18.4 C
London
Saturday, May 18, 2024
HomeUncategorizedಉತ್ತಮ ಸ್ಥಿತಿಯಲ್ಲಿ ಆಂಧ್ರ ತಂಡ, ಕ್ಯಾಪ್ಟನ್ ತಿಮ್ಮಪ್ಪಯ್ಯ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್‌  ಪಂದ್ಯ

ಉತ್ತಮ ಸ್ಥಿತಿಯಲ್ಲಿ ಆಂಧ್ರ ತಂಡ, ಕ್ಯಾಪ್ಟನ್ ತಿಮ್ಮಪ್ಪಯ್ಯ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್‌  ಪಂದ್ಯ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ಬೆಂಗಳೂರು : ಎರಡನೇ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರೂ ಮೊದಲ ಇನಿಂಗ್ಸ್‌ನಲ್ಲಿ ಗಳಿಸಿದ ಮುನ್ನಡೆಯು ಆಂಧ್ರ ಕ್ರಿಕೆಟ್ ಸಂಸ್ಥೆಯನ್ನು ಉತ್ತಮ ಸ್ಥಿತಿಗೆ ತಲುಪಿಸಿದೆ. ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕ್ಯಾಪ್ಟನ್ ತಿಮ್ಮಪ್ಪಯ್ಯ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್‌  ಪಂದ್ಯದ ಮೂರನೇ ದಿನದಾಟದ ಮುಕ್ತಾಯಕ್ಕೆ ಆಂಧ್ರ ಒಟ್ಟಾರೆ 305 ರನ್‌ಗಳ ಮುನ್ನಡೆ ಸಾಧಿಸಿದೆ.

ಮೊದಲ ಇನಿಂಗ್ಸ್‌ನಲ್ಲಿ 313 ರನ್ ಗಳಿಸಿದ್ದ ಆಂಧ್ರ ಭಾನುವಾರದ ದಿನದಾಟ ಮುಕ್ತಾಯಗೊಂಡಾಗ ‘ಛತ್ತೀಸಗಡ ಕ್ರಿಕೆಟ್ ಸಂಘ’ದ ಏಳು ವಿಕೆಟ್ ಕಬಳಿಸಿತ್ತು. ಛತ್ತೀಸಗಡ 182 ರನ್‌ಗಳ ಹಿನ್ನಡೆಯಲ್ಲಿತ್ತು. ಸೋಮವಾರ 16 ರನ್‌ ಗಳಿಸುವಷ್ಟರಲ್ಲಿ ಉಳಿದ ಮೂರು ವಿಕೆಟ್‌ಗಳನ್ನು ಆಂಧ್ರ ಬೌಲರ್‌ಗಳು ಉರುಳಿಸಿದರು. ಈ ಮೂಲಕ ತಂಡ 166 ರನ್‌ಗಳ ಮುನ್ನಡೆ ಸಾಧಿಸಿತು.

ಎರಡನೇ ಇನಿಂಗ್ಸ್‌ನಲ್ಲಿ ಆಂಧ್ರ ತಂಡಕ್ಕೆ ಛತ್ತೀಸಗಡ ಬೌಲರ್‌ಗಳು ಪೆಟ್ಟು ನೀಡಿದರು. ಒಂಬತ್ತು ರನ್‌ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡ ಆಂಧ್ರ ನಂತರ 24 ರನ್‌ ಗಳಿಸುವಷ್ಟರಲ್ಲಿ ಮತ್ತೊಬ್ಬ ಆರಂಭಿಕ ಬ್ಯಾಟ್ಸ್‌ಮನ್‌ ವಿಕೆಟ್ ಕೂಡ ಕಳೆದುಕೊಂಡಿತು. ಜ್ಯೋತಿ ಸಾಯಿ ಕೃಷ್ಣ ಮತ್ತು ರಿಕಿ ಭುಯಿ ಇನಿಂಗ್ಸ್ ಕಟ್ಟಲು ಪ್ರಯತ್ನಿಸಿದರು. ಆದರೆ ಈ ಜೋಡಿಗೆ 17 ರನ್‌ ಸೇರಿಸಲಷ್ಟೇ ಸಾಧ್ಯವಾಯಿತು.

ಜ್ಯೋತಿ ಸಾಯಿ ಔಟಾದ ನಂತರ ರಿಕಿ ಜೊತೆಗೂಡಿದ ಕರಣ್ ಶಿಂಧೆ 36 ರನ್‌ ಸೇರಿಸಿದರು. ಇವರಿಬ್ಬರ ಜೊತೆಯಾಟವೂ ಮುರಿದು ಬಿದ್ದ ನಂತರ ಆಂಧ್ರ ಇನಿಂಗ್ಸ್‌ ಮತ್ತೆ ಪತನದತ್ತ ಸಾಗಿತು. ದಿನದಾಟ ಮುಕ್ತಾಯದ ವೇಳೆ ಶೋಯೆಬ್‌ ಮೊಹಮ್ಮದ್ ಖಾನ್ ಭರವಸೆಯಾಗಿ ಉಳಿದಿದ್ದಾರೆ.

ಸಂಕ್ಷಿಪ್ತ ಸ್ಕೋರು: ಮೊದಲ ಇನಿಂಗ್ಸ್‌: ಆಂಧ್ರ ಕ್ರಿಕೆಟ್ ಸಂಸ್ಥೆ: 313; ಛತ್ತೀಸಗಡ ಕ್ರಿಕೆಟ್ ಸಂಘ: 43 ಓವರ್‌ಗಳಲ್ಲಿ 147 (ಕೆ.ವಿ.ಶಶಿಕಾಂತ್ 39ಕ್ಕೆ4, ಸಿ.ಎಚ್‌.ಸ್ಟೀಫನ್ 52ಕ್ಕೆ3, ಗಿರಿನಾಥ್‌ ರೆಡ್ಡಿ 40ಕ್ಕೆ2); ಎರಡನೇ ಇನಿಂಗ್ಸ್‌: ಆಂಧ್ರ ಕ್ರಿಕೆಟ್ ಸಂಸ್ಥೆ: 48 ಓವರ್‌ಗಳಲ್ಲಿ 7ಕ್ಕೆ 139 (ರಿಕಿ ಭುಯಿ 24, ಕರಣ್ ಶಿಂಧೆ 22, ಶೋಯೆಬ್‌ ಮೊಹಮ್ಮದ್ ಖಾನ್ ಔಟಾಗದೆ 20; ಪಂಕಜ್ ರಾವ್‌ 28ಕ್ಕೆ1, ಪುನೀತ್ ದಾತೆ 19ಕ್ಕೆ3, ವೀರ ಪ್ರತಾಪ ಸಿಂಗ್‌ 39ಕ್ಕೆ1)

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

three × four =