ಕಬಡ್ಡಿಪ್ರೊ ಕಬಡ್ಡಿ ಲೀಗ್‌ ಪಂದ್ಯದಲ್ಲಿ 43–42 ರಲ್ಲಿ ರೋಚಕ ಜಯಪಡೆದ ಬೆಂಗಳೂರು...

ಪ್ರೊ ಕಬಡ್ಡಿ ಲೀಗ್‌ ಪಂದ್ಯದಲ್ಲಿ 43–42 ರಲ್ಲಿ ರೋಚಕ ಜಯಪಡೆದ ಬೆಂಗಳೂರು ಬುಲ್ಸ್‌

-

- Advertisment -spot_img

ಪವನ್‌ ಕುಮಾರ್ ಶೆರಾವತ್‌ ಅವರ ಅಬ್ಬರದ ರೈಡಿಂಗ್ ಮೂಲಕ ಮತ್ತೊಮ್ಮೆ ಬೆಂಗಳೂರು ಬುಲ್ಸ್‌ ನೆರವಿಗೆ ಬಂದರು. ಅವರು ಒಂದೇ ಪಂದ್ಯದಲ್ಲಿ 29 ಪಾಯಿಂಟ್ಸ್‌ ಕಲೆಹಾಕಿದರು! ಶನಿವಾರ ನಡೆದ ಪ್ರೊ ಕಬಡ್ಡಿ ಲೀಗ್‌ ಪಂದ್ಯದಲ್ಲಿ ಬೆಂಗಾಲ್‌ ವಾರಿಯರ್ಸ್‌ ತಂಡದ ವಿರುದ್ಧ ಕೊನೆಯ ನಾಲ್ಕು ನಿಮಿಷಗಳವರೆಗೆ ಹಿನ್ನಡೆಯಲ್ಲಿದ್ದ ಬೆಂಗಳೂರು ಬುಲ್ಸ್‌ ತಂಡ ಅಂತಿಮವಾಗಿ 43–42 ರಲ್ಲಿ ರೋಚಕ ಜಯಪಡೆಯಿತು.

ಪಾಟಲೀಪುತ್ರ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವಾರಿಯರ್ಸ್‌ ತಂಡ ಬಹುಪಾಲು ಅವಧಿಯಲ್ಲಿ ಮುನ್ನಡೆ ಪಡೆದಿತ್ತು. ಐದು ನಿಮಿಷಗಳಿದ್ದಾಗ ವಾರಿಯರ್ಸ್‌ ತಂಡ 40–34ರಲ್ಲಿ ಮುನ್ನಡೆಯಲ್ಲಿತ್ತು. ಆದರೆ ನಾಲ್ಕು ನಿಮಿಷಗಳಿದ್ದಾಗ ಎದುರಾಳಿ ತಂಡವನ್ನು ಆಲೌಟ್‌ ಮಾಡಿದ ಬುಲ್ಸ್‌ ತಂಡ ಹಿನ್ನಡೆಯನ್ನು 38–40ಕ್ಕೆ ಇಳಿಸಿತು. ನಂತರ ಏಕಾಂಗಿಯಾಗಿ ಯಶಸ್ವಿ ರೈಡ್‌ಗಳ ಮೂಲಕ ಪವನ್‌ ತಂಡವನ್ನು ಗೆಲುವಿನತ್ತ ಒಯ್ದರು.

ಪವನ್‌ ಮೂರು ಬೋನಸ್‌ ಸೇರಿ 29 ಪಾಯಿಂಟ್ಸ್‌ ಸಂಗ್ರಹಿಸಿದರು. ತಂಡ ಒಟ್ಟಾರೆ ರೈಡಿಂಗ್‌ನಲ್ಲಿ ಗಳಿಸಿದ್ದ 27 ರೈಡಿಂಗ್‌ ಪಾಯಿಂಟ್‌ಗಳಲ್ಲಿ 26 ಈ ಆಟಗಾರನಿಂದಲೇ ಬಂದಿದ್ದು ವಿಶೇಷ. ರಕ್ಷಣೆಯ ವಿಭಾಗದಲ್ಲಿ ಸೌರಬ್‌ ನಂದಲ್‌ ಆರು ಪಾಯಿಂಟ್ಸ್‌ ಗಳಿಸಿದರು.

ಇದು ಬುಲ್ಸ್ ತಂಡಕ್ಕೆ ನಾಲ್ಕು ಪಂದ್ಯಗಳಲ್ಲಿ ಮೂರನೇ ಗೆಲುವು. ಬುಲ್ಸ್ ಐದನೇ ಸ್ಥಾನದಲ್ಲಿದ್ದರೆ, ವಾರಿಯರ್ಸ್‌ ತಂಡ ಆರನೇ ಸ್ಥಾನದಲ್ಲಿದೆ.

ಶನಿವಾರ ಆರಂಭವಾದ ಪಟ್ನಾ ಲೆಗ್‌ನ ಮೊದಲ ಪಂದ್ಯದಲ್ಲಿ ಪಿಂಕ್‌ ಪ್ಯಾಂಥರ್ಸ್‌ ತಂಡ 34–21 ರಿಂದ (ವಿರಾಮ: 15–9) ಆತಿಥೇಯ ಪಟ್ನಾ ಪೈರೇಟ್ಸ್‌ ತಂಡವನ್ನು ಮಣಿಸಿತು. ದೀಪಕ್‌ ನರ್ವಾಲ್‌ 9 ಪಾಯಿಂಟ್ಸ್‌ ಗಳಿಸಿದರೆ, ಉತ್ತಮ ಫಾರ್ಮ್‌ನಲ್ಲಿರುವ ಸಂದೀಪ್‌ ಧುಲ್‌ ಟ್ಯಾಕ್ಲಿಂಗ್‌ನಲ್ಲಿ ಮಿಂಚಿ ಎಂಟು ಪಾಯಿಂಟ್ಸ್ ಗಳಿಸಿದರು.

ಪಿಂಕ್‌ ಪ್ಯಾಂಥರ್ಸ್‌ ತಂಡ ಆಡಿದ ನಾಲ್ಕೂ ಪಂದ್ಯಗಳನ್ನು ಗೆದ್ದು 20 ಪಾಯಿಂಟ್‌ಗಳೊಡನೆ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

seventeen − fifteen =

Latest news

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...
- Advertisement -spot_imgspot_img

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you