17.3 C
London
Monday, May 13, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಯುವ ಪ್ರತಿಭೆಗಳಿಗೆ ಟಿ.ಸಿ.ಎ ವಿಪುಲ ಅವಕಾಶ ಸೃಷ್ಟಿಸಲಿದೆ-ಗೌತಮ್ ಶೆಟ್ಟಿ

ಯುವ ಪ್ರತಿಭೆಗಳಿಗೆ ಟಿ.ಸಿ.ಎ ವಿಪುಲ ಅವಕಾಶ ಸೃಷ್ಟಿಸಲಿದೆ-ಗೌತಮ್ ಶೆಟ್ಟಿ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಟಿ.ಸಿ.ಎ ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟದ ಫಲಿತಾಂಶ
ಜಿ.ಪಿ.ಟಿ ಮಣಿಪಾಲ ಪ್ರಥಮ
ಎಮ್.ಎಸ್.ಆರ್.ಎಸ್ ಶಿರ್ವ-ದ್ವಿತೀಯ
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಟಿ.ಸಿ.ಎ ಉಡುಪಿ ಇವರ ಆಶ್ರಯದಲ್ಲಿ ಶಾಲಾ-ಕಾಲೇಜು ಮಟ್ಟದ ವಿದ್ಯಾರ್ಥಿಗಳ ಕ್ರಿಕೆಟ್ ಪಂದ್ಯಾಟ ನಡೆಯಿತು.
ನವೆಂಬರ್ 6 ರಿಂದ 10 ರ ವರೆಗೆ ಸತತ 5 ದಿನಗಳ ಕಾಲ ನಡೆದ ಈ ಪಂದ್ಯಾಟದಲ್ಲಿ 64 ಹೈಸ್ಕೂಲ್ ಮತ್ತು ಕಾಲೇಜು ತಂಡಗಳು ಭಾಗವಹಿಸಿದ್ದರು‌.ಅಂತಿಮವಾಗಿ ಫೈನಲ್ ನಲ್ಲಿ ಜಿ.ಪಿ.ಟಿ ಮಣಿಪಾಲ-ಎಮ್.ಎಸ್.ಆರ್.ಎಸ್ ಶಿರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಥಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಲಕ್ಷ್ಮೀ ಸೋಮ ಬಂಗೇರ ಕಾಲೇಜು ಪಡುಕರೆ ಮತ್ತು ಎಸ್.ಕೆ.ವಿ.ಎಮ್.ಎಸ್ ಕೋಟೇಶ್ವರ ತೃತೀಯ ಸ್ಥಾನ ಪಡೆದರು.
ಫೈನಲ್ ಪಂದ್ಯಶ್ರೇಷ್ಟ ಹರ್ಷಿತ್,ಬೆಸ್ಟ್ ಬ್ಯಾಟರ್ ಅಕ್ಷಯ್,ಬೆಸ್ಟ್ ಬೌಲರ್ ಮಹೇಶ್,ಸರಣಿ ಶ್ರೇಷ್ಠ ಪ್ರಶಸ್ತಿ ಪ್ರೀತೇಶ್ ಜಿ.ಪಿ‌‌‌.ಟಿ ಮಣಿಪಾಲ ಪಡೆದುಕೊಂಡರು.
ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಟಿ.ಸಿ.ಎ ಅಧ್ಯಕ್ಷ ಗೌತಮ್ ಶೆಟ್ಟಿ “ಯುವಕರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಜೀವನದಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯ.ಅಂತರಾಷ್ಟ್ರೀಯ ಆಟಗಾರರು ಕೂಟ ಟೆನಿಸ್ಬಾಲ್ ಕ್ರಿಕೆಟ್ ನಿಂದಲೇ ಕ್ರಿಕೆಟ್ ಜೀವನ ಪ್ರಾರಂಭಿಸಿದ್ದಾರೆ.ಅಳಿವಿನಂಚಿನಲ್ಲಿರುವ ಈ ಟೆನಿಸ್ಬಾಲ್ ಕ್ರಿಕೆಟ್ ಉಳಿಸಬೇಕಾದರೆ ಯುವಕರು ಈಗಿನಿಂದಲೇ ಜಾಗೃತರಾಗಬೇಕಿದೆ.ಈ ನಿಟ್ಟಿನಲ್ಲಿ ಟಿ.ಸಿ.ಎ ಉಡುಪಿಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರ ಸಹಕಾರದೊಂದಿಗೆ ಶಾಲಾ-ಕಾಲೇಜು ಮಟ್ಟದ ಪಂದ್ಯಾಟ ಯಶಸ್ವಿಯಾಗಿ ಸಂಘಟಿಸಿದೆ.ಮುಂದಿನ ದಿನಗಳಲ್ಲಿ ಟಿ.ಸಿ.ಎ ಉಡುಪಿ ಪ್ರತಿಭಾವಂತ ಆಟಗಾರರಿಗೆ ಭವಿಷ್ಯದಲ್ಲಿ ಶಿಕ್ಷಣ,ಉದ್ಯೋಗ,ಕ್ರೀಡಾ ಜೀವನ ಕಟ್ಟಿಕೊಡಲು ಸಹಕಾರ ನೀಡಲಿದ್ದೇವೆ ಎಂದರು.”
