ಕ್ರಿಕೆಟ್ಚೆಸ್, ಕ್ರಿಕೆಟ್ ಮತ್ತು ಅನಿಶ್ಚಿತತೆ!

ಚೆಸ್, ಕ್ರಿಕೆಟ್ ಮತ್ತು ಅನಿಶ್ಚಿತತೆ!

-

- Advertisment -spot_img
ಕ್ರಿಕೆಟ್ ಮತ್ತು ಚೆಸ್ ಆಟದಲ್ಲಿ ಪ್ರೆಡಿಕ್ಷನ್ ನಡೆಯುವುದಿಲ್ಲ! ಬದುಕಿನಲ್ಲಿ ಕೂಡ! 
ಎಷ್ಟೋ ಬಾರಿ ನಮ್ಮ ತಪ್ಪು ನಡೆಗಳೆ ನಮ್ಮನ್ನು ಗೆಲ್ಲಿಸುತ್ತವೆ! 
———————————————————
ಚೆಸ್ ಮತ್ತು ಕ್ರಿಕೆಟ್ ಆಟಗಳು ಬಹಳಷ್ಟು ವಿಶೇಷತೆಯನ್ನು ಪಡೆದವುಗಳು. ಅದಕ್ಕೆ ಕಾರಣ ಏನೆಂದರೆ ಆ ಆಟಗಳ ಒಳಗೆ ಅಡಗಿರುವ ಅನಿಶ್ಚಿತತೆ ಮತ್ತು ವಿಕಲ್ಪಗಳು. ಅವು ನಮ್ಮ ಬದುಕಿನ ಪ್ರತಿಫಲನದ ಕನ್ನಡಿಗಳು ಕೂಡ ಆಗಿವೆ!
ಜಗತ್ತಿನ ಬಲಾಢ್ಯ ಕ್ರಿಕೆಟ್ ತಂಡವಾದ ಭಾರತವನ್ನು ಕ್ರಿಕೆಟ್ ಶಿಶುಗಳಾದ ಬಾಂಗ್ಲಾ ದೇಶವು  ಸೋಲಿಸಿದ ಉದಾಹರಣೆ ಇಲ್ಲವೇ?
ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ, ಅದು ಹೀಗೆ  ಆಗಬೇಕು, ಹಾಗೆಯೇ ಆಗಬೇಕು ಎಂದು! ಆದರೆ ಅದು ಹಾಗೆ ಆಗುವುದಿಲ್ಲ! ಹೀಗೆ ಕೂಡ ಆಗಲೇ ಬೇಕು ಅಂದಿಲ್ಲ! ಯಾಕೆಂದರೆ ವಿಧಿಯ ನಿರ್ಧಾರ ಬೇರೆಯೇ ಇರುತ್ತದೆ!
ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ ಅವನು/ ಅವಳು ಹೀಗೇ ಇರಬೇಕು, ಹಾಗೆಯೇ ಇರಬೇಕು ಎಂದು!  ಅವನು/ ಅವಳು ನೀವು ಅಂದುಕೊಂಡ ಹಾಗೆಯೇ  ಯಾಕಿರಬೇಕು? ಅವನು ಅವನೇ! ಅವಳು ಅವಳೇ!
ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ ಅದೊಂದು
ಘಟನೆಯು ನನ್ನ ಜೀವನದಲ್ಲಿ ನಡೆಯದೇ ಹೋಗಿದ್ದರೆ ಚೆನ್ನಾಗಿತ್ತು ಎಂದು! ಆದ್ರೆ ಸ್ವಲ್ಪ ಕೂತು ಯೋಚನೇ ಮಾಡಿ. ಅದೇ ಘಟನೆ ನಿಮಗೆ ಲಾಂಗ್ ರೆಂಜಲ್ಲಿ ಅದ್ಭುತ ಫಲಿತಾಂಶ ಕೊಟ್ಟಿರುತ್ತದೆ!
ಎಷ್ಟೋ ಬಾರಿ ಅಂದುಕೊಳ್ಳುತ್ತೇವೆ, ಅದೊಂದು ಸೋಲು ನನಗೆ  ಬಾರದೆ ಹೋಗಿದ್ದರೆ ಚೆನ್ನಾಗಿತ್ತು ಎಂದು! ಜಗತ್ತಿನ ಯಾವುದೇ ಆಟದಲ್ಲಿ ಎಲ್ಲರೂ, ಎಲ್ಲಾ ಕಾಲಕ್ಕೂ ಗೆಲ್ಲಲು ಸಾಧ್ಯವಿದೆಯೇ? ಸೋಲು ನಮಗೆ ಒಂದಲ್ಲ ಒಂದು ಗಟ್ಟಿ ಅನುಭವ ಕೊಟ್ಟಿರುತ್ತದೆ!
ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ, ಅದೊಂದು ನಿರ್ಧಾರ ತಪ್ಪಾಗಿ ಹೋಯಿತಲ್ಲ ಎಂದು! ಆದ್ರೆ ನಿರ್ಧಾರ ಸರಿಯಾ ತಪ್ಪಾ ಎಂದು ಗೊತ್ತಾಗುವುದು ಫಲಿತಾಂಶ ಬಂದ ನಂತರ ಅಲ್ವಾ!
ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ ಅವನನ್ನು ಅಥವಾ ಅವಳನ್ನು ನಂಬಿ ಮೋಸಹೋದೆ ಎಂದು! ಆದ್ರೆ ನೀವು ಸೋಲಲು ಕಾರಣ ನೀವು ಅಲ್ಲ. ತಪ್ಪು ವ್ಯಕ್ತಿಗಳ ಮೇಲೆ ನೀವು ಇಟ್ಟ ಅತಿಯಾದ ನಂಬಿಕೆ! ಇದು ಗೊತ್ತಾದರೆ ನೀವು ಮುಂದೆ ಜಾಗ್ರತೆ ವಹಿಸುವುದಿಲ್ಲವೆ?
ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ ನನ್ನನ್ನು ಯಾರೂ ಅರ್ಥ ಮಾಡಿಕೊಳ್ಳುವುದಿಲ್ಲ ಎಂದು! ಆದ್ರೆ ನಮ್ಮನ್ನು ತುಂಬಾ ಪ್ರೀತಿ ಮಾಡುವವರು ಮತ್ತು ಅರ್ಥ ಮಾಡಿಕೊಳ್ಳುವವರು ನಮ್ಮ ಪಕ್ಕದಲ್ಲಿಯೇ ಇರುತ್ತಾರೆ! ನಮ್ಮನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಬಯಸುವ ನಾವು ಉಳಿದವರನ್ನು ಎಷ್ಟು ಅರ್ಥ ಮಾಡಿಕೊಂಡಿದ್ದೇವೆ?
ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ ನನ್ನ ಅದೃಷ್ಟ,  ಗ್ರಹಚಾರವೇ ಸರಿ ಇಲ್ಲ ಎಂದು! ಆದರೆ ನಮ್ಮ ಗೇಮ್ ಪ್ಲಾನ್ ಮತ್ತು ಪ್ರಯತ್ನದಲ್ಲಿ ತಪ್ಪುಗಳು ಇರುತ್ತವೆ. ಅದನ್ನು ಮೊದಲು ಸರಿ ಪಡಿಸಬೇಕು ತಾನೇ?
ಎಷ್ಟೋ ಬಾರಿ ಅಂದುಕೊಳ್ಳುತ್ತೇವೆ ಅವನು ಅಥವ ಅವಳು ನನಗೆ ಸಪೋರ್ಟ್ ಮಾಡಲಿಲ್ಲ ಎಂದು! ಆದರೆ ಯೋಚನೆ ಮಾಡಿ, ತನ್ನ ಮೇಲೆ ಭರವಸೆ ಇಡದೆಯೆ ಬೇರೆಯವರನ್ನು ನಾವು ಹೆಚ್ಚು ಅವಲಂಬನೆ ಮಾಡಿದ್ದು ತಪ್ಪಲ್ಲವೇ?
ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ ವಿರಾಟ್ ಕೊಹ್ಲಿ ಹಾಗೆ ಮಾಡಿದ್ದು ತಪ್ಪು. ಹೀಗೆ ಮಾಡಬೇಕಿತ್ತು ಎಂದು!  ಆದರೆ ಗಮನಿಸಿ ಕೊಹ್ಲಿ ಆ ನಿರ್ಧಾರ  ತೆಗೆದುಕೊಂಡದ್ದು ಕ್ರಿಕೆಟ್ ಗ್ರೌಂಡಲ್ಲಿ! ಕೋಟಿ ಕೋಟಿ ಜನರ ಮುಂದೆ ಮತ್ತು ನೂರಾರು ಟಿವಿ ಕ್ಯಾಮೆರಾಗಳ ಎದುರು! ಆಗ ಅವನಿಗೆ ಗೈಡ್ ಮಾಡಲು ಅಲ್ಲಿ ಯಾರಿದ್ದರು?
ಎಷ್ಟೋ ಬಾರಿ ಅಂದುಕೊಳ್ಳುತ್ತೇವೆ ಅವಳು ಅವನನ್ನು ಯಾಕೆ ಮದುವೆ ಆದಳು? ಅವನು ಅವಳನ್ನು ಯಾಕೆ ಮದುವೆ ಆದ? ಅದು ಅವರವರ ಖಾಸಗಿ ಬದುಕು. ಪ್ರತೀ ಒಬ್ಬರ ಆದ್ಯತೆಗಳು ಬೇರೆ ಬೇರೆಯೇ ಇರುತ್ತವೆ. ಎಲ್ಲರೂ ನಮ್ಮ ಹಾಗೆ ಯಾಕೆ ಯೋಚನೆ ಮಾಡಬೇಕು? ಅವರನ್ನು ಪ್ರಶ್ನೆ ಮಾಡಲು ನಾವು ಯಾರು?
