ಕ್ರಿಕೆಟ್ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ...

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

-

- Advertisment -spot_img

 

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ ಅಪೂರ್ವ ಮಾದರಿಯನ್ನು ಪ್ರದರ್ಶಿಸಿರುವ ಕಟ್ಟೆ ಫ್ರೆಂಡ್ಸ್ ಕಾಳಾವರತಂಡದ ಕಾರ್ಯ ಇದೀಗ ಎಲ್ಲೆಡೆಯಿಂದ ಪ್ರಶಂಸೆಗೆ ಪಾತ್ರವಾಗಿದೆ.

ಆದಿ ಉಡುಪಿ ತಂಡದ ಪರ ಗುರುತಿಸಿಕೊಂಡಿದ್ದ ಆಶೋಕ್ ಮೂಡುಬೆಟ್ಟು ಅವರು ಕರಾವಳಿ ಭಾಗದ ಕ್ರಿಕೆಟ್ ವಲಯದಲ್ಲಿ ಚಿರಪರಿಚಿತ ಹೆಸರಾಗಿದ್ದಾರೆ. ಎ.ಕೆ. ಸ್ಪೋರ್ಟ್ಸ್ ಉಡುಪಿ, ಬಿ.ಜಿ. ಬಾಯ್ಸ್, ಉಡುಪಿ ಫ್ರೆಂಡ್ಸ್, ಬಿ.ಬಿ.ಸಿ. ಸೇರಿದಂತೆ ಹಲವು ತಂಡಗಳ ಪರ ರಾಜ್ಯಮಟ್ಟದ ಟೂರ್ನಿಗಳಲ್ಲಿ ಅವರು ತಮ್ಮ ಪ್ರತಿಭೆಯನ್ನು ಮೆರೆದಿದ್ದರು. ಅಲ್ಲದೆ ನಿಸರ್ಗ ಕಿದಿಯೂರು ತಂಡದ ಪರ 30 ಯಾರ್ಡ್ ಕ್ರಿಕೆಟ್ ಟೂರ್ನಿಗಳಲ್ಲಿಯೂ ಗಮನಾರ್ಹ ಪ್ರದರ್ಶನ ನೀಡಿದ್ದರು.

ಇತ್ತೀಚೆಗೆ ಮನೆಗೆ ಬಣ್ಣ ಹಚ್ಚುವ ಕೆಲಸದ ವೇಳೆ ಆಕಸ್ಮಿಕವಾಗಿ ಮೇಲಿನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಆಶೋಕ್ ಮೂಡುಬೆಟ್ಟು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಅವರ ಎರಡೂ ಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಶಸ್ತ್ರಚಿಕಿತ್ಸೆ ಅಗತ್ಯವಾಗಿದೆ. ಇದಕ್ಕಾಗಿ ಹೆಚ್ಚಿನ ಚಿಕಿತ್ಸಾ ವೆಚ್ಚದ ಅವಶ್ಯಕತೆ ಎದುರಾಗಿರುವ ಹಿನ್ನೆಲೆಯಲ್ಲಿ ಕುಟುಂಬ ಸಂಕಷ್ಟದಲ್ಲಿದೆ.

ಇಂತಹ ಸಂದರ್ಭದಲ್ಲಿ ಕ್ರೀಡಾ ಬಂಧುತ್ವ ಹಾಗೂ ಮಾನವೀಯತೆಯ ಮೌಲ್ಯವನ್ನು ಎತ್ತಿ ಹಿಡಿದಿರುವ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಮಾದರಿಯ ಹೆಜ್ಜೆ ಇಟ್ಟಿದೆ. ಕಳೆದ ಭಾನುವಾರ ಹೆಮ್ಮಾಡಿಯಲ್ಲಿ ನಡೆದ ಕ್ರಿಕೆಟ್ ಟೂರ್ನಿಯಲ್ಲಿ ರನ್ನರ್-ಅಪ್ ಸ್ಥಾನ ಪಡೆದಿದ್ದ ಈ ತಂಡಕ್ಕೆ ನಗದು ಬಹುಮಾನವಾಗಿ ದೊರೆತ ₹40,000 ಮೊತ್ತವನ್ನು ಸಂಪೂರ್ಣವಾಗಿ ಆಶೋಕ್ ಮೂಡುಬೆಟ್ಟು ಅವರ ಚಿಕಿತ್ಸೆಗೆ ದೇಣಿಗೆಯಾಗಿ ನೀಡಿದೆ.