ಈ ಸಂದರ್ಭ 2023 ರ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕ್ರಿಕೆಟ್ ಪಟು ಪೃಥ್ವಿರಾಜ್‌ ಶೆಟ್ಟಿ ಹುಂಚನಿ,14 ರ ವಯೋಮಾನದ ಬಾಲಕಿಯರ ಕ್ರಿಕೆಟ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ರಚಿತಾ ಹತ್ವಾರ್ ಮತ್ತು ಪ್ರಾಚಿ,17 ಮತ್ತು 14 ರ ವಯೋಮಾನ  ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಚಾರಿತ್ರ್ಯ ಮತ್ತು ತ್ರಿಶಾ.ಐ.ನಾಯಕ್ ಸನ್ಮಾನಿಸಲಾಯಿತು.
ಶಾಲಾ-ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟದ ಪರಿಕಲ್ಪನೆಯನ್ನು ಕಂಡು ಯಶಸ್ವಿಯಾಗಿ ನಿರ್ವಹಿಸಿದ ಟಿ.ಸಿ.ಎ ಅಧ್ಯಕ್ಷ ಗೌತಮ್ ಶೆಟ್ಟಿ ಇವರನ್ನು ಟಿ.ಸಿ.ಎ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಬಹುಮಾನ ವಿತರಣಾ ಸಮಾರಂಭದಲ್ಲಿ ಯುವ ಜನ ಸಬಲೀಕರಣ ಕ್ರೀಡಾ ಇಲಾಖೆಯ ಕುಸುಮಾಕರ್ ಶೆಟ್ಟಿ, ಟಿ.ಸಿ.ಎ ಉಡುಪಿ ಗೌರವಾಧ್ಯಕ್ಷರಾದ ಶ್ರೀಧರ್ ಶೆಟ್ಟಿ ಪ್ಯಾರಡೈಸ್ ಬನ್ನಂಜೆ,ರಮೇಶ್ ಶೇರಿಗಾರ್,ಜಗದೀಶ್ ಕಾಮತ್ ಕಟಪಾಡಿ,ಸದಾನಂದ ಶಿರ್ವ,ಯಾದವ್ ನಾಯ್ಕ್ ಕೆಮ್ಮಣ್ಣು,ಅಮರನಾಥ್ ಭಟ್,ಶರತ್ ಶೆಟ್ಟಿ ಪಡುಬಿದ್ರಿ,ಆಸಿಫ್ ಕೆಮ್ಮಣ್ಣು,ನಿತ್ಯಾನಂದ ಮುನ್ನ,ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಬೈಲೂರು,ದಿನೇಶ್ ಗಾಣಿಗ ಬೈಂದೂರು,ನಾರಾಯಣ ಶೆಟ್ಟಿ ಮಾರ್ಕೋಡು,ಮನೋಜ್ ನಾಯರ್,ಕೆ‌.ಪಿ‌.ಸತೀಶ್,ಪ್ರವೀಣ್ ಪಿತ್ರೋಡಿ,ಕೋಟ ರಾಮಕೃಷ್ಣ ಆಚಾರ್,ಚೇತನ್ ಕುಮಾರ್ ದೇವಾಡಿಗ,ಅಶೋಕ್ ಹೆಗ್ಡೆ,ಸುಕೇಶ್ ಶೆಟ್ಟಿ,ನಾಗೇಶ್ ನಾವಡ,ಭಾಸ್ಕರ್ ಆಚಾರ್,ಮನೋಜ್,ಉಮೇಶ್ ಕುಂದಾಪುರ,ವಿದ್ಯಾರ್ಥಿಗಳು ಮುಂತಾದವರು ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

five + 7 =