16.4 C
London
Monday, May 13, 2024
Homeಕ್ರಿಕೆಟ್ಕುಂದಾಪುರದ ಯುವಕ ಪೃಥ್ವಿರಾಜ್ ಶೆಟ್ಟಿ ಕಿವುಡರ T20 ಕ್ರಿಕೆಟ್ ವಿಶ್ವಕಪ್‌ಗೆ ಭಾರತ ತಂಡಕ್ಕೆ ಆಯ್ಕೆ

ಕುಂದಾಪುರದ ಯುವಕ ಪೃಥ್ವಿರಾಜ್ ಶೆಟ್ಟಿ ಕಿವುಡರ T20 ಕ್ರಿಕೆಟ್ ವಿಶ್ವಕಪ್‌ಗೆ ಭಾರತ ತಂಡಕ್ಕೆ ಆಯ್ಕೆ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಈ ವರ್ಷದ ಕೊನೆಯಲ್ಲಿ ಕತಾರ್‌ನಲ್ಲಿ ನಡೆಯಲಿರುವ ಕಿವುಡರ ಟಿ20 ಕ್ರಿಕೆಟ್‌ಗೆ ಭಾರತೀಯ ತಂಡವನ್ನು ಪ್ರಕಟಿಸಲಾಗಿದೆ.  ತಂಡದಲ್ಲಿ ತಾಲೂಕಿನ ಪೃಥ್ವಿರಾಜ್ ಶೆಟ್ಟಿ ಹುಂಚನಿ ಆಯ್ಕೆಯಾಗಿದ್ದಾರೆ.
ಇವರು ರಾಷ್ಟ್ರೀಯ ಕಿವುಡರ ತಂಡದಲ್ಲಿರುವ ಕರ್ನಾಟಕದ ಏಕೈಕ ಆಟಗಾರ.
ಪೃಥ್ವಿರಾಜ್ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಸುಭಾಶ್ಚಂದ್ರ ಶೆಟ್ಟಿ ಮತ್ತು ಶೀಲಾವತಿ ದಂಪತಿಯ ಪುತ್ರ. ಹುಟ್ಟು ಕಿವುಡನಾಗಿದ್ದರೂ, ಕ್ರಿಕೆಟ್ ಆಡುವ ಕನಸನ್ನು ನನಸಾಗಿಸಿಕೊಳ್ಳಲು ಅದು ಅಡ್ಡಿಯಾಗಲಿಲ್ಲ.
ಪೃಥ್ವಿರಾಜ್ ಮೂಡುಬಗೆ ಅಂಪಾರುವಿನ ವಿಶೇಷ ಚೇತನ ಮಕ್ಕಳ ವಾಗ್ಜ್ಯೋತಿ ಶಾಲೆಯ ಹಳೆ ವಿದ್ಯಾರ್ಥಿ.ಟೊರ್ಪೆಡೋಸ್ ಮತ್ತು ಚಕ್ರವರ್ತಿ ಕುಂದಾಪುರ ಕ್ರಿಕೆಟ್ ತಂಡದ ಅರೆಕಾಲಿಕ ತರಬೇತುದಾರರಾಗಿ ಕೆಲಸ ಮಾಡುತ್ತಾರೆ. ಇವರು ಕರ್ನಾಟಕ ವಿಕಲಚೇತನರ ಕ್ರಿಕೆಟ್ ತಂಡದ ನಾಯಕರಾಗಿದ್ದರು. 32 ವರ್ಷದ ಪೃಥ್ವಿರಾಜ್ ಭಾರತ ತಂಡದ ಪ್ರಮುಖ ವೇಗದ ಬೌಲರ್ ಮತ್ತು ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್. ಇತ್ತೀಚೆಗೆ ನಡೆದ ತ್ರಿಕೋನ ಏಕದಿನ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು.
ಕಿವುಡರ T20 ಕ್ರಿಕೆಟ್ ಪಂದ್ಯ ಡಿಸೆಂಬರ್ 1 ರಿಂದ 12 ರವರೆಗೆ ಕತಾರ್ ರಾಜಧಾನಿ ದೋಹಾದಲ್ಲಿ  ನಡೆಯಲಿದೆ. ವೀರೇಂದ್ರ ಸಿಂಗ್ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ, ಆಲ್ ರೌಂಡರ್ ಸಾಯಿ ಆಕಾಶ್ ಉಪನಾಯಕ. ಭಾರತ ತಂಡದಲ್ಲಿರುವ ಏಕೈಕ ಕನ್ನಡಿಗ ಪೃಥ್ವಿರಾಜ್  ಕತಾರ್ ಗೆ ತೆರಳಿ  ಆಡುವ ಇಲೆವೆನ್ ನಲ್ಲಿ ಸ್ಥಾನ ಪಡೆದು ಭಾರತ ತಂಡಕ್ಕಾಗಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

seven − 7 =