ಎಷ್ಟೋ ಬಾರಿ ಒಂದು ರಿಯಾಲಿಟಿ ಶೋ ಅಥವಾ ಸ್ಪರ್ಧೆ ಮುಗಿದಾಗ ನಾವು ಹೇಳುತ್ತೇವೆ ಏನೆಂದರೆ ತೀರ್ಪುಗಾರರು ಅನ್ಯಾಯವನ್ನು  ಮಾಡಿದರು ಎಂದು! ಆದರೆ ಅವರ ಮುಂದೆ ಹಲವು ಮಾನದಂಡ ಇರುತ್ತದೆ ಮತ್ತು ಸ್ಕೋರ್ ಶೀಟ್ ಇರುತ್ತದೆ ಎಂಬುದನ್ನು ನಾವು ಮರೆತಿರುತ್ತೇವೆ. ಒಂದು ಸ್ಪರ್ಧೆ ನಾವು ವೀಕ್ಷಕರಾಗಿ ನೋಡುವುದಕ್ಕೂ, ತೀರ್ಪುಗಾರನಾಗಿ ನೋಡುವುದಕ್ಕೂ ಅಜಗಜಾಂತರ ವ್ಯತ್ಯಾಸ ಇರುತ್ತದೆ ಎಂದು ನಮಗೆ ಅರ್ಥ ಆದರೆ ಎಷ್ಟೋ ನೋವುಗಳು ಕಡಿಮೆ ಆಗುತ್ತವೆ.
ಒಟ್ಟಿನಲ್ಲಿ ನಾನು ಹೇಳಲು ಹೊರಟದ್ದು ಏನೆಂದರೆ ನಮ್ಮ ಬದುಕು ಇದೇ ರೀತಿಯ ಅನಿಶ್ಚಿತತೆಯ ಮೂಟೆ! ಇಲ್ಲಿ ಕೆಲವು ಸಂಗತಿಗಳು ನಾವು ಪ್ರೆಡಿಕ್ಟ್  ಮಾಡಿದ ಹಾಗೆ ನಡೆಯುವುದಿಲ್ಲ. ನಡೆಯಬೇಕು ಅಂತ ಕೂಡ ಇಲ್ಲ!
ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ನೂರಾರು ಟಿವಿ
ಕ್ಯಾಮೆರಾಗಳ ಮುಂದೆ ಅಂಪಾಯರ್ ಒಂದೇ ಒಂದು ತಪ್ಪು ತೀರ್ಪನ್ನು ಕೊಟ್ಟಿರುತ್ತಾನೆ. ಆಗ ತಂಡಗಳ DRS ಆಯ್ಕೆ  ಮುಗಿದಿರುತ್ತದೆ.  ಆ ತೀರ್ಪು ಪಂದ್ಯದ ಫಲಿತಾಂಶವನ್ನು ಬದಲಾವಣೆ ಮಾಡುತ್ತದೆ. ಈ ಅನುದ್ದೇಶಿತ ತಪ್ಪುಗಳೇ ಕ್ರಿಕೆಟ್ ಆಟದ ಬ್ಯೂಟಿ ಆಗಿರುತ್ತವೆ!
That’s the BEAUTY of CRICKET! 
And that’s the BEAUTY of LIFE too!
ಕ್ರಿಕೆಟ್ ಮತ್ತು ಬದುಕು ಎರಡೂ ಅನಿಶ್ಚಿತತೆಗಳ ಮೂಟೆ ಎನ್ನುವುದೇ ಇಂದಿನ ಭರತವಾಕ್ಯ.
ಭಾರತ ಇಂದು ಪಾಕ್ ವಿರುದ್ಧ ಏಷಿಯಾ ಕಪ್ ಪಂದ್ಯವನ್ನು  ಆಡುತ್ತಿದೆ. ಅದು ಯುದ್ಧ ಅಲ್ಲ. ಅದೊಂದು ಸ್ಪರ್ಧೆ ಅಷ್ಟೇ. ಒತ್ತಡ ಮಾಡಿಕೊಳ್ಳದೆ ಪಂದ್ಯ ವೀಕ್ಷಣೆ ಮಾಡೋಣ.
ಭಾರತಕ್ಕೆ ಆಲ್ ದ ಬೆಸ್ಟ್. 

LEAVE A REPLY

Please enter your comment!
Please enter your name here

eight − 6 =

Latest news

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...
- Advertisement -spot_imgspot_img

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you