ಕ್ರಿಕೆಟ್ದುಬೈನಲ್ಲಿ ಕರಾವಳಿ ಕನ್ನಡಿಗರ ಅದ್ಧೂರಿಯ "ಕರ್ನಾಟಕ ಪ್ರೀಮಿಯರ್ ಲೀಗ್ ಸೀಸನ್ 2"...

ದುಬೈನಲ್ಲಿ ಕರಾವಳಿ ಕನ್ನಡಿಗರ ಅದ್ಧೂರಿಯ “ಕರ್ನಾಟಕ ಪ್ರೀಮಿಯರ್ ಲೀಗ್ ಸೀಸನ್ 2” ಜನವರಿ 17 ರಂದು.

-

- Advertisment -spot_img

ಕೋಸ್ಟಲ್ ಫ್ರೆಂಡ್ಸ್ ದುಬೈ ಇವರ ವತಿಯಿಂದ ಆಟೋ ಡೀಲ್ ಆಟೋಮೇಟಿವ್ ಸರ್ವಿಸ್,ಅಲ್ ಸಿತಾರಾ ಗಲ್ಫ್ ಕಾಂಟ್ರ್ಯಾಕ್ಟಿಂಗ್ & ಮೈಂಟೇನೆನ್ಸ್ ಕಂಪೆನಿ, U.N.I.F ಗಲ್ಫ್ ಹಾಗೂ ಪ್ರೈಮ್ ಟಾಸ್ಕ್ ಟೆಕ್ನಿಕಲ್ ಸರ್ವಿಸ್, ಗ್ಲೋಬಲಿಂಕ್ ವೆಸ್ಟ್ ಸ್ಟಾರ್ ಶಿಪ್ಪಿಂಗ್ L.L.C ಇವರ ಸಹಭಾಗಿತ್ವದಲ್ಲಿ, ಸಮಾನ ಮನಸ್ಕ ಸ್ನೇಹಿತ ಮೊಹಮ್ಮದ್ ಹಮ್ದಾನ್, ತನ್ವೀರ್ ಖಾಜಿ, ಖಲೀಲ್, ರೋವೆಲ್ ಪ್ರೀತ್, ಸುನಿಲ್, ಕಿಶೋರ್ ಶೆಟ್ಟಿ, ಪರ್ವೇಜ್, ನವೀನ್ ಹಾಗೂ ಸಮೀರ್ ಹೀಗೆ ಯುವ ಕ್ರಿಕೆಟಿಗರ ಕೂಡುವಿಕೆಯಲ್ಲಿ ಅಲ್ ಹಮ್ರಿಯಾ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ಅಜ್ಮನ್ ದುಬೈನ ಅಂಗಣದಲ್ಲಿ ಹಗಲು ರಾತ್ರಿಯ ಕೊಲ್ಲಿ ರಾಷ್ಟ್ರದ ಅತ್ಯಂತ ವೈಭವೋಪೇತ ಪಂದ್ಯಾವಳಿ ಎಂದೇ ಖ್ಯಾತಿ ಪಡೆದ “ಕರ್ನಾಟಕ ಪ್ರೀಮಿಯರ್ ಲೀಗ್” ಕೆ.ಪಿ.ಎಲ್- ಸೀಸನ್ 2″ನಡೆಯಲಿದೆ.

ವಿಜೇತ ತಂಡಗಳು,ವೈಯಕ್ತಿಕ ಶ್ರೇಷ್ಠ ನಿರ್ವಹಣೆ ತೋರಿದ ಆಟಗಾರರು ಅತ್ಯಾಕರ್ಷಕ ಟ್ರೋಫಿ ಹಾಗೂ ಪ್ರಶಸ್ತಿ ರೂಪದಲ್ಲಿ 4 ಲಕ್ಷಕ್ಕೂ ಹೆಚ್ಚಿನ ನಗದು ಬಹುಮಾನ ರೂಪದಲ್ಲಿ ಜೇಬಿಗಿಳಿಸಲಿದ್ದಾರೆ.

ಜನವರಿ 3 ರಂದು ದುಬೈನ ಲ್ಯಾವೆಂಡರ್ ಹೋಟೆಲ್ ನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದ್ದು, ಉಡುಪಿ,ಮಂಗಳೂರು ಜಿಲ್ಲೆಯ ಪ್ರಸಿದ್ಧ ಆಟಗಾರರನ್ನೊಳಗೊಂಡ ಒಟ್ಟು 8 ಫ್ರಾಂಚೈಸಿಗಳು ಪಂದ್ಯಾವಳಿಯಲ್ಲಿ ಪ್ರತಿಷ್ಟಿತ ಕೆ‌.ಪಿ.ಎಲ್ ಕಿರೀಟಕ್ಕಾಗಿ ಕಾದಾಡಲಿದ್ದು ಫ್ರಾಂಚೈಸಿಗಳ ವಿವರ ಈ ಕೆಳಗಿನಂತಿದೆ.

1)ಕರಾವಳಿ ಉಡುಪಿ

2)ಡಿ.ಜೆ.ಚಾಲೆಂಜರ್ಸ್ ಪಡೀಲ್

3)ವರಾಹರೂಪ ಮಂಗಳೂರು

4)ಹೀಟ್ ಶೀಲ್ಡ್ ಶಿಮಂತೂರು ಗ್ಲಾಡಿಯೇಟರ್ಸ್

5)ಚಕ್ರವರ್ತಿ ಕ್ರಿಕೆಟರ್ಸ್ ಕುಂದಾಪುರ

6)ಆಟೋ ಡೀಲ್ ಮೂಡಬಿದಿರೆ

7)ಅಲ್ ಸಿತಾರಾ ಕಾರ್ಕಳ


8)ಗಂಗೊಳ್ಳಿ ಸ್ಟ್ರೈಕರ್ಸ್

ಕಳೆದ ವರ್ಷ ನಡೆದಿದ್ದ ಪ್ರಥಮ‌ ಆವೃತ್ತಿಯ ಹೀಟ್ ಶೀಲ್ಡ್ ಶಿಮಂತೂರು ಗ್ಲಾಡಿಯೇಟರ್ಸ್ ಪ್ರಥಮ ಹಾಗೂ ಚಕ್ರವರ್ತಿ ಕ್ರಿಕೆಟರ್ಸ್ ದ್ವಿತೀಯ ಸ್ಥಾನವನ್ನು ಅಲಂಕರಿಸಿತ್ತು. ಈ ಬಾರಿ ಯಾವ ತಂಡ ಕೆ.ಪಿ.ಎಲ್ ಸೀಸನ್ 2 ರ ಚಾಂಪಿಯನ್ ಪಟ್ಟವನ್ನು ಅಲಂಕರಿಸಲಿದೆಯೆಂದು  ಕಾದು ನೋಡಬೇಕಾಗಿದೆ.

ಪ್ರದರ್ಶನ ಪಂದ್ಯದಲ್ಲಿ ಪ್ರಪ್ರಥಮ ಬಾರಿ ಎಸ್‌.ಆರ್.ಎಸ್ ರೈಸಿಂಗ್ ಕ್ವೀನ್ಸ್ ಹಾಗೂ ಅರಸ ವಾರಿಯರ್ಸ್ ಫ್ರಾಂಚೈಸಿ ರೂಪದ 2 ಮಹಿಳಾ ತಂಡಗಳು ಸ್ಪರ್ಧಾ ಕಣಕ್ಕಿಳಿಯಲಿದ್ದು ಪಂದ್ಯಾವಳಿಯ ರಂಗನ್ನು ಹೆಚ್ಚಿಸಲಿದೆ.

ವೀಕ್ಷಕ ವಿವರಣೆ ವಿಭಾಗದಲ್ಲಿ ಪ್ರಸಿದ್ಧ ಕನ್ನಡ ವೀಕ್ಷಕ ವಿವರಣೆಕಾರ ಸತೀಶ್ ಮಣಿಪಾಲ್ ಭಾಗವಹಿಸಲಿದ್ದು, ಪಂದ್ಯಾವಳಿಯ ನೇರ ಪ್ರಸಾರವನ್ನು ನಮ್ಮ ಕುಡ್ಲ ಹಾಗೂ ಯೂಟ್ಯೂಬ್ ಚಾನೆಲ್ ಬಿತ್ತರಿಸಿದರೆ,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಸಹಕರಿಸಲಿದೆ.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

sixteen − eleven =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you