ಕ್ರಿಕೆಟ್ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ "ಟೈಮ್ ಔಟ್" ಆದ ಮೊದಲ ಬ್ಯಾಟರ್ ಏಂಜೆಲೊ ಮ್ಯಾಥ್ಯೂಸ್

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ “ಟೈಮ್ ಔಟ್” ಆದ ಮೊದಲ ಬ್ಯಾಟರ್ ಏಂಜೆಲೊ ಮ್ಯಾಥ್ಯೂಸ್

-

- Advertisment -spot_img
2023ರ ಏಕದಿನ ವಿಶ್ವಕಪ್‌ನ 38ನೇ ಪಂದ್ಯದಲ್ಲಿ ಬಾಂಗ್ಲಾದೇಶ vs ಶ್ರೀಲಂಕಾ ತಂಡಗಳು ಮುಖಾಮುಖಿಯಾದವು.  ಈ ಪಂದ್ಯದಲ್ಲಿ ವಿಚಿತ್ರ ಘಟನೆಯೊಂದು ನಡೆದು  ಪಂದ್ಯವು ವಿವಾದದ ಕೇಂದ್ರ ಬಿಂದುವಾಯಿತು, ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಐತಿಹಾಸಿಕ ಔಟ್‌ಗೆ ಕಾರಣವಾದ ಘಟನೆಯ  ಇಲ್ಲಿ ನಡೆಯಿತು.
ಒಂದೂ ಎಸೆತ ಎದುರಿಸದೇ ಏಂಜೆಲೊ ಮ್ಯಾಥ್ಯೂಸ್ ಕ್ರೀಸ್‌ನಲ್ಲಿ ಬ್ಯಾಟಿಂಗ್ ಆರಂಭಿಸುವ ಮುನ್ನವೇ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಪೆವಿಲಿಯನ್ ಹಾದಿ ಹಿಡಿಯಬೇಕಾಯಿತು.  ಏಂಜೆಲೊ ಮ್ಯಾಥ್ಯೂಸ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ‘ಟೈಮ್ ಔಟ್’ ಮೂಲಕ ಔಟಾದ ಮೊದಲ ಕ್ರಿಕೆಟಿಗರಾದರು.
ಈ ಮುಖಾಮುಖಿಯು ದೆಹಲಿಯಲ್ಲಿ ನವೆಂಬರ್ 6, 2023 ರಂದು ನಡೆಯಿತು . ಶ್ರೀಲಂಕಾದ ಆಟಗಾರ  ಸದೀರ ಸಮರವಿಕ್ರಮ  ಔಟ್ ಆದ ನಂತ  ಏಂಜೆಲೊ ಮ್ಯಾಥ್ಯೂಸ್ ಕ್ರೀಸ್‌ಗೆ ತೆರಳಿದರು.  ಮ್ಯಾಥ್ಯೂಸ್ ಕ್ರೀಸ್‌ಗೆ ಹೋದಾಗ ತನ್ನ ಹೆಲ್ಮೆಟ್ ಅನ್ನು ಸರಿಹೊಂದಿಸುತ್ತಿರುವಾಗ, ಪಟ್ಟಿಯು ಮುರಿದುಹೋಯಿತು. ಹೆಲ್ಮೆಟ್‌ನ ಒಂದು ಬದಿಯ ಸ್ಟ್ರಿಪ್ ತೆರೆದ ಕಾರಣ ಅವರು ಮತ್ತೊಂದು ಹೆಲ್ಮೆಟ್ ಆರ್ಡರ್ ಮಾಡಿದ್ದರು.
12th ಮ್ಯಾನ್  ಹೊಸ ಹೆಲ್ಮೆಟ್ ಅನ್ನು ತರುತ್ತಿದ್ದಾಗ, ಬಾಂಗ್ಲಾದೇಶದ ಆಟಗಾರರು ಸಮಯ ಮೀರಿದೆ ಎಂದು ಅಂಪೈರ್‌ಗಳಿಗೆ  ಮನವಿ ಮಾಡಿದರು. ಈ ಕಾರಣಕ್ಕಾಗಿ ಅವರಿಗೆ ಔಟ್ ನೀಡಲಾಯಿತು.
