17.3 C
London
Monday, May 13, 2024
Homeಕ್ರಿಕೆಟ್ಪರರ ಕಷ್ಟಕ್ಕೆ ನೆರವಾದರೆ ನಮ್ಮ‌ ಕಷ್ಟಕ್ಕೆ ಯಾರಾದರೂ ನೆರವಾಗುತ್ತಾರೆ-ಡಾ.ಗೋವಿಂದ ಬಾಬು ಪೂಜಾರಿ

ಪರರ ಕಷ್ಟಕ್ಕೆ ನೆರವಾದರೆ ನಮ್ಮ‌ ಕಷ್ಟಕ್ಕೆ ಯಾರಾದರೂ ನೆರವಾಗುತ್ತಾರೆ-ಡಾ.ಗೋವಿಂದ ಬಾಬು ಪೂಜಾರಿ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಬೆಂಗಳೂರು-ಇಲ್ಲಿನ ಕುಡ್ಲುಗೇಟ್ ಬಳಿಯ ಐಕ್ರಾ ಗೇಮ್ಸ್ ವಿಲೇಜ್ ಹುಲ್ಲು ಹಾಸಿನ ಮೈದಾನದಲ್ಲಿ ಅದ್ಧೂರಿಯ ಕ್ರಿಕೆಟ್ ಹಬ್ಬ ಶೆಫ್ ಟಾಕ್ ಪ್ರೀಮಿಯರ್‌ ಲೀಗ್ ಸೀಸನ್ 4 ಪಂದ್ಯಾಟ ನಡೆಯಿತು.
ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಉದ್ಯಮಿ,ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಪ್ರವರ್ತಕರಾದ ಡಾ.ಗೋವಿಂದ
ಬಾಬು ಪೂಜಾರಿಯವರು
ಪರರ ಕಷ್ಟಕ್ಕೆ ನೆರವಾದರೆ,ನಮ್ಮ ಕಷ್ಟದ ಸಮಯದಲ್ಲಿ ನಮಗೆ ಯಾರಾದರೂ ಯಾವುದೋ ರೂಪದಲ್ಲಿ ನೆರವಾಗುತ್ತಾರೆ.
ಮನೋಜ್ ಸಹಿತ ಕಂಪೆನಿಯಲ್ಲಿ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಿದ್ದೀರಿ ಮುಂದಿನ ದಿನಗಳಲ್ಲಿ ಕಂಪೆನಿಯ ಆಯ್ದ ಪ್ರತಿಭೆಗಳನ್ನು ಒಗ್ಗೂಡಿಸಿ ರಾಜ್ಯ ಮಟ್ಟದಲ್ಲೂ ತಂಡವನ್ನು ಕಟ್ಟುವುದಾಗಿ ತಿಳಿಸಿದರು.
ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಶ್ರೀಮತಿ ಮಾಲತಿ ಗೋವಿಂದ ಬಾಬು ಪೂಜಾರಿ, ಸುಭಾಷ್ ಮಣಿಪಾಲ್ ಹಾಸ್ಪಿಟಲ್,ಕೃಷ್ಣ ಪೂಜಾರಿ ಶ್ರೀ ಮಾತಾ ಸಾಗರ್ ಹೋಟೆಲ್,ರಘುರಾಮ್ ಶೆಟ್ಟಿ ಶ್ರೀ ಉಡುಪಿ ಉಪಹಾರ್,ಕೋಟ ರಾಮಕೃಷ್ಣ ಆಚಾರ್ ಸ್ಪೋರ್ಟ್ಸ್ ಕನ್ನಡ ಉಪಸ್ಥಿತರಿದ್ದರು.
ಟೀಮ್ 18 ಸ್ಟಾರ್ಸ್ C.P.L-4 ಚಾಂಪಿಯನ್ಸ್
ಶೆಫ್ ಟಾಕ್ ಕಂಪೆನಿಯ ನೌಕರರನ್ನು ಒಳಗೊಂಡ ಒಟ್ಟು 10 ತಂಡಗಳು ಭಾಗವಹಿಸಿದ ಈ ಪಂದ್ಯಾಟದ ಫೈನಲ್ ನಲ್ಲಿ 18 ಸ್ಟಾರ್ಸ್ ತಂಡ, ಚಾಲೆಂಜರ್ಸ್ ತಂಡವನ್ನು 15 ರನ್ ಗಳ ಅಂತರದಲ್ಲಿ ಮಣಿಸುವ ಮುಖಾಂತರ 2ನೇ ಬಾರಿಗೆ ಚಾಂಪಿಯನ್ ಆಗಿ ಹೊರ ಹೊಮ್ಮಿತು.
