ಕ್ರಿಕೆಟ್ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

-

- Advertisment -spot_img

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು ಯಶಸ್ವಿಯಾಗಿ ಆಯೋಜಿಸಲಾಯಿತು.

ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಿದ್ದು, ಕ್ರೀಡಾಭಿಮಾನಿಗಳಿಗೆ ರೋಚಕ ಪಂದ್ಯಾವಳಿಗಳನ್ನು ನೀಡಿದವು. ಅಂತಿಮ ಪಂದ್ಯದಲ್ಲಿ ವಿಹಾನ್ ಫೈಟರ್ಸ್ ಹರಿಖಂಡಿಗೆ ತಂಡವು SLNC ಉಳ್ಳಾಲ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು.

ಟೂರ್ನಿಯಲ್ಲಿ ವಿಹಾನ್ ಫೈಟರ್ಸ್ ಬಿ ತಂಡವು ಮೂರನೇ ಸ್ಥಾನವನ್ನು ಪಡೆದುಕೊಂಡರೆ, ಕೊಂಕಣ್ ಎಕ್ಸ್ ಪ್ರೆಸ್ ಕೋಟೇಶ್ವರ ತಂಡ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟಿತು.

ಅಂತಿಮ ಪಂದ್ಯದಲ್ಲಿ “ದೀಪಕ್ ಕಾಮತ್ ಬೆಳ್ಮಣ್” ಅವರು ಮ್ಯಾನ್ ಆಫ್ ದ ಮ್ಯಾಚ್ ಪ್ರಶಸ್ತಿಗೆ ಭಾಜನರಾದರು. ಟೂರ್ನಿಯ ಅತ್ಯುತ್ತಮ ಬೌಲರ್ ಪ್ರಶಸ್ತಿಯನ್ನು “ಆಧೇಶ್ ಭಟ್ ಮೂಲ್ಕಿ” ಪಡೆದುಕೊಂಡರೆ, ಅತ್ಯುತ್ತಮ ಬ್ಯಾಟ್ಸ್‌ಮನ್ ಪ್ರಶಸ್ತಿ “ವಿವೇಕ್ ಪ್ರಭು ಅಂಬಾಗಿಲು” ಅವರಿಗೆ ಲಭಿಸಿತು. ಟೂರ್ನಿಯ ಮ್ಯಾನ್ ಆಫ್ ದ ಸೀರೀಸ್ ಪ್ರಶಸ್ತಿಯನ್ನು “ಪವನ್ ಉಳ್ಳಾಲ” ತಮ್ಮದಾಗಿಸಿಕೊಂಡರು. ಶರತ್ ಪ್ರಭು( ಬುಲ್ಲಿ) ಅವರು ಅತ್ಯುತ್ತಮ ವಿಕೆಟ್ ಕೀಪರ್ ಪ್ರಶಸ್ತಿಯನ್ನು ಪಡೆದರು ಹಾಗೂ ಪವನ್ ಉಳ್ಳಾಲ ಅವರು ಅತ್ಯುತ್ತಮ ಫೀಲ್ಡರ್ ಪ್ರಶಸ್ತಿಗೆ ಭಾಜನರಾದರು.

ಈ ಟೂರ್ನಿಯನ್ನು ಅಂಬಾಗಿಲು ಎಆರ್ ಫ್ರೆಂಡ್ಸ್ ತಂಡವು ವಿವೇಕ್ ಪ್ರಭು ಅವರ ನೇತೃತ್ವದಲ್ಲಿ ಸಮರ್ಪಕವಾಗಿ ಆಯೋಜಿಸಿ, ಕ್ರೀಡಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು.

ಈ ಸಂದರ್ಭ ಜಿಎಸ್‌ಬಿ ಸಮುದಾಯದ ಮೂವರು ಮಹಾನ್ ಕ್ರಿಕೆಟಿಗರನ್ನು ಗುರುತಿಸಿ ಸನ್ಮಾನಿಸಲಾಯಿತು. ಶರತ್ ಪ್ರಭು, ಗಿರೀಶ್ ಪೈ ಮಂಗಳೂರು ಹಾಗೂ ಗಣೇಶ್ ನಾಯಕ್ ಕೋಟ ಇವರ ಕ್ರಿಕೆಟ್ ಕ್ಷೇತ್ರದ ಅಮೂಲ್ಯ ಕೊಡುಗೆಗಳನ್ನು ಪರಿಗಣಿಸಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here

3 × five =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you