ಕ್ರಿಕೆಟ್ಆಟದ ಗತಿಯನ್ನೇ ಬದಲಿಸಿ ಮಹತ್ವದ ತಿರುವು ನೀಡಿದ ಭಾರತದ ಆತ್ಮವಿಶ್ವಾಸದ ಕಮಾಂಡರ್

ಆಟದ ಗತಿಯನ್ನೇ ಬದಲಿಸಿ ಮಹತ್ವದ ತಿರುವು ನೀಡಿದ ಭಾರತದ ಆತ್ಮವಿಶ್ವಾಸದ ಕಮಾಂಡರ್

-

- Advertisment -spot_img

ಆಟದ ಗತಿಯನ್ನೇ ಬದಲಿಸಿ ಮಹತ್ವದ ತಿರುವು ನೀಡಿದ ಭಾರತದಆತ್ಮವಿಶ್ವಾಸದ ಕಮಾಂಡರ್

ಭಾರತದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಬುಧವಾರ (ಡಿ 18) ನಿವೃತ್ತಿ ಘೋಷಿಸಿದ್ದಾರೆ.

ಭಾರತ ತಂಡದಲ್ಲಿ ಅಶ್ವಿನ್ ಯಾವಾಗಲೂ ಮ್ಯಾಚ್ ವಿನ್ನರ್ ಮತ್ತು ವಿಕೆಟ್ ಟೇಕರ್ ಆಗಿದ್ದಾರೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.

ಭಾರತ ತಂಡಕ್ಕೆ ಹಲವು ನಿರ್ಣಾಯಕ ಕ್ಷಣಗಳಲ್ಲಿ ವಿಕೆಟ್ ಕಬಳಿಸಿ ಟರ್ನಿಂಗ್ ಪಾಯಿಂಟ್ ಸೃಷ್ಟಿಸುವ ಮೂಲಕ ಆಟದ ಗತಿಯನ್ನೇ ಬದಲಿಸಿದವರು ಅಶ್ವಿನ್ ಎನ್ನುವುದರಲ್ಲಿ ಎರಡು ಮಾತಿಲ್ಲ. ಕೆಲ ಸಂದರ್ಭಗಳಲ್ಲಿ ಬ್ಯಾಟಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಭಾರತ ತಂಡದ ಯಶಸ್ಸಿಗೆ ಕಾರಣರಾಗಿದ್ದಾರೆ.

2021 ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಸಿಡ್ನಿ ಟೆಸ್ಟ್‌ನಲ್ಲಿ ಅಶ್ವಿನ್ ಅವರ ಅದ್ಭುತ ಪ್ರದರ್ಶನವನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಟೆಸ್ಟ್ ಮಾತ್ರವಲ್ಲದೆ, ಏಕದಿನ ಮತ್ತು ಟಿ20 ಪಂದ್ಯಗಳಲ್ಲಿಯೂ ಸಹ ಅಶ್ವಿನ್ ತನ್ನನ್ನು ತಾನು ವ್ಯಕ್ತಪಡಿಸುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಸಮರ್ಥರಾಗಿದ್ದಾರೆ.

2022ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಶ್ವಿನ್ ಆಡಿದ ಮೈಂಡ್ ಗೇಮ್ ಎಂದಿಗೂ ಮರೆಯಲಾಗದು.ಎದುರಾಳಿ ತಂಡಕ್ಕೆ ಬೌಲಿಂಗ್ ಮಾಡುವಾಗ ಬ್ಯಾಟ್ಸ್‌ಮನ್‌ಗಳ ಮನಸ್ಥಿತಿಯನ್ನು ತಿಳಿದುಕೊಳ್ಳುವಲ್ಲಿ ಅಶ್ವಿನ್‌ ಅವರದ್ದು ಎತ್ತಿದ ಕೈ. ಅಶ್ವಿನ್‌ಗೆ ಬ್ಯಾಟ್ಸ್‌ಮನ್‌ಗಳು ಯಾವ ವಾತಾವರಣದಲ್ಲಿದ್ದಾರೆ, ಅವರು ನರ್ವಸ್ ಆಗಿರಲಿ ಅಥವಾ ಒತ್ತಡದಲ್ಲಿರಲಿ ಅದಕ್ಕೆ ತಕ್ಕಂತೆ ಬೌಲಿಂಗ್ ಮಾಡುತ್ತಾರೆ. ಅದೇ ರೀತಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲೂ ಅಶ್ವಿನ್ ಅವರು ಆಟಗಾರರ ಆತಂಕ, ಗಾಬರಿಯನ್ನು ಸುಲಭವಾಗಿ ಪಾಸಿಟಿವ್ ಆಗಿ ಪರಿವರ್ತಿಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ 

ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅನೇಕ ಸಾಧನೆಗಳನ್ನು ಮತ್ತು ಮೈಲಿಗಲ್ಲುಗಳನ್ನು ಸಾಧಿಸಿದ್ದಾರೆ. ವೇಗದ 300 ವಿಕೆಟ್, 2ನೇ ಗರಿಷ್ಠ ವಿಕೆಟ್ ಹೀಗೆ ಹಲವು ದಾಖಲೆಗಳನ್ನು ಅಶ್ವಿನ್ ನಿರ್ಮಿಸಿದ್ದಾರೆ.