ಮುರಿದ ಪಟ್ಟಿಯನ್ನು ಅಂಪೈರ್‌ಗಳಿಗೆ ಮತ್ತು ಶಕೀಬ್ ಅಲ್ ಹಸನ್‌ಗೆ ತೋರಿಸಿ ಮ್ಯಾಥ್ಯೂಸ್ ತನ್ನ ಪ್ರಕರಣವನ್ನು ಸಮರ್ಥಿಸಿಕೊಂಡರು, ಆದರೆ ಬಾಂಗ್ಲಾದೇಶದ ನಾಯಕ  ಶಕೀಬ್ ಒಪ್ಪಲಿಲ್ಲ. ಮನವಿಯನ್ನು ಹಿಂಪಡೆಯಲು ನಿರಾಕರಿಸಿದರು ಮ್ಯಾಥ್ಯೂಸ್ ಶಕೀಬ್ ಅಲ್ ಹಸನ್ ಮತ್ತು ಅಂಪೈರ್ ಜೊತೆ ಮಾತನಾಡಿದರೂ ಪ್ರಯೋಜನವಾಗಲಿಲ್ಲ. ಇದಾದ ನಂತರ ಅವರು ಮೈದಾನವನ್ನು ತೊರೆಯಬೇಕಾಯಿತು. ಬ್ಯಾಟ್ಸ್‌ಮನ್ ಔಟಾದ ನಂತರ  ನಂತರ 2 ನಿಮಿಷಗಳಲ್ಲಿ ಆಡಲು ಸಿದ್ಧರಾಗಿರಬೇಕು ಎಂಬುದು ನಿಯಮ..
ಇದರೊಂದಿಗೆ ಮ್ಯಾಥ್ಯೂಸ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವಧಿ ಮೀರಿದ ಮೊದಲ ಬ್ಯಾಟರ್ ಎನಿಸಿಕೊಂಡರು.
ಐಸಿಸಿ ನಿಯಮಗಳ ಆರ್ಟಿಕಲ್ 40.1.1 ರ ಪ್ರಕಾರ, ಬ್ಯಾಟ್ಸ್‌ಮನ್ ಔಟಾದರೆ ಅಥವಾ ನಿವೃತ್ತಿಯಾದರೆ, ಹೊಸ ಬ್ಯಾಟ್ಸ್‌ಮನ್ 2 ನಿಮಿಷಗಳಲ್ಲಿ ಆಡಲು ಸಿದ್ಧರಾಗಬೇಕು. ಇದು ಸಂಭವಿಸದಿದ್ದರೆ, ಬ್ಯಾಟ್ಸ್‌ಮನ್ ಔಟ್ ಆಗುತ್ತಾರೆ. ವಿಶೇಷವೆಂದರೆ ಹೀಗೆ ಔಟಾದ ಮೇಲೆ ಬೌಲರ್ ಖಾತೆಗೆ ವಿಕೆಟ್ ಸೇರುವುದಿಲ್ಲ.
ಏಂಜೆಲೊ ಮ್ಯಾಥ್ಯೂಸ್  ಅವರನ್ನು ಟೈಮ್ಡ್ ಔಟ್ ಮಾಡಿದ್ದು ಸರಿಯಾದ ನಿರ್ಧಾರವೇ?
✍️ ಸುರೇಶ್ ಭಟ್, ಮೂಲ್ಕಿ
ಸ್ಪೋರ್ಟ್ಸ್ ಕನ್ನಡ. ಕಾಮ್
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

3 × three =

Latest news

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...
- Advertisement -spot_imgspot_img

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

Must read

- Advertisement -spot_imgspot_img

You might also likeRELATED
Recommended to you