ರಕ್ಷಿತ್ ಶೆಟ್ಟಿ ಕಾಳಾವರ ಮತ್ತು ತಂಡದ ಸದಸ್ಯರು ಉಡುಪಿಯ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಶೋಕ್ ಮೂಡುಬೆಟ್ಟು ಅವರನ್ನು ಭೇಟಿ ನೀಡಿ ಆಶೋಕ್ ಮೂಡುಬೆಟ್ಟು ಅವರಿಗೆ ನೇರವಾಗಿ ಹಣ ಹಸ್ತಾಂತರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಬಹುಮಾನವಾಗಿ ಪಡೆದ ಸಂಪೂರ್ಣ ಮೊತ್ತವನ್ನು ಯಾವುದೇ ಹಿಂಜರಿಕೆ ಇಲ್ಲದೆ ಸಂಕಷ್ಟದಲ್ಲಿರುವ ಕ್ರೀಡಾಪಟುವಿನ ಚಿಕಿತ್ಸೆಗೆ ನೀಡಿರುವ ಈ ಕಾರ್ಯ ಕ್ರೀಡಾ ವಲಯದಲ್ಲಿ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.

ಇಂದಿನ ಸ್ವಾರ್ಥಮಯ ಸಮಾಜದಲ್ಲಿ ಸಹ ಮಾನವೀಯ ಮೌಲ್ಯಗಳು ಜೀವಂತವಾಗಿವೆ ಎಂಬುದನ್ನು ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ತಮ್ಮ ಕೃತಿಯ ಮೂಲಕ ಸಾಬೀತುಪಡಿಸಿದೆ. ಅವರ ಈ ಉದಾತ್ತ ಕಾರ್ಯ ಇತರರಿಗೂ ಪ್ರೇರಣೆಯಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಗೆಲುವಿಗಿಂತಲೂ ಮಾನವೀಯತೆಯೇ ದೊಡ್ಡದು ಎಂಬ ಸಂದೇಶವನ್ನು ಸಾರಿದೆ.

LEAVE A REPLY

Please enter your comment!
Please enter your name here

eighteen − fifteen =

Latest news

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್ ಚಿತ್ರದುರ್ಗ:  ವಿಶ್ವಕರ್ಮ ಸಮುದಾಯದ ಯುವಕರ ಕ್ರೀಡಾ ಪ್ರತಿಭೆಯನ್ನು...
- Advertisement -spot_imgspot_img

ಹೆಮ್ಮಾಡಿ ಟ್ರೋಫಿ ದ್ವಿತೀಯ ಪ್ರಶಸ್ತಿ ನಗದನ್ನು ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ವಿ.ಎಮ್.ಕಟ್ಟೆ ಫ್ರೆಂಡ್ಸ್ ಕಾಳಾವರ

  ಹೆಮ್ಮಾಡಿ ಟ್ರೋಫಿ ದ್ವಿತೀಯ ಪ್ರಶಸ್ತಿ ನಗದನ್ನು ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ವಿ.ಎಮ್.ಕಟ್ಟೆ ಫ್ರೆಂಡ್ಸ್ ಕಾಳಾವರ   ಉಡುಪಿ: ಕ್ರೀಡೆಯ ಜೊತೆಗೆ ಮಾನವೀಯ ಮೌಲ್ಯಗಳಿಗೂ ಆದ್ಯತೆ ನೀಡುವ ಅಪರೂಪದ...

ಬೆಂಗಳೂರು ಕಾರ್ಪೊರೇಟ್ ಬ್ಯಾಡ್ಮಿಂಟನ್ ಲೀಗ್‌: ಜುಲೈ 4-5ರಂದು ಪಂದ್ಯಾವಳಿ

ಬೆಂಗಳೂರು ಕಾರ್ಪೊರೇಟ್ ಬ್ಯಾಡ್ಮಿಂಟನ್ ಲೀಗ್‌: ಜುಲೈ 4-5ರಂದು ಪಂದ್ಯಾವಳಿ ಬೆಂಗಳೂರು: ಕಾರ್ಪೊರೇಟ್ ವಲಯದ ಉದ್ಯೋಗಿಗಳಿಗಾಗಿ ವಿಶೇಷವಾಗಿ ಆಯೋಜಿಸಲಾಗಿರುವ **ಬೆಂಗಳೂರು ಕಾರ್ಪೊರೇಟ್ ಬ್ಯಾಡ್ಮಿಂಟನ್ ಲೀಗ್ (BCBL)** ಜುಲೈ 4...

Must read

- Advertisement -spot_imgspot_img

You might also likeRELATED
Recommended to you