16.4 C
London
Monday, May 13, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕ್ರಿಕೆಟ್ ಲೋಕದಲ್ಲಿ ಮಿಂಚುತ್ತಿರುವ ವೈಷ್ಣವಿ ಕಡಿಯಾಳಿ

ಕ್ರಿಕೆಟ್ ಲೋಕದಲ್ಲಿ ಮಿಂಚುತ್ತಿರುವ ವೈಷ್ಣವಿ ಕಡಿಯಾಳಿ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ವೈಷ್ಣವಿ ಆಚಾರ್ಯ ಕಡಿಯಾಳಿ ಎನ್ನುವ ಉಡುಪಿ  ಮೂಲದ ಹುಡುಗಿ  ಬೆಂಗಳೂರಿನ ಜಸ್ಟ್ ಕ್ರಿಕೆಟ್  ಅಕಾಡೆಮಿಯಲ್ಲಿ ಕ್ರಿಕೆಟ್  ತರಬೇತಿಯನ್ನು ಪಡೆಯುತ್ತಿದ್ದು ಬೌಲಿಂಗ್ ನಲ್ಲಿ ಮಿಂಚುತ್ತಿದ್ದಾರೆ.
ಬೆಂಗಳೂರು ಓಕೆಶನಲ್ಸ್  ತಂಡದ ಪರವಾಗಿ ಆಡುವ ಇವರು  ಬೌಲಿಂಗ್ ನಲ್ಲಿ ತಮ್ಮ ತಂಡಕ್ಕೆ ಪ್ರಧಾನ ಆಧಾರಸ್ತಂಭವಾಗಿದ್ದಾರೆ. ಇತ್ತೀಚೆಗೆ ಕೆ ಎಸ್ ಸಿ ಎ  ಆಯೋಜಿಸಿದ  ಜೆಎಸ್ಎಸ್  ಮೈದಾನದಲ್ಲಿ ನಡೆದ ಪಂದ್ಯಾಕೂಟದಲ್ಲಿ ಅತ್ಯುತ್ತಮವಾದ ಬೌಲಿಂಗ್ ದಾಳಿಯನ್ನು ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ.
ಮಿನರ್ವ ತಂಡದ ವಿರುದ್ಧ ಮೊದಲ ಲೀಗ್ ಪಂದ್ಯದಲ್ಲಿ  ತಾನು ಎಸೆದಂತ 6 ಓವರುಗಳಲ್ಲಿ 33ಕ್ಕೆ ಐದು ವಿಕೆಟ್  ಪಡೆದುಕೊಂಡು ಅತ್ಯುತ್ತಮ ಬೌಲರ್ ಹೆಗ್ಗಳಿಕೆಗೆ ಪಾತ್ರವಾಗಿದ್ದರು. ತಾನು ಆಡಿದ ಎರಡನೇ ಪಂದ್ಯದಲ್ಲಿ  3 ಓವರುಗಳಲ್ಲಿ ಒಂದು ವಿಕೆಟ್ ಪಡಕೊಂಡು ವಿಜಯದ ರೂವಾರಿಯೂ ಈಕೆ ಆಗಿದ್ದಾರೆ. ಮೂರನೇ ಪಂದ್ಯದಲ್ಲಿ ನಿಯಂತ್ರಣಕಾರಿ ಬೌಲಿಂಗ್ ನಡೆಸಿದ್ದರು. ಬೆಂಗಳೂರು ಓಕೆಶನಲ್ಸ್ ನ್ನು ಪ್ರತಿನಿಧಿಸುವ ವೈಷ್ಣವಿ  ಕಡಿಯಾಳಿಯವರ ತಂಡ  ಇದೀಗ ನಾಕೌಟ್ ಸುತ್ತಿಗೆ ಅರ್ಹತೆ ಪಡೆದಿದೆ. ತಮ್ಮ ತಂಡವನ್ನುಈ ಹಂತದ ವರೆಗೆ ಕರೆದೊಯ್ದ ಕೀರ್ತಿ ವೈಷ್ಣವಿ ಗೆ ಸಲ್ಲುತ್ತದೆ.
ಇಷ್ಟೇ ಅಲ್ಲದೆ  ಪ್ರಸ್ತುತ ಸನ್ನಿವೇಶದಲ್ಲಿ, ಸೆಪ್ಟೆಂಬರ್ ಮೊದಲ ವಾರದಲ್ಲಿ ನಡೆಯುವ ಸೆಲೆಕ್ಷನ್ ಟ್ರಯಲ್ಸ್ ಫಾರ್ ಅಂಡರ್ 19 ಗೆ ಸಿದ್ದತೆಯನ್ನು ನಡೆಸುತ್ತಿದ್ದಾರೆ.
ಈ ಮೊದಲು ಕಟಪಾಡಿಯ ಕೆ ಆರ್ ಎಸ್ ಅಕಾಡೆಮಿ ಮತ್ತು ಉಡುಪಿ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ತರಬೇತಿಯನ್ನು ಪಡೆಯುತ್ತಿದ್ದ ವೈಷ್ಣವಿ ಕಡಿಯಾಳಿ ಅವರ ಪ್ರತಿಭೆಯನ್ನು  ಶಾಲಾ ಮತ್ತು ಸ್ಥಳೀಯ ಕ್ರೀಡಾಕೂಟಗಳಲ್ಲಿ ಗಮನಿಸಲಾಯಿತು. ಕ್ರಿಕೆಟ್ ನತ್ತ ಪ್ರೇರಣೆ ಪಡೆದು  ಕ್ರೀಡಾ ವೃತ್ತಿಯನ್ನು ತೆಗೆದುಕೊಳ್ಳುವ ಮೂಲಕ ತನ್ನ ಕೌಶಲ್ಯವನ್ನು ಸಾಬೀತು ಪಡಿಸಲು ಬೆಂಗಳೂರಿನ ಜಸ್ಟ್ ಕ್ರಿಕೆಟ್  ಅಕಾಡೆಮಿ ಸೇರಿ ವೃತ್ತಿಪರ ತರಬೇತಿಯನ್ನು  ಬೌಲಿಂಗ್ ಕೋಚ್ ಆದ ಮೊಹಮ್ಮದ್ ಆಲಿ ಮತ್ತು ನೂರುದ್ದೀನ್ ಇವರುಗಳ ಮಾರ್ಗದರ್ಶನದಡಿಯಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.  ತನ್ನ ಕನಸನ್ನು ಸಾಧಿಸಲು ತನ್ನ ತನ್ಮನಗಳನ್ನು ಸಮರ್ಪಿಸಿ ನಿಯಮಿತ  ಅಭ್ಯಾಸವನ್ನು ನಡೆಸಿ ತನ್ನ ಕನಸನ್ನು ಮುಂದುವರೆಸುತ್ತಿದ್ದಾರೆ.
ವೈಷ್ಣವಿ ಕಡಿಯಾಳಿ ಎನ್ನುವ ಪ್ರತಿಭೆ ಇದೇ ರೀತಿ ಮುಂದುವರೆದು ಶ್ಲಾಘನೀಯ ಪ್ರದರ್ಶನ ನೀಡಿ ಉಡುಪಿಯನ್ನು ಹೆಮ್ಮೆಪಡುವಂತೆ ಮಾಡಲಿ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

4 × five =