ಫೈನಲ್ ಪಂದ್ಯದಲ್ಲಿ ಟಾಸ್ ಜಯಿಸಿ ಮೊದಲು ಬ್ಯಾಟ್ ಮಾಡಿದ 18 ಸ್ಟಾರ್ಸ್ ತಂಡ ನಿಗದಿತ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 45 ರನ್ ಗಳಿಸಿತು. ಈ ಗುರಿ ಬೆನ್ನತ್ತಿದ್ದ ಚಾಲೆಂಜರ್ಸ್ ತಂಡ ನಿಗದಿತ 6 ಓವರ್ ಗಳಲ್ಲಿ 30 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಗೋವಿಂದ ಬಾಬು ಪೂಜಾರಿ ನಾಯಕತ್ವದ 18 ಸ್ಟಾರ್ಸ್ ತಂಡ 15 ರನ್ ಗಳ ಅಂತರದಿಂದ ಗೆಲುವು ಸಾಧಿಸಿ ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ಪಂದ್ಯಾವಳಿಯಲ್ಲಿ ಆಲ್ ರೌಂಡರ್ ಪ್ರದರ್ಶನ ನೀಡಿದ ಕೌಶಿಕ್ ಅವರು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು. ಹಾಗೆ ಪಂದ್ಯಾವಳಿಯುದ್ದಕ್ಕೂ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಮನೋಜ್ ಬೆಸ್ಟ್ ಬ್ಯಾಟ್ಸ್ಮನ್ ಆಗಿ ಹೊರ ಹೊಮ್ಮಿದರು ಮತ್ತು ಉತ್ತಮ ಬೌಲಿಂಗ್ ಲಯದಲ್ಲಿದ್ದ ಚೇತನ್ ಬೆಸ್ಟ್ ಬೌಲರ್ ಪ್ರಶಸ್ತಿ ಮುಡಿಗೇರಿಸಿಕೊಂಡರು. ಸರಣಿಯುದ್ದಕ್ಕೂ ಉತ್ತಮ ಕ್ಷೇತ್ರ ರಕ್ಷಣೆ ತೋರ್ಪಡಿಸಿದ ರೋಷನ್ ಬೆಸ್ಟ್ ಫಿಲ್ಡರ್ ಪ್ರಶಸ್ತಿಗೆ ಭಾಜನರಾದರು. ಇನ್ನು ಎಸ್ ಎನ್ ಜಿ ತಂಡ ಫೇರ್ ಪ್ಲೇ ಪ್ರಶಸ್ತಿಯನ್ನು ಪಡೆದುಕೊಂಡಿತು.
ಕರಾವಳಿ ಸಿರಿ ಕ್ಲಬ್” ಕಾರ್ಯಕ್ರಮದ ಸಂಯೋಜನೆಯ ಸಂಪೂರ್ಣ ಹೊಣೆ ಹೊತ್ತು ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಿ ಪಂದ್ಯಾಟದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಸ್ಟಾರ್ ವರ್ಟೆಕ್ಸ್ Sportskannadatv ಯೂಟ್ಯೂಬ್ ಲೈವ್ ಚಾನೆಲ್ ಮೂಲಕ ಸಹಸ್ರಾರು ಮಂದಿ ಪಂದ್ಯಾಟ ವೀಕ್ಷಿಸಿದರೆ,ಅವಿನಾಶ್ ಯಡೂರು ಮತ್ತು ವಿನಾಯಕ್ ವೀಕ್ಷಕ ವಿವರಣೆ ಹಾಗೂ ಕೆ.ಎಸ್.ಸಿ.ಎ ಅಂಗೀಕೃತ ಅಂಪಾಯರ್ ಪ್ರೀತಮ್ ಹೆಬ್ಬಾರ್ ಮತ್ತು ಪ್ರವೀಣ್ ಹೆಬ್ಬಾರ್ ತೀರ್ಪುಗಾರರಾಗಿ‌ ಭಾಗವಹಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

16 + 3 =