ಕ್ರಿಕೆಟ್ಆಸ್ಟ್ರೇಲಿಯಾ ವಿರುದ್ಧ ಮೊಹಾಲಿ ಪಂದ್ಯದಲ್ಲಿ ಭಾರತದ ಸೋಲಿಗೆ ಯಾರು ಹೊಣೆ..? ...

ಆಸ್ಟ್ರೇಲಿಯಾ ವಿರುದ್ಧ ಮೊಹಾಲಿ ಪಂದ್ಯದಲ್ಲಿ ಭಾರತದ ಸೋಲಿಗೆ ಯಾರು ಹೊಣೆ..? ಭುವನೇಶ್ವರ್ ಮೇಲೆ ಗವಾಸ್ಕರ್ ಗರಂ..!

-

- Advertisment -spot_img
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿಯೇ ಭಾರತ ತಂಡ ಉತ್ತಮ ಮೊತ್ತ ಕಲೆಹಾಕಿಯು ಮುಗ್ಗರಿಸಿ ಸೋಲಿನ ರುಚಿ ಉಂಡಿದೆ.
ಭಾರತ ತಂಡ ಬೃಹತ್ ಮೊತ್ತದ ಗುರಿ  ನೀಡಿದರೂ ಸಹ ಕಳಪೆ ಬೌಲಿಂಗ್‍ ನಿರ್ವಹಣೆಯಿಂದ ರೋಹಿತ್ ಪಡೆ ಸೋಲು ಎದುರಿಸಬೇಕಾಯಿತು.
ಹಾಗಾದ್ರೆ ಮೊಹಾಲಿ ಪಂದ್ಯದ ಸೋಲಿಗೆ ಯಾರು ಹೊಣೆ ? ಎನ್ನುವ ಪ್ರಶ್ನೆ ಕೆಲವರನ್ನು ಕಾಡಿದೆ ಇದಕ್ಕೆ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಸುನಿಲ್ ಗವಾಸ್ಕರ್ ಉತ್ತರಿಸಿದ್ದಾರೆ. ಭಾರತ ತಂಡ ಉತ್ತಮ ಮೊತ್ತ ಕಲೆ ಹಾಕಿಯು ಸೋಲಿಗೆ ಕಾರಣವಾಗಿದ್ದು ಆಸ್ಟ್ರೇಲಿಯಾ ಬ್ಯಾಟ್ಸ್ ಮನ್ ಗಳನ್ನು ಕಟ್ಟು ಹಾಕಲಾರದೆ ಅತಿ ಹೆಚ್ಚು ರನ್ ಹೊಡೆಸಿಕೊಂಡ ಅನುಭವಿ ವೇಗಿ ಭುವನೇಶ್ವರ್ ಮೇಲೆ ಅವರು ಗರಂ ಆಗಿದ್ದಾರೆ.
ಹೌದು, ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ-20 ಪಂದ್ಯದ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಸಾಕಷ್ಟು ಪಂದ್ಯಗಳ ‘ಡೆತ್ ಓವರ್‌ಗಳಲ್ಲಿ ಪದೇ ಪದೇ ತಂಡದ ವೈಫಲ್ಯಕ್ಕೆ ಭಾರತದ ವೇಗಿ ಭುವನೇಶ್ವರ್ ಕುಮಾರ್ ಕಾರಣವೆಂದು ಆರೋಪಿಸಿದ್ದಾರೆ. ಮೊಹಾಲಿಯಲ್ಲಿ ಮಂಗಳವಾರ ನಡೆದ 3 ಪಂದ್ಯಗಳ ಸರಣಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ ಇಪ್ಪತ್ತು ಓವರ್‌ಗಳಲ್ಲಿ  ಆರು ವಿಕೆಟ್ ಕಳೆದುಕೊಂಡು 208 ರನ್‍ಗಳ ಸವಾಲಿನ ಮೊತ್ತ ಕಲೆ ಹಾಕಿತ್ತು ತಂಡದ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ಹೊರತಾಗಿಯೂ ಭಾರತ ತಂಡ 4 ವಿಕೆಟ್‍ಗಳಿಂದ ಸೋಲು ಕಾಣಬೇಕಾದದ್ದು ಮಾತ್ರ ದುರಂತವೆ ಹೌದು ಇದಕ್ಕೆ ನೇರ ಹೊಣೆ ಭಾರತ ತಂಡದ ವೇಗದ ಬೌಲರ್ ಭುವನೇಶ್ವರ್
*ನಾಲ್ಕು ಓವರ್ ಗಳಲ್ಲಿ 52 ರನ್‌ ಹೊಡಸಿಕೊಂಡ ಭುವಿ..!*  
ಭಾರತ ತಂಡದ ಅನುಭವಿ ವೇಗದ ಬೌಲರ್‌ಗಳಲ್ಲಿ ಒಬ್ಬರಾದ ಭುವನೇಶ್ವರ್ ಕುಮಾರ್ ಈ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಭುವಿ ಇನಿಂಗ್ಸ್‌ನ ಆರಂಭದಲ್ಲೆ ಒಂದರಮೇಲೊಂದು ವೈಡ್ ಬಾಲ್ ಎಸೆಯುವುದರೊಂದಿಕೆ ರನ್ ಕೂಡ ಹೊಡೆಸಿಕೊಂಡರು ಅದರಲ್ಲೂ ಅತ್ಯಂತ ನಿರ್ಣಾಯಕ 19ನೇ ಓವರ್‌ ಅನ್ನು ಬೌಲ್ ಮಾಡಿ ಭುವಿ 16 ರನ್ ಬಿಟ್ಟುಕೊಟ್ಟರು. ಈ ಓವರ್ ಪಂದ್ಯದ ಗತಿಯನ್ನೆ ಬದಲಿಸಿತ್ತು  ಭುವನೇಶ್ವರ್ ನಾಲ್ಕು ಓವರ್‌ಗಳಲ್ಲಿ 13 ಎಕಾನಮಿ ರೇಟ್‌ನಲ್ಲಿ 52 ರನ್ ಕೊಟ್ಟು ಸೋಲಿಗೆ ಪ್ರಮುಖ ಕಾರಣರಾದರು. ಭಾರತೀಯ ಬೌಲರ್‌ಗಳ ಪೈಕಿ ಭುವಿ ಬೌಲಿಂಗ್ ಪ್ರದರ್ಶನವು ಅತ್ಯಂತ ಕಳಪೆ ಮಟ್ಟದಲ್ಲಿತ್ತು ಆರಂಭದಿಂದಲೆ ಏನು ಕಳೆದುಕೊಂಡವರಂತೆ ಮೈದಾನದಲ್ಲಿ ಕಾಣುತ್ತಿದ್ದರು ಭುವಿ.
ಭಾರತ ತಂಡದ ಕಳಪೆ ಬೌಲಿಂಗ್ ಪ್ರದರ್ಶನದಿಂದ ಸುನಿಲ್ ಗವಾಸ್ಕರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ನಾವು ಉತ್ತಮವಾಗಿ ಬೌಲಿಂಗ್ ಮಾಡಲಿಲ್ಲ. ಇದು ನಮಗೆ ದೊಡ್ಡ ಆತಂಕವನ್ನು ತಂದೊಡ್ಡಿದೆ. ಮುಂದಿನ ಪಂದ್ಯಗಳನ್ನು ಯೋಚಿಸುವಂತಾಗಿದೆ. ಅದರಲ್ಲೂ ತಂಡದ ಶ್ರೇಷ್ಠ ಬೌಲರ್ ಗಳಲ್ಲಿ ಒಬ್ಬರಾದ ಭುವನೇಶ್ವರ್ ಕುಮಾರ್ ಅನುಭವಿ ಬೌಲರ್ ಆಗಿದ್ದರು ಪ್ರತಿ ಬಾರಿಯೂ ಹೆಚ್ಚು ರನ್ ಬಿಟ್ಟುಕೊಡುತ್ತಿದ್ದಾರೆ. ಈ ಕಾರಣದಿಂದಲೇ ಭಾರತವನ್ನು