Uncategorizedಉತ್ತಮ ಸ್ಥಿತಿಯಲ್ಲಿ ಆಂಧ್ರ ತಂಡ, ಕ್ಯಾಪ್ಟನ್ ತಿಮ್ಮಪ್ಪಯ್ಯ ಟ್ರೋಫಿ ಕ್ರಿಕೆಟ್ ಟೂರ್ನಿಯ...

ಉತ್ತಮ ಸ್ಥಿತಿಯಲ್ಲಿ ಆಂಧ್ರ ತಂಡ, ಕ್ಯಾಪ್ಟನ್ ತಿಮ್ಮಪ್ಪಯ್ಯ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್‌  ಪಂದ್ಯ

-

- Advertisment -spot_img

ಬೆಂಗಳೂರು : ಎರಡನೇ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರೂ ಮೊದಲ ಇನಿಂಗ್ಸ್‌ನಲ್ಲಿ ಗಳಿಸಿದ ಮುನ್ನಡೆಯು ಆಂಧ್ರ ಕ್ರಿಕೆಟ್ ಸಂಸ್ಥೆಯನ್ನು ಉತ್ತಮ ಸ್ಥಿತಿಗೆ ತಲುಪಿಸಿದೆ. ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕ್ಯಾಪ್ಟನ್ ತಿಮ್ಮಪ್ಪಯ್ಯ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್‌  ಪಂದ್ಯದ ಮೂರನೇ ದಿನದಾಟದ ಮುಕ್ತಾಯಕ್ಕೆ ಆಂಧ್ರ ಒಟ್ಟಾರೆ 305 ರನ್‌ಗಳ ಮುನ್ನಡೆ ಸಾಧಿಸಿದೆ.

ಮೊದಲ ಇನಿಂಗ್ಸ್‌ನಲ್ಲಿ 313 ರನ್ ಗಳಿಸಿದ್ದ ಆಂಧ್ರ ಭಾನುವಾರದ ದಿನದಾಟ ಮುಕ್ತಾಯಗೊಂಡಾಗ ‘ಛತ್ತೀಸಗಡ ಕ್ರಿಕೆಟ್ ಸಂಘ’ದ ಏಳು ವಿಕೆಟ್ ಕಬಳಿಸಿತ್ತು. ಛತ್ತೀಸಗಡ 182 ರನ್‌ಗಳ ಹಿನ್ನಡೆಯಲ್ಲಿತ್ತು. ಸೋಮವಾರ 16 ರನ್‌ ಗಳಿಸುವಷ್ಟರಲ್ಲಿ ಉಳಿದ ಮೂರು ವಿಕೆಟ್‌ಗಳನ್ನು ಆಂಧ್ರ ಬೌಲರ್‌ಗಳು ಉರುಳಿಸಿದರು. ಈ ಮೂಲಕ ತಂಡ 166 ರನ್‌ಗಳ ಮುನ್ನಡೆ ಸಾಧಿಸಿತು.

ಎರಡನೇ ಇನಿಂಗ್ಸ್‌ನಲ್ಲಿ ಆಂಧ್ರ ತಂಡಕ್ಕೆ ಛತ್ತೀಸಗಡ ಬೌಲರ್‌ಗಳು ಪೆಟ್ಟು ನೀಡಿದರು. ಒಂಬತ್ತು ರನ್‌ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡ ಆಂಧ್ರ ನಂತರ 24 ರನ್‌ ಗಳಿಸುವಷ್ಟರಲ್ಲಿ ಮತ್ತೊಬ್ಬ ಆರಂಭಿಕ ಬ್ಯಾಟ್ಸ್‌ಮನ್‌ ವಿಕೆಟ್ ಕೂಡ ಕಳೆದುಕೊಂಡಿತು. ಜ್ಯೋತಿ ಸಾಯಿ ಕೃಷ್ಣ ಮತ್ತು ರಿಕಿ ಭುಯಿ ಇನಿಂಗ್ಸ್ ಕಟ್ಟಲು ಪ್ರಯತ್ನಿಸಿದರು. ಆದರೆ ಈ ಜೋಡಿಗೆ 17 ರನ್‌ ಸೇರಿಸಲಷ್ಟೇ ಸಾಧ್ಯವಾಯಿತು.

