ಕ್ರಿಕೆಟ್ಹೃದಯವಂತ ರಾಬಿನ್ ಉತ್ತಪ್ಪನ ಈ ಕಥೆಯನ್ನ ಕೇಳಿದ್ದೀರಾ..?

ಹೃದಯವಂತ ರಾಬಿನ್ ಉತ್ತಪ್ಪನ ಈ ಕಥೆಯನ್ನ ಕೇಳಿದ್ದೀರಾ..?

-

- Advertisment -spot_img

ರಾಬಿನ್ ಉತ್ತಪ್ಪ ಅವರದ್ದು ಆಕರ್ಷಣೀಯ ವ್ಯಕ್ತಿತ್ವ. ತುಂಬಾ ಇಂಟ್ರೆಸ್ಟಿಂಗ್ ವ್ಯಕ್ತಿ. ಆಟದ ಬಗ್ಗೆ ಹೇಳಲೇಬೇಕಿಲ್ಲ. ಅದ್ಭುತ ಕ್ರಿಕೆಟರ್. ಅದರಾಚೆ, ಉತ್ತಪ್ಪ ಒಬ್ಬ ಒಳ್ಳೆಯ ವ್ಯಕ್ತಿ ಕೂಡ ಹೌದು.

ಹೊರ ಜಗತ್ತಿಗೆ ಆತ ಹೇಗೆ ಕಾಣುತ್ತಾನೋ ಗೊತ್ತಿಲ್ಲ.. ಆದರೆ ಆತನನ್ನು ಹತ್ತಿರದಿಂದ ನೋಡಿದವರಿಗೆ “ಹೃದಯವಂತ” ಎಂಬುದಂತೂ ಚೆನ್ನಾಗಿ ಗೊತ್ತು.

ಕ್ರಿಕೆಟ್ ಮೈದಾನದಲ್ಲಿ ಅದ್ಭುತ ಸಾಧನೆ ಮಾಡಿರುವ ರಾಬಿನ್ ಉತ್ತಪ್ಪ ಮೈದಾನದಾಚೆ ಮತ್ತೊಬ್ಬರ ಕಷ್ಟಕ್ಕೆ ಮಿಡಿಯುವ ವ್ಯಕ್ತಿ. ಇದಕ್ಕೆ ಸಾಕ್ಷಿ ಚಿನ್ನಸ್ವಾಮಿ ಕ್ರೀಡಾಂಗಣದ ಗ್ರೌಂಡ್ಸ್’ಮನ್’ಗಳಿಗೆ ಅವರು ಮಾಡಿರುವ ಸಹಾಯ.

ರಾಬಿನ್ ಉತ್ತಪ್ಪ ಅವರು ಕರ್ನಾಟಕ ತಂಡದ ಪರ ಆಡುತ್ತಿದ್ದಾಗ ಕನಿಷ್ಠ ಆರೇಳು ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದ ಗ್ರೌಂಡ್ಸ್’ಮನ್’ಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣಕಾಸಿನ ಸಹಾಯ ಮಾಡಿದ್ದಾರೆ.

ತಮಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಗಲೂ ರಾತ್ರಿ ಕಷ್ಟ ಪಟ್ಟು ಕೆಲಸ ಮಾಡುವ ಗ್ರೌಂಡ್ಸ್’ಮನ್’ಗಳೆಂದರೆ ಉತ್ತಪ್ಪ ಅವರಿಗೆ ವಿಶೇಷ ಪ್ರೀತಿ.

ಅವರಲ್ಲಿ ಒಂದಷ್ಟು ಮಂದಿಯ ಮಕ್ಕಳ ಬಗ್ಗೆ ವಿಚಾರಿಸಿ ಅವರ ವಿದ್ಯಾಭ್ಯಾಸಕ್ಕೆ ನೆರವಾದವರು ರಾಬಿನ್ ಉತ್ತಪ್ಪ. ಮಕ್ಕಳು ಯಾವ ಶಾಲೆಗಳಲ್ಲಿ ಓದುತ್ತಿದ್ದಾರೆ ಎಂಬುದರ ಮಾಹಿತಿ ಪಡೆದು, ಪ್ರತೀ ವರ್ಷ School feesನ್ನು ನೇರವಾಗಿ ಶಾಲೆಗೆ ತಲುಪಿಸಿ ಬಿಡುತ್ತಿದ್ದರು. ಕರ್ನಾಟಕ ಪರ ಆಡುತ್ತಿದ್ದಾಗ ಪ್ರತೀ ವರ್ಷ ತಪ್ಪದೆ ನಮ್ಮ ಮಕ್ಕಳ ಸ್ಕೂಲ್ ಫೀಸ್ ಕಟ್ಟಿದವರು ಉತ್ತಪ್ಪ ಎಂದು ಚಿನ್ನಸ್ವಾಮಿ ಕ್ರೀಡಾಂಗಣದ ಗ್ರೌಂಡ್ಸ್’ಮನ್ ಒಬ್ಬರು ಹೇಳಿದ್ದರು. ಈ ವಿಚಾರವನ್ನು ಎಲ್ಲಿಯೂ, ಯಾರಲ್ಲೂ ಹೇಳಬಾರದೆಂದು ಗ್ರೌಂಡ್ಸ್’ಮನ್’ಗಳಿಗೆ ರಾಬಿನ್ ಉತ್ತಪ್ಪ ತಾಕೀತು ಮಾಡಿದ್ದರಂತೆ.

ಕ್ರಿಕೆಟಿಗರು ಉತ್ತಮವಾಗಿ ಬ್ಯಾಟಿಂಗ್, ಬೌಲಿಂಗ್ ಮಾಡಬೇಕೆಂದರೆ ಪಿಚ್ ಉತ್ತಮವಾಗಿರಬೇಕು. ಅಂತಹ ಉತ್ತಮ ಪಿಚ್’ಗಳನ್ನು ನಿರ್ಮಿಸುವವರು ಗ್ರೌಂಡ್ಸ್’ಮನ್’ಗಳು. ಆ ಗ್ರೌಂಡ್ಸ್’ಮನ್’ಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣಕಾಸಿನ ನೆರವು ನೀಡುತ್ತಾ ಬಂದಿದ್ದ ರಾಬಿನ್ ಉತ್ತಪ್ಪ ನಿಜಕ್ಕೂ ಹೃದಯವಂತನೇ ಸರಿ.

LEAVE A REPLY

Please enter your comment!
Please enter your name here

five × two =

Latest news

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...
- Advertisement -spot_imgspot_img

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

Must read

- Advertisement -spot_imgspot_img

You might also likeRELATED
Recommended to you