ಕ್ರಿಕೆಟ್ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

-

- Advertisment -spot_img

 

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ ರಂಗನಪಲ್ಕೆ ಇವರ ಸಹಭಾಗಿತ್ವದಲ್ಲಿ, ಗಣೇಶ್ ಮಟ್ಟು (ಮಟ್ಟು ಅಸೋಸಿಯೇಟ್ಸ್) ಅವರ ಸಹಕಾರದೊಂದಿಗೆ, ಕೌಡೂರು ಸ್ಟೇಡಿಯಂ, ಗ್ಲಾರಿಡ ಎಸ್ಟೇಟ್ ರಂಗನಪಲ್ಕೆ ಇದರ ಸುಂದರ ಮೈದಾನದಲ್ಲಿ 15 ವರ್ಷ ವಯೋಮಿತಿಯ “ಅಕ್ಷಯ ಟಿ-20 ಕಪ್ – 2026” ಪಂದ್ಯಾವಳಿಗೆ ಭವ್ಯ ಚಾಲನೆ ದೊರೆಯಿತು.

ಉಡುಪಿ ಜಿಲ್ಲೆಯ ಪ್ರಮುಖ 6 ತಂಡಗಳು ಭಾಗವಹಿಸುತ್ತಿರುವ ಈ ಕೂಟದಲ್ಲಿ, ಇಂದು ನಡೆದ ‘A’ ಗುಂಪಿನ ಅರ್ಹತಾ ಸುತ್ತಿನಲ್ಲಿ ಅಕ್ಷಯ ಕ್ರಿಕೆಟ್ ಅಕಾಡೆಮಿ ಹಾಗೂ ಕೆ.ಆರ್.ಎಸ್ ಕಟಪಾಡಿ ತಂಡಗಳು ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆದು ಸೆಮಿ ಫೈನಲ್‌ಗೆ ಅರ್ಹತೆ ಪಡೆದಿವೆ.

ನಾಳೆ (02/05/2026) ‘B’ ಗುಂಪಿನ ಪಂದ್ಯಗಳಲ್ಲಿ ಎಚ್‌ಜೆಸಿ ಕ್ರಿಕೆಟ್ ಅಕಾಡೆಮಿ ಶಿರ್ವ, ಬಾ.ಕಾ. ಬ್ರಹ್ಮಾವರ ಹಾಗೂ ಅಕ್ಷಯ ‘B’ ತಂಡಗಳು ಸೆಣಸಲಿವೆ.

ಬಾನುವಾರ ಸೆಮಿ ಫೈನಲ್ ಮತ್ತು ಫೈನಲ್ ಪಂದ್ಯಗಳು ನಡೆಯಲಿವೆ.

ಇಂದಿನ ಉದ್ಘಾಟನಾ ಸಮಾರಂಭದಲ್ಲಿ ಸಂಯೋಜಕರೂ ಹಿರಿಯ ತರಬೇತುದಾರರಾದ ಸದಾನಂದ ಶಿರ್ವ, ದಯಾನಂದ ಬಂಗೇರ, ಉದಯ ಕಟಪಾಡಿ, ಉಡುಪಿಯ ಖ್ಯಾತ ವಕೀಲರಾದ ಗಣೇಶ್ ಮಟ್ಟು, ಯುಡಿಸಿಎ ಕಾರ್ಯದರ್ಶಿ ರೆನ್ ಟ್ರೇವೊರ್ ಡಯಾಸ್ ಹಾಗೂ ಇನ್ನಿತರ ಸ್ಥಳೀಯ ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರಗು ನೀಡಿದರು.

LEAVE A REPLY

Please enter your comment!
Please enter your name here

five × one =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you