ಜ್ಯೋತಿ ಸಾಯಿ ಔಟಾದ ನಂತರ ರಿಕಿ ಜೊತೆಗೂಡಿದ ಕರಣ್ ಶಿಂಧೆ 36 ರನ್‌ ಸೇರಿಸಿದರು. ಇವರಿಬ್ಬರ ಜೊತೆಯಾಟವೂ ಮುರಿದು ಬಿದ್ದ ನಂತರ ಆಂಧ್ರ ಇನಿಂಗ್ಸ್‌ ಮತ್ತೆ ಪತನದತ್ತ ಸಾಗಿತು. ದಿನದಾಟ ಮುಕ್ತಾಯದ ವೇಳೆ ಶೋಯೆಬ್‌ ಮೊಹಮ್ಮದ್ ಖಾನ್ ಭರವಸೆಯಾಗಿ ಉಳಿದಿದ್ದಾರೆ.

ಸಂಕ್ಷಿಪ್ತ ಸ್ಕೋರು: ಮೊದಲ ಇನಿಂಗ್ಸ್‌: ಆಂಧ್ರ ಕ್ರಿಕೆಟ್ ಸಂಸ್ಥೆ: 313; ಛತ್ತೀಸಗಡ ಕ್ರಿಕೆಟ್ ಸಂಘ: 43 ಓವರ್‌ಗಳಲ್ಲಿ 147 (ಕೆ.ವಿ.ಶಶಿಕಾಂತ್ 39ಕ್ಕೆ4, ಸಿ.ಎಚ್‌.ಸ್ಟೀಫನ್ 52ಕ್ಕೆ3, ಗಿರಿನಾಥ್‌ ರೆಡ್ಡಿ 40ಕ್ಕೆ2); ಎರಡನೇ ಇನಿಂಗ್ಸ್‌: ಆಂಧ್ರ ಕ್ರಿಕೆಟ್ ಸಂಸ್ಥೆ: 48 ಓವರ್‌ಗಳಲ್ಲಿ 7ಕ್ಕೆ 139 (ರಿಕಿ ಭುಯಿ 24, ಕರಣ್ ಶಿಂಧೆ 22, ಶೋಯೆಬ್‌ ಮೊಹಮ್ಮದ್ ಖಾನ್ ಔಟಾಗದೆ 20; ಪಂಕಜ್ ರಾವ್‌ 28ಕ್ಕೆ1, ಪುನೀತ್ ದಾತೆ 19ಕ್ಕೆ3, ವೀರ ಪ್ರತಾಪ ಸಿಂಗ್‌ 39ಕ್ಕೆ1)

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twenty + 8 =

Latest news

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್, ಪಿತ್ರೋಡಿ ಸಂಸ್ಥೆಯ ವತಿಯಿಂದ ಪ್ರತಿವರ್ಷದಂತೆ ಈ...

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ ಹುಣಸವಳ್ಳಿ ಹಾಗೂ ಕುರುವಳ್ಳಿ ಪೋಸ್ಟ್, ತೀರ್ಥಹಳ್ಳಿ ತಾಲೂಕು ಕ್ರೀಡಾಭಿಮಾನಿಗಳಿಗೆ ಸಂತಸದ ಸುದ್ದಿ. ಆಗುಂಬೆ ಮತ್ತು ಮುತ್ತೂರು...

ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ

  ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ ಕ್ರಿಕೆಟ್ ಜೀವನದಲ್ಲಿ ಕೆಲ ಕ್ಷಣಗಳು ಆಟಗಾರನ ಜೀವನವನ್ನೇ ಬದಲಾಯಿಸುತ್ತವೆ. ಆ ಕ್ಷಣಗಳು ನೋವು,...

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...
- Advertisement -spot_imgspot_img

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

Must read

- Advertisement -spot_imgspot_img

You might also likeRELATED
Recommended to you