ಭರವಸೆಯ ಬೆಳಕುಅಗಲಿದ ಕ್ರಿಕೆಟಿಗ ಸಿ.ಎ.ಮಲ್ಲೇಶ್ ಬಂಗೇರ ಸ್ಮರಣಾರ್ಥ ಶುದ್ಧ ಕುಡಿಯುವ ನೀರಿನ ಘಟಕ...

ಅಗಲಿದ ಕ್ರಿಕೆಟಿಗ ಸಿ.ಎ.ಮಲ್ಲೇಶ್ ಬಂಗೇರ ಸ್ಮರಣಾರ್ಥ ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ

-

- Advertisment -spot_img
ಉದ್ಯಾವರ-ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್ &ಕಲ್ಚರಲ್ ಕ್ಲಬ್ ಪಿತ್ರೋಡಿ ಇವರ ನೇತೃತ್ವದಲ್ಲಿ ಇತ್ತೀಚಿಗೆ ನಿಧನರಾದ ಸಂಸ್ಥೆಯ ಮಾಜಿ ಅಧ್ಯಕ್ಷ ಮತ್ತು ಸರಳ ಸಜ್ಜನಿಕೆಯ ವ್ಯಕ್ತಿತ್ವದ ಖ್ಯಾತ ಕ್ರಿಕೆಟಿಗ ಸಿ.ಎ.ಮಲ್ಲೇಶ್ ಬಂಗೇರ ಇವರ ಸ್ಮರಣಾರ್ಥ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ ನಡೆಯಿತು.
ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ಅಳವಡಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ದಿ.ಮಲ್ಲೇಶ್ ರವರ ತಾಯಿ ಬೇಬಿ ಬಂಗೇರ ಲೋಕಾರ್ಪಣೆಗೊಳಿಸಿದರು.ಇದೇ ಸಂದರ್ಭ ದಿ.ಮಲ್ಲೇಶ್ ಬಂಗೇರ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ,”ಚಿಕ್ಕ ಪ್ರಾಯದಲ್ಲಿ ಮಕ್ಕಳಿಗೆ ಹಿರಿಯರು ಸಂಸ್ಕಾರದ ಬಗ್ಗೆ ಪಾಠ ಕಲಿಸಬೇಕು.ಇದರಿಂದ ಮಕ್ಕಳು ತಪ್ಪು ದಾರಿಗೆ ಹೋಗುವುದನ್ನು ತಪ್ಪಿಸಲು ಸಾಧ್ಯ.ಯುವಕರು ಮಧ್ಯವ್ಯಸನಿಯಾಗದೆ ಸಮಾಜದ ಅಭಿವೃದ್ಧಿಯತ್ತ ಚಿತ್ತವಹಿಸಬೇಕು.ಶಿಸ್ತು,ಸರಳತೆಯಿಂದ ಜೀವನ‌ ನಡೆಸಿ ನಮ್ಮನ್ನಗಲಿದ ದಿ‌.ಮಲ್ಲೇಶ್ ಎಲ್ಲ ಯುವಕರಿಗೆ ಮಾದರಿ” ಎಂದರು.
ಈ ಸಂದರ್ಭ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಜಿತೇಂದ್ರ ಶೆಟ್ಟಿ, ಸರಕಾರಿ‌ ಪ್ರೌಢಶಾಲೆಯ ನಿಕಟಪೂರ್ವ ಮುಖ್ಯೋಪಾಧ್ಯಾಯಿನಿ ಉಮಾ ಕೃಷ್ಣ, ತಂಡದ ಗೌರವಾಧ್ಯಕ್ಷ ಗೋಪಾಲ‌ ಅಮೀನ್,ವೆಂಕಟರಮಣ ಭಜನಾ ಮಂದಿರದ ಅಧ್ಯಕ್ಷ ಗಂಗಾಧರ ಕರ್ಕೇರ,ಪ್ರಮುಖರಾದ ದಿವಾಕರ ಕುಂದರ್,ಅಧ್ಯಕ್ಷರಾದ ನವೀನ್ ಸಾಲ್ಯಾನ್,ವಿಜಯ್ ಕೋಟ್ಯಾನ್,ಪ್ರವೀಣ್ ಪಿತ್ರೋಡಿ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ವಿನಯ್ ಉದ್ಯಾವರ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು ಹಾಗೂ ಉಮೇಶ್ ಕರ್ಕೇರ ವಂದಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 + two =

Latest news

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...
- Advertisement -spot_imgspot_img

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

Must read

- Advertisement -spot_imgspot_img

You might also likeRELATED
Recommended to you