ಕ್ರಿಕೆಟ್ಮಹಾರಾಜ ಟ್ರೋಫಿಯಲ್ಲಿ ಮಿಂಚುತ್ತಿದ್ದಾನೆ ರಾಹುಲ್ ದ್ರಾವಿಡ್ ಅವರ ಹಿರಿಮಗ!

ಮಹಾರಾಜ ಟ್ರೋಫಿಯಲ್ಲಿ ಮಿಂಚುತ್ತಿದ್ದಾನೆ ರಾಹುಲ್ ದ್ರಾವಿಡ್ ಅವರ ಹಿರಿಮಗ!

-

- Advertisment -spot_img

ಕ್ರಿಕೆಟ ದಿಗ್ಗಜ ರಾಹುಲ್ ದ್ರಾವಿಡ್ ಅವರ ಹಿರಿಮಗ ಸಮಿತ್ ದ್ರಾವಿಡ್ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್ ತಂಡದ ಪರ ಆಡುತ್ತಿದ್ದಾನೆ. ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ 24 ಎಸೆತಗಳಲ್ಲಿ 33 ರನ್ ಗಳಿಸಿ ಗಮನ ಸೆಳೆದಿದ್ದಾನೆ 18 ವರ್ಷದ ಸಮಿತ್ ದ್ರಾವಿಡ್.

ದ್ರಾವಿಡ್ ಮಗನ ಆಟವನ್ನು ನೋಡಿದವರು, “ಅಪ್ಪನಂತೆ ಮಗ” ಎಂದು ಉದ್ಘರಿಸುತ್ತಿದ್ದಾರೆ.
ಅಂಥವರಿಗೊಂದು ಮಾತು.. ರಾಹುಲ್ ದ್ರಾವಿಡ್ ಅವರ ಹಿರಿಮಗ ಸಮಿತ್ ಅಪ್ಪನಂತೆ ಅಲ್ಲವೇ ಅಲ್ಲ.. ಅಪ್ಪ ಇಡೀ ಜಗತ್ತೇ ಮೆಚ್ಚಿದ ಬ್ಯಾಟ್ಸ್’ಮನ್. ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್’ಮನ್’ಗಳಲ್ಲಿ ಒಬ್ಬರು. ಆದರೆ ಮಗ ಆಲ್ರೌಂಡರ್… ಬಲಗೈ ಮಧ್ಯಮ ವೇಗದ ಬೌಲರ್, ಬಲಗೈ ಬ್ಯಾಟರ್.

ಈಗಿನ ಕಾಲದಲ್ಲಿ higher level ಕ್ರಿಕೆಟ್ ಆಡಬೇಕೆಂದರೆ, multi talented ಆಗಿರಲೇಬೇಕು. ಬ್ಯಾಟಿಂಗ್ ಜೊತೆ ಬೌಲಿಂಗ್ ಮಾಡಬೇಕು ಅಥವಾ ಬೌಲಿಂಗ್ ಜೊತೆ ಬ್ಯಾಟಿಂಗ್ ಕೌಶಲ್ಯ ಗೊತ್ತಿರಬೇಕು. ಮೀಡಿಯಂ ಪೇಸ್ ಆಲ್ರೌಂಡರ್ ಆಗಿದ್ದರೆ ಅಂಥಾ ಆಟಗಾರನ ತೂಕವೇ ಬೇರೆ. ರಾಹುಲ್ ದ್ರಾವಿಡ್ ತಮ್ಮ ಹಿರಿಮಗನನ್ನು ಹಾಗೆಯೇ ಬೆಳೆಸಿದ್ದಾರೆ.

ಈಗಾಗಲೇ ಕರ್ನಾಟಕ ಅಂಡರ್-19 ತಂಡವನ್ನು ಪ್ರತಿನಿಧಿಸಿರುವ ಸಮಿತ್ ದ್ರಾವಿಡ್, ಈ ವರ್ಷ ಕೂಚ್ ಬೆಹಾರ್ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದ್ದ ಕರ್ನಾಟಕ ತಂಡದ ಸದಸ್ಯನೂ ಹೌದು.

KSCA ಅಂಡರ್-19 ಟೂರ್ನಿಗಳಲ್ಲಿ ಮಗ ಆಡುತ್ತಿದ್ದರೆ.. ದ್ರಾವಿಡ್ ಮೈದಾನದ ಮೂಲೆಯಲ್ಲಿ ಕುಳಿತು ಇಡೀ ದಿನ ಪಂದ್ಯ ವೀಕ್ಷಿಸುತ್ತಾರೆ. ಅದು ನೆಲದ ಮೇಲಾದರೂ ಸರಿ, ಮೆಟ್ಟಿಲುಗಳ ಮೇಲಾದರೂ ಸರಿ.

ದ್ರಾವಿಡ್ ಅವರ ಕಿರಿಮಗ ಅನ್ವಯ್ ದ್ರಾವಿಡ್ ಅಪ್ಪನ ಪಡಿಯಚ್ಚು. ಅಂದರೆ, ವಿಕೆಟ್ ಕೀಪರ್ ಬ್ಯಾಟ್ಸ್’ಮನ್. ಕರ್ನಾಟಕ ಅಂಡರ್-14 ತಂಡದ ನಾಯಕ ಕೂಡ.

ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರನಿಗೆ ಕ್ರಿಕೆಟ್ ಒಗ್ಗಿದಂತೆ ಕಾಣುತ್ತಿಲ್ಲ.. ಮತ್ತೊಬ್ಬ ಕ್ರಿಕೆಟ್ ಲೆಜೆಂಡ್ ಸುನಿಲ್ ಗವಾಸ್ಕರ್ ಅವರ ಮಗ ಭಾರತ ಪರ ಆಡಿದರೂ ಅಪ್ಪನ ಪ್ರಭಾವಳಿಯ ಮುಂದೆ ಆತ ನಿಲ್ಲಲೇ ಇಲ್ಲ. ದ್ರಾವಿಡ್ ಅವರ ಮಕ್ಕಳು ಹಾಗಾಗದಿರಲಿ.. ಅಪ್ಪನಂತೆ ಮಕ್ಕಳಿಗೂ ಕ್ರಿಕೆಟ್ ದೇವತೆ ಒಲಿಯಲಿ.

LEAVE A REPLY

Please enter your comment!
Please enter your name here

nine + 20 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you