16.4 C
London
Monday, May 13, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಶಾಲಾ ಕಾಲೇಜು ವಿದ್ಯಾರ್ಥಿಗಳ ಕ್ರಿಕೆಟ್ ಮುಖಾಮುಖಿಗೆ ಬೃಹತ್ ವೇದಿಕೆಯನ್ನು ಸಿದ್ಧಪಡಿಸುತ್ತಿರುವ ಟಿ.ಸಿ.ಎ ಉಡುಪಿ

ಶಾಲಾ ಕಾಲೇಜು ವಿದ್ಯಾರ್ಥಿಗಳ ಕ್ರಿಕೆಟ್ ಮುಖಾಮುಖಿಗೆ ಬೃಹತ್ ವೇದಿಕೆಯನ್ನು ಸಿದ್ಧಪಡಿಸುತ್ತಿರುವ ಟಿ.ಸಿ.ಎ ಉಡುಪಿ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಉಡುಪಿ- ಶಾಲಾ,ಕಾಲೇಜು ವಿದ್ಯಾರ್ಥಿಗಳಿಗಾಗಿ ನವೆಂಬರ್ 06 ರಿಂದ ನವೆಂಬರ್ 12 ರ ವರೆಗೆ  ಟೆನಿಸ್ ಬಾಲ್ ಕ್ರಿಕೆಟ್  ಪಂದ್ಯಾವಳಿಯನ್ನು ಆಯೋಜಿಸಲು ಉಡುಪಿ  ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಸಜ್ಜಾಗುತ್ತಿದೆ.
ಪಂದ್ಯಾವಳಿಯು ನವೆಂಬರ್ 6 ರಿಂದ ಪ್ರಾರಂಭವಾಗಲಿದ್ದು,ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ  ವಿವಿಧ ಶಾಲಾ-ಕಾಲೇಜಿನ ಒಟ್ಟು 64 ತಂಡಗಳು ನೋಂದಣಿ ಮಾಡಿಕೊಂಡಿದ್ದು,ಕುಂದಾಪುರ ಗಾಂಧಿ ಮೈದಾನದಲ್ಲಿ 700 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಕ್ರಿಕೆಟ್‌ನಲ್ಲಿ ಸ್ಪರ್ಧಿಸುವುದನ್ನು ನೋಡಬಹುದಾಗಿದೆ.
“ಈ ಪಂದ್ಯಾವಳಿಯು ಶಾಲಾ- ಕಾಲೇಜು  ಮಕ್ಕಳಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ ಮತ್ತು ವಿದ್ಯಾರ್ಥಿಗಳಲ್ಲಿ ದೈಹಿಕ ಕ್ಷಮತೆ ಮತ್ತು ಸಾಂಘಿಕ ಕೆಲಸವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.ನವೆಂಬರ್ 6 ಬೆಳಿಗ್ಗೆ 9 ಗಂಟೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಯುತ ಎ.ಕಿರಣ್ ಕೊಡ್ಗಿ ಮತ್ತು ಜನತಾ ಫಿಶ್ ಮಿಲ್ ನ ಪ್ರವರ್ತಕರಾದ ಶ್ರೀ ಪ್ರಶಾಂತ್ ಕುಂದರ್ ಇವರು ಉದ್ಘಾಟಿಸಲಿದ್ದು,
ಟಿ‌.ಸಿ.ಎ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಭಾಗವಹಿಸಲಿದ್ದಾರೆ”ಎಂದು ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷ ಗೌತಮ್ ಶೆಟ್ಟಿ ತಿಳಿಸಿದ್ದಾರೆ.”
ಟಿ.ಸಿ.ಎ ಉಡುಪಿ ಸಂಸ್ಥೆ ಈ ಕ್ರಿಕೆಟ್ ಪಂದ್ಯಾಟವನ್ನು ಕುಂದಾಪುರದ ಗಾಂಧಿ ಮೈದಾನದಲ್ಲಿ ಆಯೋಜಿಸುತ್ತಿದ್ದು,ಎರಡು ಪ್ರತ್ಯೇಕ ವಿಭಾಗಗಳಲ್ಲಿ ನಡೆಯಲಿದೆ. ಒಂದರಿಂದ 10ನೇ ತರಗತಿಯ ಮಕ್ಕಳಿಗೆ ಶಾಲಾ ಮಟ್ಟದಲ್ಲಿ ಹಾಗೂ ಪಿಯುಸಿ ಮತ್ತು ಪದವಿ  ವಿದ್ಯಾರ್ಥಿಗಳಿಗೆ ಕಾಲೇಜು ಮಟ್ಟದಲ್ಲಿ  ಹೀಗೆ ಎರಡು ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.
ಪಂದ್ಯಾವಳಿಯ ನೇರ ಪ್ರಸಾರ Sportskannadatv ಯುಟ್ಯೂಬ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

three − two =