ಸ್ಪೋರ್ಟ್ಸ್IPL 2024: ರಾಯಲ್ ಚಾಲೆಂಜರ್ಸ್ ಬಗ್ಗೆ ರಿಷಬ್ ಶೆಟ್ರು ಹೇಳಿದ್ದು ಅರ್ಥವಾಯ್ತಾ?

IPL 2024: ರಾಯಲ್ ಚಾಲೆಂಜರ್ಸ್ ಬಗ್ಗೆ ರಿಷಬ್ ಶೆಟ್ರು ಹೇಳಿದ್ದು ಅರ್ಥವಾಯ್ತಾ?

-

- Advertisment -spot_img
ಪ್ರತಿ ವರ್ಷ ಒಂದಿಲ್ಲೊಂದು ಬದಲಾವಣೆ ಮತ್ತು ಹೊಸ ಅನ್ವೇಷಣೆಗೆ ಹೆಸರುವಾಸಿಯಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಮತ್ತೊಂದು ದೊಡ್ಡ ಬದಲಾವಣೆ ಕೈ ಹಾಕಿದೆ.
ಸ್ಯಾಂಡಲ್‌ವುಡ್ ಸ್ಟಾರ್ ನಟ ರಿಷಬ್ ಶೆಟ್ಟಿ ಇದಕ್ಕೆ   ಕೈಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ, ಖ್ಯಾತ ನಟ ರಿಷಬ್ ಶೆಟ್ಟಿ ಮತ್ತು ಮೂರು ಕಂಬಳದ ಕೋಣಗಳನ್ನು ಕಾಣಬಹುದು. ಸಿನಿಮಾ ಸ್ಟೈಲ್‌ನಲ್ಲೇ ಎಂಟ್ರಿ ಕೊಡಲಿರುವ ನಟ ರಿಷಬ್ ಶೆಟ್ಟಿ ಅವರು ಮೂರು ಕಂಬಳ ಕೋಣಗಳ ಮೇಲೆ Royal, Challengers, Bangalore ಎಂದು ಕೆಂಪು ಬಟ್ಟೆ ಹಾಕಲಾಗಿರುತ್ತದೆ. ಈ ವೇಳೆ Bangalore ಎಂದು ಇರುವ ಕೋಣವನ್ನು ‘ಇದು ಬ್ಯಾಡ, ಭಟ್ರೇ, ತಗೊಂಡು ಹೋಗಿ ಇದನ್ನು’ ಎಂದು ರಿಷಬ್ ಹೇಳಿದ್ದಾರೆ . ” ರಿಷಬ್ ಶೆಟ್ಟಿ ಎನ್ ಹೇಳ್ತಿದ್ದಾರೆ ಅರ್ಥ ಆಯ್ತಾ? “
ಇದು ಮುಂಬರುವ ಐಪಿಎಲ್‌ಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಹೆಸರಿನ ಬದಲಾವಣೆಗೆ ಮುಂದಾಗಿರುವ ಸುಳಿವು ನೀಡಿದೆ. ಲಾಯಲ್ ಫ್ಯಾನ್ಸ್ ಕೂಗಿಗೆ ಮಣಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಫ್ರಾಂಚೈಸಿ ತನ್ನ ಹೆಸರು ಬದಲಾವಣೆ ಮುಂದಾಗಿದೆ. ಇಂಗ್ಲಿಷ್‌ನಲ್ಲಿ Royal Challengers Bangalore ಎಂದು ಫ್ರಾಂಚೈಸಿ ಹೆಸರು ಇದೆ. ಇದೀಗ Bangalore ಎಂಬ ಹಳೆಯ ಹೆಸರಿಗೆ ಕೊಕ್ ನೀಡಿ  Bengaluru ಸೇರಿಸಲು ನಿರ್ಧರಿಸಿದೆ.  2014ರ ನವೆಂಬರ್ 1ರಂದು ಸರ್ಕಾರಿ ಕಡತ ಮತ್ತು ಸಾರ್ವಜನಿಕವಾಗಿ Bangalore (ಬ್ಯಾಂಗಲೋರ್) ಬದಲಾಗಿ Bengaluru (ಬೆಂಗಳೂರು) ಎಂದು ಬದಲಾವಣೆ ಆದೇಶ ಹೊರಡಿಸಲಾಗಿದೆ. ಇದೇ ವೇಳೆ ಕೋಟ್ಯಂತರ ನಿಷ್ಠಾವಂತ ಅಭಿಮಾನಿಗಳ ದಶಕದ ಕೂಗಿಗೆ ಮಣಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಫ್ರಾಂಚೈಸಿ ತನ್ನ ಹೆಸರು ಬದಲಾವಣೆ ಮುಂದಾಗಿದೆ.
9 ವರ್ಷಗಳು ಕಳೆದರೂ ಆರ್‌ಸಿಬಿ ಫ್ರಾಂಚೈಸಿ  Royal Challengers Bangalore ಎಂದೇ ಬಳಸುತ್ತಿತ್ತು. ಕಳೆದ 16 ವರ್ಷಗಳಲ್ಲಿ ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆಲ್ಲದ ತಂಡಕ್ಕೆ ಇದೀಗ ಹೆಸರು ಬದಲಾವಣೆ ಮಾಡುವ ಅನಿವಾರ್ಯತೆ ಎದುರಾಗಿದೆ. ಈ ಬಾರಿಯಾದರೂ ಆರ್‌ಸಿಬಿ ತಂಡಕ್ಕೆ ಅದೃಷ್ಟ ಬದಲಾಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.
ವಿಶ್ವದ ಶ್ರೀಮಂತ ಟಿ20 ಲೀಗ್‌ ಆರಂಭಕ್ಕಾಗಿ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್ದಾರೆ. ಬಹು ನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿಗೆ ಕೇವಲ ಒಂದು ವಾರ ಮಾತ್ರ ಬಾಕಿ ಉಳಿದಿದೆ. ಸಾಂಪ್ರದಾಯಿಕ ಎದುರಾಳಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಗಳು ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುವ ರೋಚಕ ಉದ್ಘಾಟನಾ ಪಂದ್ಯದಲ್ಲಿ  ಮುಖಾಮುಖಿಯಾಗಲಿವೆ.

LEAVE A REPLY

Please enter your comment!
Please enter your name here

eleven + four =

Latest news

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...
- Advertisement -spot_imgspot_img

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

Must read

- Advertisement -spot_imgspot_img

You might also likeRELATED
Recommended to you