ಕ್ರಿಕೆಟ್ಐದು ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ವಿಜಯ ಪತಾಕೆ,...

ಐದು ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ವಿಜಯ ಪತಾಕೆ, ಇತಿಹಾಸ ನಿರ್ಮಿಸಿದ ಮಯಾಂಕ್ ಪಡೆ

-

- Advertisment -spot_img

ಐದು ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ವಿಜಯ ಪತಾಕೆ, ಇತಿಹಾಸ ನಿರ್ಮಿಸಿದ ಮಯಾಂಕ್ ಪಡೆ

ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಮಯಾಂಕ್ ಅಗರ್ವಾಲ್ ನಾಯಕತ್ವದ ಕರ್ನಾಟಕ ತಂಡ ದಾಖಲೆಯ ಐದನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಈ ಮೂಲಕ ಅತೀ ಹೆಚ್ಚು ಬಾರಿ ವಿಜಯ್ ಹಜಾರೆ ಟ್ರೋಫಿ ಗೆದ್ದ ತಮಿಳುನಾಡು ತಂಡದ ದಾಖಲೆಯನ್ನು ಕರ್ನಾಟಕ ತಂಡ ಸರಿಗಟ್ಟಿದೆ.
ವಡೋದರದಲ್ಲಿ ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ವಿದರ್ಭ ತಂಡವನ್ನು 36 ರನ್’ಗಳಿಂದ ಸೋಲಿಸಿ ಐದು ವರ್ಷಗಳ ನಂತರ ಚಾಂಪಿಯನ್ ಪಟ್ಟಕ್ಕೇರಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಸ್ಮರಣ್ ರವಿಚಂದ್ರನ್ ಬಾರಿಸಿದ ಅಮೋಘ ಶತಕ, ಕಷ್ಣನ್ ಶ್ರೀಜಿತ್ ಅರ್ಧಶತಕ ಹಾಗೂ ಅಭಿನವ್ ಮನೋಹರ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ನಿಗದಿತ 50 ಓವರ್’ಗಳಲ್ಲಿ 6 ವಿಕೆಟ್ ನಷ್ಟಕ್ಕೆ 348 ರನ್’ಗಳ ಬೃಹತ್ ಮೊತ್ತ ಕಲೆ ಹಾಕಿತು. ಶತಕವೀರ ಸ್ಮರಣ್ 92 ಎಸೆತಗಳಲ್ಲಿ 101 ರನ್, ವಿಕೆಟ್ ಕೀಪರ್ ಶ್ರೀಜಿತ್ 74 ಎಸೆತಗಳಲ್ಲಿ 78 ರನ್ ಮತ್ತು ಅಭಿನವ್ ಮನೋಹರ್ ಕೇವಲ 42 ಎಸೆತಗಳಲ್ಲಿ 79 ರನ್ ಸಿಡಿಸಿದರು.

ನಂತರ 349 ರನ್’ಗಳ ಕಠಿಣ ಗುರಿ ಬೆನ್ನಟ್ಟಿದ ಕರುಣ್ ನಾಯರ್ ನಾಯಕತ್ವದ ವಿದರ್ಭ 48.2 ಓವರ್’ಗಳಲ್ಲಿ 312 ರನ್’ಗಳಿಗೆ ಆಲೌಟಾಯಿತು. ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನವಿತ್ತ ಕರುಣ್ ನಾಯರ್ ಫೈನಲ್’ನಲ್ಲಿ ಕೇವಲ 27 ರನ್ನಿಗೆ ಔಟಾದರು. ಟೂರ್ನಿಯಲ್ಲಿ 8 ಇನ್ನಿಂಗ್ಸ್’ಗಳಿಂದ 5 ಶತಕಗಳ ಸಹಿತ 779 ರನ್ ಕಲೆ ಹಾಕಿದ ಕರುಣ್ ನಾಯರ್ ಸರಣಿಶ್ರೇಷ್ಠ ಪ್ರಶಸ್ತಿ ಪಡೆದರೆ, ಫೈನಲ್ ಪಂದ್ಯದ ಶತಕವೀರ ಸ್ಮರಣ್ ಪಂದ್ಯಶ್ರೇಷ್ಠರಾಗಿ ಮೂಡಿ ಬಂದರು.

LEAVE A REPLY

Please enter your comment!
Please enter your name here

two × 3 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you