ಸ್ಪೋರ್ಟ್ಸ್ವೇಟ್‌ಲಿಫ್ಟಿಂಗ್‌ನಲ್ಲಿ ಮತ್ತೊಂದು ಚಿನ್ನದ ಪದಕಕ್ಕೆ‌ ಮುತ್ತಿಕ್ಕಿದ ಜೆರೆಮಿ, ಭಾರತದ ಮಡಿಲಿಗೆ ಎರಡನೆ...

ವೇಟ್‌ಲಿಫ್ಟಿಂಗ್‌ನಲ್ಲಿ ಮತ್ತೊಂದು ಚಿನ್ನದ ಪದಕಕ್ಕೆ‌ ಮುತ್ತಿಕ್ಕಿದ ಜೆರೆಮಿ, ಭಾರತದ ಮಡಿಲಿಗೆ ಎರಡನೆ ಚಿನ್ನದ ಪದಕ

-

- Advertisment -spot_img
ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್‌ ಕೂಟದಲ್ಲಿ  ವೇಟ್‌ಲಿಫ್ಟಿಂಗ್‌ನಲ್ಲಿ ಭಾರತದ ಪ್ರದರ್ಶನ ಶಕ್ತಿಯುತವಾಗಿ ಮುಂದುವರಿದಿದ್ದು ಯುವ ವೇಟ್‌ಲಿಫ್ಟರ್‌ ಜೆರೆಮಿ ಲಾಲ್‌ರಿನುಂಗಾ ಅವರು ಶನಿವಾರ ಚಿನ್ನದ ಪದಕ ಗೆದ್ದು ಭಾರತ ಮಡಿಲಿಗೆ ಎರಡನೇ ಚಿನ್ನ ತಂದು ಬೀಗಿದರು.
ಮಿಜೊರಾಂ ರಾಜ್ಯದ ಐಜ್ವಾಲ್‌ನ 19 ವರ್ಷದ ಜೆರೆಮಿ ಪುರುಷರ 67 ಕೆ.ಜಿ ವಿಭಾಗದಲ್ಲಿ ಅಸಾಧಾರಣ ಸಾಮರ್ಥ್ಯ ತೋರಿ, ಒಟ್ಟು 300 ಕೆ.ಜಿ ಭಾರ ಎತ್ತಿದ್ದಾರೆ ಮತ್ತು ಕಾಮನ್‌ವೆಲ್ತ್ ನಲ್ಲಿ ಎರಡು ಕೂಟ ದಾಖಲೆಗಳನ್ನೂ ತಮ್ಮ ಹೆಸರಿಗೆ ಬರೆಯಿಸಿಕೊಂಡು ದಾಖಲೆ ನಿರ್ಮಿಸಿದ್ದಾರೆ.
ಸ್ನ್ಯಾಚ್‌ನಲ್ಲಿ 140 ಕೆ.ಜಿ ಹಾಗೂ ಕ್ಲೀನ್‌ ಮತ್ತು ಜರ್ಕ್‌ನಲ್ಲಿ 160 ಕೆ.ಜಿ ಎತ್ತಿದ್ದಾರೆ. ಸ್ನ್ಯಾಚ್‌ ಮತ್ತು ಒಟ್ಟಾರೆ ವಿಭಾಗದಲ್ಲಿ ಅವರು ದಾಖಲೆ ಸ್ಥಾಪಿಸಿದರು. 2018ರ ಯೂತ್‌ ಒಲಿಂಪಿಕ್ಸ್‌ನಲ್ಲಿ ಚಿನ್ನ ಜಯಿಸಿದ್ದ ಜೆರೆಮಿ, ಈ ಸಾಧನೆಯ ಮೂಲಕ ಸೀನಿಯರ್‌ ವಿಭಾಗಕ್ಕೆ ಭರ್ಜರಿ ಪ್ರವೇಶ ಪಡೆದುಕೊಂಡಿದ್ದಾರೆ.
ಕ್ಲೀನ್‌ ಮತ್ತು ಜರ್ಕ್‌ನಲ್ಲಿ ಭಾರ ಎತ್ತುವ ವೇಳೆ ಎರಡು ಸಲ ನೋವು ಅನುಭವಿಸಿದರೂ, ಛಲ ಬಿಡಲಿಲ್ಲ. ಸ್ನ್ಯಾಚ್‌ನಲ್ಲಿ ಎರಡನೇ ಪ್ರಯತ್ನದಲ್ಲಿ 140 ಕೆ.ಜಿ ಎತ್ತಿದ ಅವರು ಎದುರಾಳಿಗಳನ್ನು ಹಿಂದಿಕ್ಕಿದರು. ಕೊನೆಯ ಪ್ರಯತ್ನದಲ್ಲಿ 143 ಕೆ.ಜಿ ಎತ್ತಲು ಪ್ರಯತ್ನಿಸಿದರೂ ವಿಫಲರಾದರು.
ಕ್ಲೀನ್‌ ಮತ್ತು ಜರ್ಕ್‌ನಲ್ಲಿ ಮೊದಲ ಪ್ರಯತ್ನದಲ್ಲಿ 154 ಕೆ.ಜಿ ಹಾಗೂ ಎರಡನೇ ಪ್ರಯತ್ನದಲ್ಲಿ 160 ಕೆ.ಜಿ. ಭಾರ ಎತ್ತಿದರು. ಮೂರನೇ ಅವಕಾಶದಲ್ಲಿ 165 ಕೆ.ಜಿ ಎತ್ತಲು ಪ್ರಯತ್ನಿಸಿ ವಿಫಲರಾದರು. ಆದರೆ ಎರಡನೇ ಪ್ರಯತ್ನದಲ್ಲೇ ಅವರು ಚಿನ್ನ ಖಚಿತಪಡಿಸಿಕೊಂಡಿದ್ದರು.
ಸಮೋವದ ವೈಪವ ನೆವೊ (127 ಕೆ.ಜಿ+ 166 ಕೆ.ಜಿ) ಅವರು ಬೆಳ್ಳಿ ಹಾಗೂ ನೈಜೀರಿಯಾದ ಜೋಸೆಫ್‌ ಉಮೊಫಿಯ (130 ಕೆ.ಜಿ+ 160 ಕೆ.ಜಿ) ಕಂಚು ಗೆದ್ದುಕೊಂಡರು.
ಭಾರತ ಒಟ್ಟು ಐದು ಪದಕ ಜಯಿಸಿದೆ. ಮೀರಾಬಾಯಿ ಚಾನು, ಸಂಕೇತ್‌ ಸರ್ಗರ್‌ ಮತ್ತು ಗುರುರಾಜ ಪೂಜಾರಿ ಅವರು ಕ್ರಮವಾಗಿ ಚಿನ್ನ, ಬೆಳ್ಳಿ ಹಾಗೂ ಕಂಚು ಗೆದ್ದಿದ್ದಾರೆ ಬಿಂದ್ಯಾರಾಣಿ ಬೆಳ್ಳಿಗೆದ್ದಿದ್ದಾರೆ
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

10 + twenty =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you