ಭರವಸೆಯ ಬೆಳಕುಆಗಸ್ಟ್ 06 ರಂದು ಬೆಂಗಳೂರಿನಲ್ಲಿ ಕರಾವಳಿ ಸಿರಿ ಕ್ಲಬ್ ಉದ್ಘಾಟನೆ ಹಾಗೂ...

ಆಗಸ್ಟ್ 06 ರಂದು ಬೆಂಗಳೂರಿನಲ್ಲಿ ಕರಾವಳಿ ಸಿರಿ ಕ್ಲಬ್ ಉದ್ಘಾಟನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ!!

-

- Advertisment -spot_img
ಸಣ್ಣದೊಂದು ಕನಸು ದೊಡ್ಡ ಯೋಚನೆ ಮೂಲಕ ಚಿಕ್ಕ ತಂಡದೊಂದಿಗೆ ಕರಾವಳಿ ಸಿರಿ ಕ್ಲಬ್ ಬೆಂಗಳೂರು ಎನ್ನುವ ನಾಮ-ಧ್ಯೇಯದೊಂದಿಗೆ ಭರವಸೆಯ ಬೆಳಕಾಗಿ  ಒಂದು ಸಂಘಟನೆ ಪ್ರಾರಂಭವಾಗುತ್ತಾ ಇದೆ.
ಇದರ ಉಧ್ಘಾಟನಾ ಸಮಾರಂಭ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ ನಾಳೆಯ ದಿನ ತಾರೀಕು  6 ಆಗಸ್ಟ್ ಭಾನುವಾರದಂದು ಬೆಂಗಳೂರಿನ ಶೆಫ್ ಟಾಕ್ ಅಂಡ್ ಹಾಸ್ಪಿಟಾಲಿಟಿಸ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್, N1&2,5ನೇ ವಾರ್ಡ್, 8ನೇ ಅಡ್ಡ ರಸ್ತೆ, ಮುನಿರೆಡ್ಡಿ ಬಡಾವಣೆ, ಮಂಗಮ್ಮನ ಪಾಳ್ಯ ದಲ್ಲಿರುವ ನಾರಾಯಣ ಗುರು ಸಭಾಭವನ  ಇಲ್ಲಿ ನಡೆಯಲಿದೆ.
ಮಧ್ಯಾಹ್ನ 2 ಗಂಟೆಗೆ ಶ್ರೀ ಮಹಾಲಕ್ಷ್ಮಿ ಟ್ರಸ್ಟ್ (ರಿ) ಉಪ್ಪುಂದ ಇದರ ಅಧ್ಯಕ್ಷರು ಮತ್ತು ಶೆಫ್ ಟಾಕ್ ಅಂಡ್ ಹಾಸ್ಪಿಟಾಲಿಟಿಸ್ ಸರ್ವಿಸಸ್ ಪ್ರೈ.ಲಿ.ನ ವ್ಯವಸ್ಥಾಪಕ ನಿರ್ದೇಶಕರು ಆಗಿರುವಂತಹ ಶ್ರೀ ಗೋವಿಂದ ಬಾಬು ಪೂಜಾರಿ ಇವರು ಕರಾವಳಿ ಸಿರಿ ಕ್ಲಬ್ ಬೆಂಗಳೂರುನ ಉದ್ಘಾಟನೆ ಮಾಡಲಿರುವರು. ಇವರೊಂದಿಗೆ ಅನೇಕ ಚಲನ ಚಿತ್ರ ನಟರು,  ಸಿನಿಮಾ ನಿರ್ಮಾಪಕರು, ಚಲನ ಚಿತ್ರ ನಿರ್ದೇಶಕರು ಮತ್ತು  ಹೆಸರಾಂತ ನಿರೂಪಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ ಗಂಟಿಹೊಳೆ ಭಾಗವಹಿಸಲಿದ್ದಾರೆ.  