ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಶಿಕ್ಷಣದ ಜೊತೆಗೆ ವೃತ್ತಿಪರ ಆಟದಲ್ಲಿ ತೊಡಗಿಸಿಕೊಳ್ಳಲು ಟಿ.ಸಿ.ಎ ಉಡುಪಿ ಶಾಲಾ-ಕಾಲೇಜು ಮಟ್ಟದ...

ಶಿಕ್ಷಣದ ಜೊತೆಗೆ ವೃತ್ತಿಪರ ಆಟದಲ್ಲಿ ತೊಡಗಿಸಿಕೊಳ್ಳಲು ಟಿ.ಸಿ.ಎ ಉಡುಪಿ ಶಾಲಾ-ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟ ಆಯೋಜನೆ

-

- Advertisment -spot_img
ಉಡುಪಿ-ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಜಿಲ್ಲೆ ಇವರು ಶಾಲಾ ಕಾಲೇಜು ಮಕ್ಕಳಿಗಾಗಿ ನಿಗದಿತ 10  ಓವರುಗಳ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟನ್ನು ಹಮ್ಮಿಕೊಂಡಿದ್ದಾರೆ.
ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಪದವಿಪೂರ್ವ ಕಾಲೇಜು ವಿಭಾಗ ಹಾಗೂ ಪದವಿ ಕಾಲೇಜು ವಿಭಾಗ ಈ ರೀತಿ 4 ವಿಭಾಗಗಳಲ್ಲಿ ಪಂದ್ಯಾಕೂಟವು ನಡೆಯಲಿದೆ. ಉಡುಪಿ ಜಿಲ್ಲೆಯ ಶಾಲಾ ಕಾಲೇಜು ತಂಡಗಳಿಗೆ ಇದರಲ್ಲಿ ಸ್ಪರ್ಧಿಸುವ ಅವಕಾಶವನ್ನು ನೀಡಲಾಗಿದೆ.  ಅಕ್ಟೋಬರ್ 2023 ರಲ್ಲಿ ಉಡುಪಿ ಜಿಲ್ಲೆಯ ಬೇರೆ ಬೇರೆ ತಾಲೂಕ್ ಮೈದಾನಗಳಲ್ಲಿ ಈ ಟೂರ್ನಮೆಂಟ್ ನಡೆಯಲಿರುವುದು. ಭಾಗವಹಿಸುವ ತಂಡಗಳಿಗೆ ಸಂಪೂರ್ಣವಾಗಿ ಉಚಿತ ಪ್ರವೇಶ ಮತ್ತು ಯೂಟ್ಯೂಬ್ ಲೈವ್ ಕೂಡಾ ಇರಲಿದೆ.
ಟಿ. ಸಿ. ಎ ಉಡುಪಿ ಶಾಲಾ -ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾವಳಿ ಇದು ಉದಯೋನ್ಮುಖ ಕ್ರಿಕೆಟಿಗರಿಗೆ ಕ್ರಿಕೆಟ್ ಆಡಲು ಮತ್ತು ವೃತ್ತಿಪರ ಕ್ರಿಕೆಟ್‌ಗೆ ತಮ್ಮ ಮೊದಲ ಹೆಜ್ಜೆಗಳನ್ನು ಇಡಲು ವೇದಿಕೆಯನ್ನು ಒದಗಿಸುತ್ತದೆ. ಇದು  ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ನ ಸ್ಟ್ಯಾಂಡರ್ಡ್ ಕ್ರಿಕೆಟ್ ಪಂದ್ಯಾವಳಿಯಾಗಿದೆ. ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ಜರಗುವ ಈ   ಪಂದ್ಯಾವಳಿಯು  ಹೆಚ್ಚಿನ ಪ್ರಮುಖ ಶಾಲಾ ಕಾಲೇಜು ತಂಡಗಳ ಅತ್ಯುತ್ತಮ ಯುವ ಪ್ರತಿಭೆಗಳನ್ನು ಒಳಗೊಂಡಿರುತ್ತದೆ.   ಟಿ. ಸಿ. ಎ  ನಡೆಸುವ T10 ಪಂದ್ಯಾವಳಿಯ ಸ್ವರೂಪವು ಯುವ ಪ್ರತಿಭೆಗಳಿಗೆ ಒಂದೇ ವೇದಿಕೆಯಲ್ಲಿ ಆಡಲು ಮತ್ತು  ಶಿಕ್ಷಣದ  ಜೊತೆಗೆ  ವೃತ್ತಿಪರ ಕ್ರಿಕೆಟ್‌ಗೆ ದಾರಿ ಮಾಡಿಕೊಡಲು ವೇದಿಕೆಯನ್ನು ಒದಗಿಸುತ್ತದೆ.
ಟಿ. ಸಿ. ಎ ಉಡುಪಿ  ಆಯೋಜನೆಯ ಈ ಟೂರ್ನಮೆಂಟ್ ಗ್ರಾಸ್ ರೂಟ್ ಲೆವೆಲ್ ನಲ್ಲಿ ಅತ್ಯುತ್ತಮ ಕ್ರಿಕೆಟ್ ಪ್ರತಿಭೆಗಳನ್ನು ಪತ್ತೆಹಚ್ಚಲು ಮತ್ತು ಅವರ ನಿಜವಾದ ಸಾಮರ್ಥ್ಯವನ್ನು ಹೆಚ್ಚಿಸಲು ಅವರಿಗೆ ನಿರ್ದೇಶನವನ್ನು ನೀಡುವ ಪರಿಣಾಮಕಾರಿ ಆರಂಭದ ಹಂತ ಆಗಿದೆ  ಎಂದು ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ   ಗೌತಮ್ ಶೆಟ್ಟಿ ಹೇಳಿದ್ದಾರೆ.
ಯುವ ಕ್ರಿಕೆಟಿಗರಿಗೆ ವೃತ್ತಿಪರ ಆಟದಲ್ಲಿ ತೊಡಗಿಸಿಕೊಳ್ಳಲು  ಈ ಕ್ರಿಕೆಟ್ ಟೂರ್ನಮೆಂಟ್  ಪರಿಪೂರ್ಣ ಮೆಟ್ಟಿಲು; ಇದು ನಾಳಿನ ಕ್ರಿಕೆಟ್ ತಾರೆಗಳನ್ನು ನಿರ್ಮಿಸುವ ಪಂದ್ಯಾವಳಿಯಾಗಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eight + fourteen =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you