ಕ್ರಿಕೆಟ್ರಣಜಿ ಸಂಭಾವ್ಯರ ಪಟ್ಟಿಯಲ್ಲಿ ಉಡುಪಿಯ ಗಿಳಿಯಾರಿನ ಹುಡುಗ.. ರಣಜಿ ಪದಾರ್ಪಣೆಗೆ ಇನ್ನೊಂದೇ...

ರಣಜಿ ಸಂಭಾವ್ಯರ ಪಟ್ಟಿಯಲ್ಲಿ ಉಡುಪಿಯ ಗಿಳಿಯಾರಿನ ಹುಡುಗ.. ರಣಜಿ ಪದಾರ್ಪಣೆಗೆ ಇನ್ನೊಂದೇ ಹೆಜ್ಜೆ!

-

- Advertisment -spot_img

ಎಸ್.ಅರವಿಂದ್ ಅವರೇ ಕೊನೆ.. ಅವರ ನಿವೃತ್ತಿಯ ನಂತರ ಕರ್ನಾಟಕ ರಣಜಿ ತಂಡಕ್ಕೊಬ್ಬ ಸಮರ್ಥ ಎಡಗೈ ವೇಗದ ಬೌಲರ್ ಸಿಕ್ಕಿಲ್ಲ. ಬಲಗೈ ವೇಗಿಗಳಾಗಿ ವಿದ್ವತ್ ಕಾವೇರಪ್ಪ, ವೈಶಾಖ್ ವಿಜಯ್ ಕುಮಾರ್, ವಾಸುಕಿ ಕೌಶಿಕ್ ಗಮನ ಸೆಳೆಯುತ್ತಿದ್ದಾರೆ. ಅವಕಾಶ ಸಿಕ್ಕರೆ ವಿದ್ಯಾಧರ್ ಪಾಟೀಲ್ ರೆಡಿ ಇದ್ದಾರೆ. ಯುವ ಪ್ರತಿಭೆ ಸಮರ್ಥ್ ನಾಗರಾಜ್ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಇವರೆಲ್ಲಾ ಬಲಗೈ ಮಧ್ಯಮ ವೇಗದ ಬೌಲರ್’ಗಳು.

ಸಾಲು ಸಾಲು ಬಲಗೈ ವೇಗದ ಬೌಲರ್’ಗಳ ಮಧ್ಯೆ ಕರ್ನಾಟಕದ ಭರವಸೆಯ ಎಡವೈ ವೇಗಿಯಾಗಿ ಕಾಣುತ್ತಿರುವುದು ಒಬ್ಬನೇ.. ಅದು ಉಡುಪಿ ಜಿಲ್ಲೆಯ ಕೋಟಾದ ಮೂಡು ಗಿಳಿಯಾರಿನ ಅಭಿಲಾಷ್ ಶೆಟ್ಟಿ.

ಅಭಿಲಾಷ್ ಶೆಟ್ಟಿ.. ಎಡಗೈ ಸ್ವಿಂಗ್ ಬೌಲರ್. ಹೊಸ ಚೆಂಡಿನಲ್ಲಿ ಅತ್ಯಂತ ಪರಿಣಾಮಕಾರಿ ಬೌಲರ್. ಚೆಂಡನ್ನು ಎರಡೂ ಕಡೆ ಸ್ವಿಂಗ್ ಮಾಡುವ ಸಾಮರ್ಥ್ಯವುಳ್ಳ ಪ್ರತಿಭಾವಂತ.. ಈ ಬಾರಿ ರಣಜಿ ಟ್ರೋಫಿ ಟೂರ್ನಿಗೆ ಪ್ರಕಟಿಸಲಾಗಿರುವ ಕರ್ನಾಟಕದ 36 ಮಂದಿ ಸಂಭಾವ್ಯರ ತಂಡದಲ್ಲಿ 25 ವರ್ಷದ ಅಭಿಲಾಷ್ ಶೆಟ್ಟಿ ಸ್ಥಾನ ಪಡೆದಿದ್ದಾರೆ.