ಸ್ಪೋರ್ಟ್ಸ್ ಕನ್ನಡ ವೆಬ್ ಸೈಟ್ ನ ಪ್ರಧಾನ ಸಂಪಾದಕ  ಕೋಟ ಶ್ರೀ ರಾಮಕೃಷ್ಣ ಆಚಾರ್ಯ ಇವರ ಗೌರವ ಉಪಸ್ಥಿತಿಯಲ್ಲಿ, ಪತ್ರಕರ್ತ ಮತ್ತು ಅಭಿಮತ ತಂಡದ ಸಂಸ್ಥಾಪಕ ವಸಂತ ಗಿಳಿಯಾರ್, ಬೆಂಗಳೂರಿನ ಹೋಟೆಲ್ ಉದ್ಯಮಿ ರಘುರಾಮ ಶೆಟ್ಟಿ ಮತ್ತು ಚಲನಚಿತ್ರ ನಟಿ ಅನುಷಾ ರೈ ಉಪಸ್ಥಿತರಿರುವರು. ಈ ಸಂದರ್ಭ ಸಮಾಜಸೇವೆ, ಸಂಗೀತ, ಯಕ್ಷಗಾನ  ಕಲಾಕ್ಷೇತ್ರಗಳಲ್ಲಿ  ಸಾಧನೆಯನ್ನು ಮಾಡಿದಂತಹ ಕರಾವಳಿಯ ಸಾಧಕರನ್ನು ಗೌರವಿಸಿ ಸನ್ಮಾನಿಸುವ ಗೌರವಾರ್ಪಣೆ ಕಾರ್ಯಕ್ರಮವು ಕೂಡ ನಡೆಯಲಿದೆ.
ಉದ್ಘಾಟನಾ ಕಾರ್ಯಕ್ರಮ ಮತ್ತು ಸಭಾ ಕಾರ್ಯಕ್ರಮದ ನಂತರ ನಂತರ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನೈಗಿ ನಾಗಣ್ಣ ಖ್ಯಾತಿಯ ನಾಗರಾಜ್ ತೆಕ್ಕಟ್ಟೆ ಸಾರಥ್ಯದ ಕಲಾಶಕ್ತಿ ಕನ್ನುಕೆರೆ ತೆಕ್ಕಟ್ಟೆ ಇವರಿಂದ ‘ನಗೆ ಕೊಪ್ಪರಿಗೆ’ ಎಂಬ ಹಾಸ್ಯ ಕಾರ್ಯಕ್ರಮ ನಡೆಯಲಿದೆ. ಇದಾದ ಬಳಿಕ ‘ಯಕ್ಷಗಾನ ನಾಟ್ಯ ವೈಭವ’ ಎಂಬ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಕರಾವಳಿ ಸಿರಿ ಕ್ಲಬ್  ನ  ಈ ಎಲ್ಲಾ ಕಾರ್ಯಕ್ರಮಗಳಿಗೆ ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ಆಗಿ ಕಾರ್ಯನಿರ್ವಹಿಸಲಿದ್ದು, ಸ್ಪೋರ್ಟ್ಸ್ ಕನ್ನಡ ಸಂಪೂರ್ಣ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಿದೆ.
ಜಾತಿ, ಧರ್ಮದ ಭೇದವಿಲ್ಲದೆ ಸಮಾಜಮುಖಿ ಕಾರ್ಯಗಳಿಗೆ ಸದಾ ಸಿದ್ಧರಾಗಿ, ಸಂಘಟನೆಯ ಮೂಲಕ ಸಮಾಜಸೇವೆ, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕರಾವಳಿ ಸಿರಿ ಕ್ಲಬ್ ನ ಎಲ್ಲಾ ಉದ್ದೇಶಗಳು, ಯೋಜನೆಗಳು ಈಡೇರಲಿ. ನಮ್ಮ ನುಡಿ, ನಮ್ಮ ಸಂಸ್ಕೃತಿ ಬೆಳೆಸುವ ಕಾರ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಯೋಚನೆಗಳೊಂದಿಗೆ ಮುಂದಿನ ಹೆಜ್ಜೆ ಇಡುವಂತಾಗಲಿ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

nineteen − 5 =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you