6.4 C
London
Wednesday, April 24, 2024
Homeಸ್ಪೋರ್ಟ್ಸ್ಹಳೆಯಂಗಡಿ : ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ವೃತ್ತಿಪರ ಶಿಕ್ಷಕರ ಯಶಸ್ವಿ‌ ಷಟಲ್ ಬ್ಯಾಡ್ಮಿಂಟನ್...

ಹಳೆಯಂಗಡಿ : ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ವೃತ್ತಿಪರ ಶಿಕ್ಷಕರ ಯಶಸ್ವಿ‌ ಷಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ ಫಲಿತಾಂಶ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ಹಳೆಯಂಗಡಿ : ಕ್ರೀಡೆ ಹಾಗೂ ಕ್ರೀಡಾಭಿಮಾನಿಗಳ ಸಂಖ್ಯೆ ಹೆಚ್ಚಿಸುವಲ್ಲಿ ಅತಿ ಹೆಚ್ಚು ಮುತುವರ್ಜಿ ವಹಿಸುತ್ತಿರುವ ಸಂಸ್ಥೆ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಹಳೆಯಂಗಡಿ.

ಟೆನ್ನಿಸ್ ಕ್ರಿಕೆಟ್ ನಲ್ಲಿ ಎರಡೂವರೆ ದಶಕಗಳ ಅದ್ವಿತೀಯ ಇತಿಹಾಸ ಬರೆದ ಈ ಸಂಸ್ಥೆ,ಬಳಿಕ ಲೆದರ್ ಬಾಲ್ ಕ್ರಿಕೆಟ್,ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್,ಷಟಲ್ ಬ್ಯಾಡ್ಮಿಂಟನ್ ಹೀಗೆ ವಿವಿಧ ಕ್ರೀಡೆಗಳನ್ನು ಪ್ರೋತ್ಸಾಹಿಸುತ್ತ ಬಂದಿರುತ್ತದೆ.

ಶಾಲಾ ಕಾಲೇಜುಗಳಿಂದ ಪ್ರಾರಂಭವಾಗಿ ವೃತ್ತಿಪರ ಕ್ರೀಡಾಪಟುಗಳನ್ನು ಗುರುತಿಸುತ್ತಿರುವ ಸಂಸ್ಥೆ ಆಗಸ್ಟ್ 18 ರಂದು ವೃತ್ತಿಪರ ಶಿಕ್ಷಕರಿಗಾಗಿ ಅಂತರ್ ಜಿಲ್ಲಾ ವೃತ್ತಿಪರ ಶಿಕ್ಷಕರಿಗಾಗಿ ಷಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ ಆಯೋಜಿಸಿತ್ತು.ವಿವಿಧ ಶಾಲಾ,ಕಾಲೇಜುಗಳಿಂದ 48 ಸ್ಪರ್ಧಿಗಳು ಭಾಗವಹಿಸಿದ್ದರು.

ಫಲಿತಾಂಶದ ವಿವರ. :
ಪುರುಷರ ಡಬಲ್ಸ್ ವಿಜೇತರು ಪ್ರಥಮ-ದೀಕ್ಷಿತ್ ಹಾಗೂ ಪ್ರಜ್ನೇಶ್, ದ್ವಿತೀಯ-ಕುಮಾರ್ ಹಾಗೂ ಅರುಣ್ ಬ್ಯಾಪ್ಟಿಸ್ಟ್.

ಮಹಿಳೆಯರ ಸಿಂಗಲ್ಸ್ ವಿಜೇತರು : ಪ್ರಥಮ-ರಶ್ಮಿ, ದ್ವಿತೀಯ-ಬಬಿತಾ.

ಪುರುಷರ ಸಿಂಗಲ್ಸ್ ವಿಜೇತರು ಪ್ರಥಮ-ಪ್ರಜ್ನೇಶ್, ದ್ವಿತೀಯ-ದೀಕ್ಷಿತ್.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ನಿರ್ದೇಕರಾದ ಡಾ.ಕಿಶೋರ್ ಕುಮಾರ್,ವಿದ್ಯಾರಶ್ಮಿ ಪಬ್ಲಿಕ್ ಸ್ಕೂಲ್ ಸವಣೂರಿನ ಮೆನೇಜಿಂಗ್ ಡೈರೆಕ್ಟರ್ ಅಶ್ವಿನ್ ಶೆಟ್ಟಿ,ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಗೌತಮ್ ಶೆಟ್ಟಿ,ಸ್ಪೋರ್ಟ್ಸ್ ಡೆನ್ ಈವೆಂಟ್ ನ ಪ್ರಧಾನ ರೂವಾರಿ ಗಣೇಶ್ ಕಾಮತ್,ಟೊರ್ಪೆಡೋಸ್ ಕ್ಲಬ್ ನ ಉಪಾಧ್ಯಕ್ಷ ನಾಗಭೂಷಣ್ ರೆಡ್ಡಿ,ಮೆನೇಜರ್ ಕೆ.ಪಿ.ಸತೀಶ್,ರಾಘವೇಂದ್ರ,ಬ್ಯಾಡ್ಮಿಂಟನ್ ಕೋಚ್ ಸಂತೋಷ್ ಖಾರ್ವಿ,ಕಾರ್ತಿಕ್ ಹಾಗೂ ಸಂಪತ್ ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಗೌತಮ್ ಶೆಟ್ಟಿಯವರು ಕಾರ್ಯಕ್ರಮ ನಿರೂಪಿಸಿ, ವಿಜೇತರಿಗೆ ಆಕರ್ಷಕ ಟ್ರೋಫಿ ಹಾಗೂ ಪ್ರಮಾಣಪತ್ರ ವಿತರಿಸಿ ಅಭಿನಂದಿಸಿದರು.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

11 + one =