ಧೋನಿ  ಸಿಎಸ್‌ಕೆ ಯಲ್ಲಿದ್ದಾಗಲೂ ಅಶ್ವಿನ್ ಅವರ ಬೌಲಿಂಗ್ ಮತ್ತು ಕೌಶಲ್ಯಗಳನ್ನು ಚೆನ್ನಾಗಿ ಬಳಸಿಕೊಂಡಿದ್ದಾರೆ. ಅಶ್ವಿನ್ ಅವರ ಪ್ರತಿಭೆಯನ್ನು ಪ್ರದರ್ಶಿಸಲು ಧೋನಿ ಅನೇಕ ಅವಕಾಶಗಳನ್ನು ನೀಡಿದರು. ಸಿಎಸ್ ಕೆ ನಾಯಕರಾಗಿದ್ದಾಗ ಹಾಗೂ ಧೋನಿ ಭಾರತ ತಂಡದ ನಾಯಕರಾಗಿದ್ದಾಗ ಅಶ್ವಿನ್ ಪ್ರತಿಭೆ ಹೊರತರುವಲ್ಲಿ ಧೋನಿ ಪ್ರಮುಖ ಪಾತ್ರ ವಹಿಸಿದ್ದರು.

2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಅಶ್ವಿನ್ ಭಾರತ ತಂಡವನ್ನು 5 ರನ್‌ಗಳಿಂದ ಗೆಲ್ಲಲು ನೆರವಾದರು. ಅಶ್ವಿನ್ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡರು ಮತ್ತು ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ 537 ವಿಕೆಟ್‌ಗಳೊಂದಿಗೆ ಭಾರತದಲ್ಲಿ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರೂ, ಅವರ 300 ನೇ ವಿಕೆಟ್ ವಿಶೇಷ ಹಿರಿಮೆ ಹೊಂದಿದೆ.

ಹೌದು, ಅಶ್ವಿನ್ ಕೇವಲ 54 ಪಂದ್ಯಗಳಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 300ನೇ ವಿಕೆಟ್‌ಗೆ ತಲುಪಿದ್ದಾರೆ. ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ 300 ವಿಕೆಟ್‌ಗಳನ್ನು ವೇಗವಾಗಿ ಉರುಳಿಸುವ ಮೂಲಕ ಡೆನ್ನಿಸ್ ಲಿಲ್ಲಿ ಅವರ ದಾಖಲೆಯನ್ನು ಮುರಿದರು.

ಡೆನ್ನಿಸ್ ಲಿಲ್ಲಿ 56 ಟೆಸ್ಟ್ ಪಂದ್ಯಗಳಲ್ಲಿ 300 ವಿಕೆಟ್ ಗಳಿಸಿದ್ದರೆ, ಅಶ್ವಿನ್ 54 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಅದೂ ಅಲ್ಲದೆ ಅಶ್ವಿನ್ ಮುರಳೀಧರನ್ ಅವರಿಗಿಂತ 4 ಕಡಿಮೆ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ.2011ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಅಶ್ವಿನ್, ಮುಂದಿನ 6 ವರ್ಷಗಳಲ್ಲಿ 300 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಕ್ರಿಕೆಟ್ ಜಗತ್ತನ್ನು ನಿಬ್ಬೆರಗಾಗಿಸಿದ್ದರು.

ಭಾರತ ತಂಡದಲ್ಲಿ ಅಶ್ವಿನ್ ಸಾಧನೆ ಮಾಡಲು ಮತ್ತು ವಿಶ್ವ ಕ್ರಿಕೆಟ್‌ನಲ್ಲಿ ಛಾಪು ಮೂಡಿಸಲು ಇನ್ನೂ ಸಾಕಷ್ಟು ಸಮಯವಿರುವಾಗ , ಮೊನ್ನೆ ಕ್ರಿಕೆಟ್ ಜಗತ್ತು ಇದ್ದಕ್ಕಿದ್ದಂತೆ ಅವರ ಕೊಡುಗೆಯನ್ನು ಕಳೆದುಕೊಂಡಿದೆ.

LEAVE A REPLY

Please enter your comment!
Please enter your name here

14 − five =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you