯಾಗಿರುತ್ತೆ. ವಿಪಿಎಲ್‌ನಲ್ಲಿ ಭಾಗವಹಿಸುವ ತಂಡಗಳಿಗೆ ಆಟಗಾರರನ್ನು ಬಿಡ್ಡಿಂಗ್ ಮೂಲಕ ಖರೀದಿಸಲಾಗುವುದು. ಆಟಗಾರರನ್ನು ಆಯ್ಕೆ ಮಾಡಲು ಹರಾಜು ಆಯೋಜಿಸಲಾಗುವುದು.  ಮುಲ್ಕಿಯಲ್ಲಿರುವ ವಿಜಯಾ ಕಾಲೇಜಿನ  ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಸರಣಿಯಲ್ಲಿ ಒಟ್ಟು ಹದಿನಾರು ತಂಡಗಳು ಭಾಗವಹಿಸಲಿವೆ. ವೊಳಲಂಕೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್-2023  ಅಕ್ಷರಶ: ಐಪಿಎಲ್ ವಾತಾವರಣವನ್ನೇ ಹೊತ್ತು ತರಲಿದೆ.  ಟೂರ್ನಮೆಂಟ್ ನ ದಿನಾಂಕಗಳನ್ನು ಶೀಘ್ರದಲ್ಲೇ ದೃಢೀಕರಿಸಲಾಗುವುದು.
ಆಯೋಜಕರಲ್ಲಿ ಪ್ರಮುಖರಾದ ಶ್ರೀಯುತ ರಮಾನಾಥ ಪೈ ಎಸ್. ವಿ. ಟಿ ಮುಲ್ಕಿ ಇವರ ಹೇಳಿಕೆ ಪ್ರಕಾರ ಈಗಾಗಲೇ ಮುಂಬೈ, ಕೊಚ್ಚಿನ್, ಹೈದರಾಬಾದ್, ಮಂಗಳೂರು, ಕೋಟೇಶ್ವರ, ಕೆದಿಂಜೆ ಕಾರ್ಕಳದ  ತಂಡಗಳು ಟೂರ್ನಮೆಂಟ್ ಗೆ ತಮ್ಮ ತಂಡಗಳನ್ನು ನೊಂದಾಯಿಸಿವೆ. . ಈ ಲೀಗ್‌ನಲ್ಲಿ ಒಟ್ಟು ಹದಿನಾರು ತಂಡಗಳು ಭಾಗವಹಿಸಲಿವೆ. ವಿಪಿಎಲ್ ಕ್ರಿಕೆಟ್ ಟೂರ್ನಮೆಂಟ್ ಗೆಲ್ಲುವ ತಂಡಕ್ಕೆ ಆಕರ್ಷಕ ಟ್ರೋಫಿಯೊಂದಿಗೆ ನಗದು ದೊರೆಯಲಿದೆ. ಇದರೊಂದಿಗೆ ಪ್ರತಿ ಪಂದ್ಯದ ಪಂದ್ಯಶ್ರೇಷ್ಟ, ಫೈನಲ್ ಪಂದ್ಯದ ಪಂದ್ಯಶ್ರೇಷ್ಟ, ಸರಣಿ ಶ್ರೇಷ್ಠ ಪ್ರಶಸ್ತಿಗಳೊಂದಿಗೆ ಇತರ ವಿಶೇಷ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು.
ಈ ಲೀಗ್ ನಲ್ಲಿ ಫ್ರ್ಯಾಂಚೈಸಿ ಮಾಲೀಕರಾಗಲು ಬಯಸುವವರು ತಮ್ಮ ಹೆಸರನ್ನು ನೋಂದಾಯಿಸಲು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳ ವಿವರ ಇಲ್ಲಿದೆ.
ಪ್ರೀತಮ್ ಹೆಗಡೆ- 9945354052
ಶರತ್ ಪ್ರಭು-9538728375
ಸ್ಪೋರ್ಟ್ಸ್ ಕನ್ನಡದ ಪ್ರವರ್ತಕರು ಕೆ ಆರ್ ಕೆ ಆಚಾರ್ಯ ಮಾತನಾಡಿ  ವಿಪಿಎಲ್ ಕ್ರಿಕೆಟ್ ಟೂರ್ನಮೆಂಟ್ ಅದ್ದೂರಿಯಾಗಿ ನಡೆದು ಸಹಸ್ರಾರು ಕ್ರೀಡಾ ಪ್ರೇಮಿಗಳನ್ನು ರಂಜಿಸಲು ಗಮನ ಸೆಳೆಯುವಲ್ಲಿ ಯಶಸ್ವಿಯಾಗಲಿ ಎಂದಿದ್ದಾರೆ. ಆಯೋಜನೆ ಮಾಡುವ ಸಂಘಟಕರಿಗೆ ಅಭಿನಂದನೆ ಎಂದರು.
ವೊಳಲಂಕೆ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಜಿ ಎಸ್ ಬಿ  ಟೆನಿಸ್ ಕ್ರಿಕೆಟ್​ನಲ್ಲಿ ಹೊಸದನ್ನು ಮುಂಚೂಣಿಗೆ ತರಲು ಉತ್ಸುಕರಾಗಿದ್ದಾರೆ. ಇದೀಗ ಮುಲ್ಕಿಯಲ್ಲಿ ಆರಂಭವಾಗುವ  ಜಿಎಸ್ ಬಿ ಸಮುದಾಯದ  ಪ್ರಮುಖ ಕ್ರಿಕೆಟ್ ಟೂರ್ನಿಯನ್ನು ನೋಡಿ ಆನಂದಿಸುವ ಕಾಲ ಕೂಡಿ ಬಂದಿದೆ.
ಶುರುವಾಗಲಿ ವಿಪಿಎಲ್ ಸಂಭ್ರಮ!
ಲೇಖಕರು
ಸುರೇಶ ಭಟ್, ಮುಲ್ಕಿ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

7 + 7 =