ಕ್ರಿಕೆಟ್RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

-

- Advertisment -spot_img
ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು ವಿಕೆಟ್. ಅದೂ ರಾಕ್ಷಸ ದಾಂಡಿಗರ ದಂಡನ್ನೇ ಹೊಂದಿರುವ ಅತಿ ಬಲಿಷ್ಠ #kkr ವಿರುದ್ಧ.
ಇಂಥಾ ಒಂದು spirited ಬೌಲಿಂಗ್ ಪ್ರದರ್ಶನ ತೋರಿದ ಒಬ್ಬ ಬೌಲರ್, ಮುಂದಿನ ಪಂದ್ಯದಲ್ಲಿ ಬೆಂಚ್ ಕಾಯಿಸುವಂತೆ ಮಾಡುವುದು ಸಾಧ್ಯವೇ..? ಕ್ರಿಕೆಟ್ ಬಗ್ಗೆ ಕನಿಷ್ಠ ಜ್ಞಾನವಿರುವ ಯಾರೇ ಆದರೂ ಆ ಆಟಗಾರನನ್ನು  ಎರಡನೇ ಯೋಚನೆಯೇ ಇಲ್ಲದೆ ಮುಂದಿನ ಪಂದ್ಯದಲ್ಲಿ ಆಡಿಸಿ ಬಿಡುತ್ತಾರೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ think tankಗೆ ಆ ಕನಿಷ್ಠ ಜ್ಞಾನವೇ ಇದ್ದಂತೆ ಕಾಣುತ್ತಿಲ್ಲ. ಕೆಕೆಆರ್ ವಿರುದ್ಧ ಅಮೋಘ ಬೌಲಿಂಗ್ ಪ್ರದರ್ಶನ ತೋರಿದ್ದ ‘ಕನ್ನಡಿಗ’ ವೈಶಾಖ್ ವಿಜಯ್ ಕುಮಾರ್’ನನ್ನು ನಿನ್ನೆ ನಡೆದ ಲಕ್ನೋ ವಿರುದ್ಧದ ಪಂದ್ಯದಲ್ಲಿ ಆಡಿಸದಿರುವುದು ದೊಡ್ಡ ಅಚ್ಚರಿ.
ಸ್ಲೋ ಬೌನ್ಸರ್ಸ್, knuckle ಬಾಲ್ ಸಹಿತ ಬೌಲಿಂಗ್’ನಲ್ಲಿ ಸಾಕಷ್ಟು variationಗಳನ್ನು ಹೊಂದಿರುವ ವೈಶಾಖ್, RCBಯ ಸ್ಟಾರ್ಟಿಂಗ್ XIನಲ್ಲಿ ಆಡುವ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಪ್ರತಿಭಾವಂತ ಫಾಸ್ಟ್ ಬೌಲರ್. ಆದರೆ ಲಕ್ನೋ ವಿರುದ್ಧದ ಪಂದ್ಯದಲ್ಲಿ ಎಲ್ಲರೂ ಅಚ್ಚರಿ ಪಡುವ ರೀತಿಯಲ್ಲಿ ವೈಶಾಖ್’ನನ್ನು ಆಡುವ ಬಳಗದಿಂದ ಹೊರಗಿಡಲಾಗಿತ್ತು. ಹೋಗಲಿ, impact ಆಟಗಾರನನ್ನಾಗಿ ಆಡಿಸಿದರಾ..? ಅದೂ ಇಲ್ಲ.
ರಾಯಲ್ ಚಾಲೆಂಜರ್ಸ್ ತಂಡದಲ್ಲಿ ಇರುವುದೇ ಇಬ್ಬರು ಕನ್ನಡಿಗರು. ಒಬ್ಬ ವೈಶಾಖ್, ಇನ್ನೊಬ್ಬ ಮನೋಜ್ ಭಾಂಡಗೆ. ರಾಯಚೂರಿನ ಭಾಂಡಗೆ ಕಳೆದೆರಡು ವರ್ಷಗಳಲ್ಲಿ ಬೆಂಚ್ ಕಾಯಿಸಿದ್ದೇ ಬಂತು. ವೈಶಾಖ್’ನನ್ನಾದರೂ ನಿರಂತರ ಪಂದ್ಯಗಳಲ್ಲಿ ಆಡಿಸುತ್ತಾರೆ ಎಂದರೆ, ಅದೂ ಸುಳ್ಳಾಗಿದೆ. ಚೆನ್ನಾಗಿ ಆಡಿದ ಮೇಲೂ ಕಡೆಗಣಿಸುತ್ತಾರೆ ಎಂದರೆ rcb ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ.
#rcb #rcbfans #rcbforever #ipl #ipl2024 #vyshakvijaykumar #KarnatakaCricket

LEAVE A REPLY

Please enter your comment!
Please enter your name here

four × five =

Latest news

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’   ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...
- Advertisement -spot_imgspot_img

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ಬೈಂದೂರು : ವಿಕ್ರಂ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಹಾಗೂ ಉಡುಪಿ ಜಿಲ್ಲಾ...

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ ಉಡುಪಿ ಜಿಲ್ಲೆಯ ಪ್ರತಿಭಾವಂತ ಕ್ರಿಕೆಟಿಗೆಯಾದ ಸಮೃದ್ಧಿ ಅವರು ಮಹಿಳಾ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ತಂಡಕ್ಕೆ ಆಲ್‌ರೌಂಡರ್‌...

Must read

- Advertisement -spot_imgspot_img

You might also likeRELATED
Recommended to you