ಪಾಕಿಸ್ತಾನ, ಶ್ರೀಲಂಕಾ ಮತ್ತು ಈಗ ಆಸ್ಟ್ರೇಲಿಯಾ ಕೂಡ ಸೋಲಿಸಿವೆ. ಆಸೀಸ್ ವಿರುದ್ಧ ನಾಲ್ಕು ಓವರ್ ಗಳಲ್ಲಿ ಭುವಿ ಹನ್ನೆರಡು ರನ್ ಸರಾಸರಿಯಲ್ಲಿ 52 ರನ್ ನಿಡಿದ್ದಾರೆ. ಪ್ರತಿ ಎಸೆತಕ್ಕೆ ಅವರು 2.16ರಂತೆ ರನ್ ನೀಡಿದ್ದಾರೆ. ಕಳೆದ 3 ಪಂದ್ಯಗಳ ಡೆತ್‍ ಓವರ್‍ ಳಲ್ಲಿ ಅವರು ಹೆಚ್ಚು ರನ್ ಬಿಟ್ಟುಕೊಟ್ಟಿದ್ದು ತಂಡದ ಸೋಲಿಗೆ ಪ್ರಮುಖ ಕಾರಣವಾಗಿದೆ’ ಅಂತಾ ಗವಾಸ್ಕರ್ ಬೇಸರ ವ್ಯಕ್ತಪಡಿಸಿದ್ದಾರೆ.ಇದು ತಂಡದ ಮುಂದಿನ ಪಂದ್ಯಗಳಲ್ಲೂ ಸೋಲಿನ ಭೀತಿ ಎದುರಾಗಿದೆ.
ಭುವನೇಶ್ವರ್ ಹೊರತಾಗಿ ವೇಗಿ ಹರ್ಷಲ್ ಕೂಡ ಈ ಪಂದ್ಯದಲ್ಲಿ ದುಬಾರಿ ಎನಿಸಿದರು. ಗಾಯದಿಂದ ಮರಳಿದ ನಂತರ ಅವರು ತಮ್ಮ ಮೊದಲ ಪಂದ್ಯ ಆಡಿದರು. ಹರ್ಷಲ್ ತಮ್ಮ ನಾಲ್ಕು ಓವರ್‌ಗಳ ಕೋಟಾದಲ್ಲಿ 49 ರನ್‌ ಬಿಟ್ಟುಕೊಟ್ಟರು. ಆದರೆ ಹರ್ಷಲ್ ವಾಪಸಾದ ನಂತರ ಇದು ಮೊದಲ ಪಂದ್ಯ’ವಾಗಿದೆ. ಹೀಗಾಗಿ ಅವರು ಮುಂದಿನ ಪಂದ್ಯಗಳಿಗೆ ಸಾಕಷ್ಟು ತಯಾರಿ ಮಾಡಿಕೊಳ್ಳಬೇಕಿದೆ ಎಂದು ಗವಾಸ್ಕರ್ ಖಡಕ್ಕಾಗಿ ಹೇಳಿದ್ದಾರೆ.
ಟಿ-20 ವಿಶ್ವಕಪ್‌ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಬೌಲರ್‌ಗಳು ಸಾಕಷ್ಟು ಓವರ್‌ಗಳನ್ನು ಬೌಲ್ ಮಾಡಿ ಅಭ್ಯಾಸ ಮಾಡಬೇಕಿದೆ ಬ್ಯಾಟಿಂಗ್ ನ ಬಲವನ್ನು ನಂಬಿ ಇದೇ ರೀತಿ ಬೌಲಿಂಗ್ ಮಾಡಿದರೆ ಬರಲಿರುವ ವಿಶ್ವಕಪ್ ಪಂದ್ಯದಲ್ಲಿ ಲೀಗ್ ಹಂತದಲ್ಲಿಯೇ ಭಾರತ ತಂಡ ಸೋತು ನಿರ್ಗಮಿಸಬೇಕಾದ ಸ್ಥಿತಿ ಬಂದರೂ ಬರಬಹುದು ಎಂದು ಕ್ರಿಕೆಟ್ ದಿಗ್ಗಜರ ಜೋತೆಗೆ ಅಭಿಮಾನಿಗಳು ಚರ್ಚಿಸುತ್ತಿದ್ದಾರೆ.
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

eleven + four =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you