ಈಗಾಗಲೇ ರಾಜ್ಯ ಕ್ರಿಕೆಟ್ ಸಂಸ್ಥೆಯ ಟೂರ್ನಿಗಳಲ್ಲಿ ಅಮೋಘ ಪ್ರದರ್ಶನ ತೋರಿರುವ ಅಭಿಲಾಷ್ ಶೆಟ್ಟಿ, ರಣಜಿ ಪದಾರ್ಪಣೆಯ ನಿರೀಕ್ಷೆಯಲ್ಲಿದ್ದಾರೆ. KSCA ಆಶ್ರಯದಲ್ಲಿ ನಡೆಯುತ್ತಿರುವ ಡಾ.ತಿಮ್ಮಪ್ಪಯ್ಯ ಟ್ರೋಫಿ ಪಂದ್ಯದಲ್ಲಿ ಅಭಿಲಾಷ್ ಶೆಟ್ಟಿ ತಮ್ಮ ಸ್ವಿಂಗ್ ಬೌಲಿಂಗ್ ಮೂಲಕ ಮಿಂಚಿದ್ದಾರೆ. ನಾಲ್ಕು ದಿನಗಳ ಪಂದ್ಯದಲ್ಲಿ, ಕೆಂಪು ಚೆಂಡಿನಲ್ಲಿ ಅದ್ಭುತ ದಾಳಿ ನಡೆಸುವ ಮೂಲಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಯ್ಕೆ ಸಮಿತಿಯ ಗಮನ ಸೆಳೆದಿದ್ದಾರೆ.

2023ರ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ 11 ಇನ್ನಿಂಗ್ಸ್’ಗಳಲ್ಲಿ 22 ವಿಕೆಟ್ ಪಡೆದು ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಮೂಡಿ ಬಂದಿದ್ದ ಅಭಿಲಾಷ್ ಶೆಟ್ಟಿ, ಈ ಬಾರಿಯ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ ಮಂಗಳೂರು ಡ್ರಾಗನ್ಸ್ ಪರ 10 ಪಂದ್ಯಗಳಿಂದ 11 ವಿಕೆಟ್ ಪಡೆದಿದ್ದರು.

ಅಷ್ಟೇ ಅಲ್ಲ, ಟಿ20 ಕ್ರಿಕೆಟ್’ನ ಪವರ್’ಪ್ಲೇನಲ್ಲಿ ಎರಡು ಮೇಡನ್ ಓವರ್’ಗಳನ್ನು ಎಸೆದು ಗಮನ ಸೆಳೆದಿದ್ದರು.

ಕರ್ನಾಟಕ ದಿಗ್ಗಜ ವೇಗದ ಬೌಲರ್, ಪೀಣ್ಯ ಎಕ್ಸ್’ಪ್ರೆಸ್ ಖ್ಯಾತಿಯ ಅಭಿಮನ್ಯು ಮಿಥನ್ ಬೆಂಗಳೂರಿನಲ್ಲಿ ಅಭಿಲಾಷ್ ಶೆಟ್ಟಿಗೆ ಬೌಲಿಂಗ್ ಪಾಠಗಳನ್ನು ಹೇಳಿ ಕೊಡುತ್ತಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿ ತಮ್ಮದೇ ರನ್ ಅಪ್ ಕ್ರಿಕೆಟ್ ಅಕಾಡೆಮಿಯಲ್ಲಿ ಮತ್ತು ಪ್ಯಾಲೇಸ್ ಗ್ರೌಂಡ್’ನಲ್ಲಿರುವ ಬ್ರಿಜೇಶ್ ಪಟೇಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಮಿಥುನ್ ಗರಡಿಯಲ್ಲಿ ಪಳಗುತ್ತಿರುವ ಯುವ ವೇಗಿಗಳು ಒಬ್ಬರಲ್ಲ ಇಬ್ಬರಲ್ಲ.. ಅವರಲ್ಲಿ ಒಬ್ಬ ಈ ಅಭಿಲಾಷ್ ಶೆಟ್ಟಿ.

ರಣಜಿ ಸಂಭಾವ್ಯರ ಪಟ್ಟಿಯಲ್ಲಿ ಕಾಣಿಸಿಕೊಂಡಿರುವ ಅಭಿಲಾಷ್ ಶೆಟ್ಟಿ ಕರ್ನಾಟಕ ರಣಜಿ ತಂಡದಲ್ಲೂ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

LEAVE A REPLY

Please enter your comment!
Please enter your name here

15 + 3 =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you