ಕ್ರಿಕೆಟ್ಪಿಎಂ ನಿಧಿಗೆ 50,000 ಡಾಲರ್ ದೇಣಿಗೆ ನೀಡಿದ ಆಸ್ಟ್ರೇಲಿಯಾ ಸ್ಟಾರ್ ಕ್ರಿಕೆಟಿಗ...

ಪಿಎಂ ನಿಧಿಗೆ 50,000 ಡಾಲರ್ ದೇಣಿಗೆ ನೀಡಿದ ಆಸ್ಟ್ರೇಲಿಯಾ ಸ್ಟಾರ್ ಕ್ರಿಕೆಟಿಗ ” ಪ್ಯಾಟ್ ಕಮಿನ್ಸ್ “

-

- Advertisment -spot_img
ನವದೆಹಲಿ: ಆಸ್ಟ್ರೇಲಿಯಾದ ಬೌಲರ್ ಪ್ಯಾಟ್ ಕಮಿನ್ಸ್ ‘ಪಿಎಂ ನಿಧಿಗೆ  ಬರೋಬ್ಬರಿ 50,000 ಡಾಲರ್ (37,35,640 ರೂ.) ದೇಣಿಗೆ ನೀಡಿದ್ದಾರೆ. ಭಾರತದಲ್ಲಿ ಕೋವಿಡ್-19 ಪ್ರಕರಣಗಳು ದಿನೆ ದಿನೆ ಹೆಚ್ಚುತ್ತಿದ್ದು, ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಎದುರಾಗಿದೆ ಈ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಕೊರೊನಾ ಸೋಂಕಿತರು ಬಲಿಯಾಗಿದ್ದಾರೆ. ಇದನ್ನು ಗಮನಿಸಿದ ಕಮಿನ್ಸ್ ನೆರವಿಗೆ ಮುಂದಾಗಿದ್ದಾರೆ.
ಟ್ವೀಟ್‌ ಮೂಲಕ ಸ್ವತಃ ಪ್ಯಾಟ್ ಕಮಿನ್ಸ್ ಈ ಸಂಗತಿಯನ್ನು ಹೇಳಿಕೊಂಡಿದ್ದಾರೆ. ಆಮ್ಲಜನಕದ ಸಿಲಿಂಡರ್‌ಗಳ ಕೊರತೆ ಎದುರಿಸುತ್ತಿರುವ ಭಾರತದ ಆಸ್ಪತ್ರೆಗಳಿಗೆ ಆಮ್ಲಜನಕದ ಸಿಲಿಂಡರ್‌ಗಳನ್ನು ಖರೀದಿಸಲು ಕಮಿನ್ಸ್ ಸಹಾಯಹಸ್ತ ಚಾಚಿರುವುದು ತುಂಬಾ ಸಂತೋಷದ ವಿಷಯ,  ಸದ್ಯ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕಮಿನ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಟ್ವೀಟ್ ಮಾಡಿರುವ ಕಮಿನ್ಸ್, ‘ನಾವು  ಪ್ರೀತಿಸುವ ದೇಶಗಳಲ್ಲಿ ಭಾರತವೂ ಒಂದು. ನಾನು ಎಲ್ಲೂ ನೋಡಿರದ  ವಿಶಾಲ ಹೃದಯದ ಪ್ರೀತಿ ನನಗೆ ಭಾರತದಲ್ಲಿ ಸಿಕ್ಕಿದೆ, ಇಂತಹ ಹೃದಯವಂತ  ಮನಸ್ಸಿನ ಜನ ಇಲ್ಲಿದ್ದಾರೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಇಲ್ಲಿನ ಜನ ತೊಂದರೆ ಅನುಭವಿಸುತ್ತಿರುವುದನ್ನು ನೋಡುದಾಗ ನನಗೆ ತುಂಬಾ ನೋವಾಗಿದೆ ಎಂದು ಬರೆದುಕೊಂಡಿದ್ದಾರೆ.
ಟ್ವೀಟ್‌ನ ಮುಂದಿನ ಸಾಲುಗಳಲ್ಲಿ, ನಾನು ಒಬ್ಬ ಆಟಗಾರನಾಗಿ ಐಪಿಎಲ್‌ನಲ್ಲಿ ಕೋಟ್ಯಾಂತರ ಮಂದಿಯನ್ನು ತಲುಪಲು ಇರುವ ಅವಕಾಶವನ್ನು ನಾನು ಬಳಸಿಕೊಳ್ಳಲಿದ್ದೇನೆ. ನಾನು ಪಿಎಂ ನಿಧಿಗೆ ದೇಣಿಗೆ ನೀಡಿದ್ದೇನೆ. ನನ್ನ ಇತರ ಐಪಿಎಲ್ ಆಟಗಾರರಿಗೂ ನಾನು ದೇಣಿಗೆ ನೀಡಲು ಬೆಂಬಲ ನೀಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಪ್ರತಿಯೊಬ್ಬರು ತಲೆಬಾಗಲೆ ಬೇಕು.
ಭಾರತ ದೇಶದಲ್ಲಿ ಕ್ರಿಕೆಟ್ ಅತಿ ಶ್ರೀಮಂತಿಕೆಯ ಆಟವಾಗಿದೆ ದಿನ ಬೇಳಗಾಗುವುದರಲ್ಲಿ ಅದೆಷ್ಟೋ ಮಂದಿ ಕ್ರಿಕೆಟಿಗರು ಶ್ರೀಮಂತರಾಗಿದ್ದಾರೆ ಇನ್ನೂ ಸಾಕಷ್ಟು ಮಂದಿ ಭಾರತದ ಸ್ಟಾರ್ ಕ್ರಿಕೆಟಿಗರು ಕೋಟಿಗಟ್ಟಲೆ ಹಣ ಮಾಡಿಕೊಂಡಿದ್ದಾರೆ ಇವರಲ್ಲಿ ಬೆರಳೆಣಿಕೆಯ ಕೇಲವರು ಸಮಾಜ ಸೇವೆಗೆ, ಕೊರೊನಾ ಸೊಂಕಿತರ ನೆರವಿಗೆ ಸಹಾಯ ಹಸ್ತ ಚಾಚಿದ್ದಾರೆ ಅದರೆ ಇವರಲ್ಲಿ ಕೇಲವರು ಕೋಟಿ ಕೋಟಿ ಸಂಪಾದಿಸಿದರು ಮಾನವೀಯತೆಯನ್ನು ಮರೆತು ತಮ್ಮ ಐಶಾರಾಮಿ ಬದುಕಿನಲ್ಲೆ ಕಳೆದು ಹೋಗಿದ್ದಾರೆ ಅದೇ ದುರಂತ…. ಅದೇನೆ ಇರಲಿ ಭಾರತಿಯ ಅಭಿಮಾನಿಗಳ ಪ್ರೀತಿಗೆ ಬೆಲೆಕೊಟ್ಟು ಕೊರೊನಾ ಸೋಂಕಿತರ ನೆರವಿಗೆ ನಿಂತ ಆಸ್ಟ್ರೇಲಿಯಾದ ಸ್ಟಾರ್ ಕ್ರಿಕೆಟಿಗ  “ಪ್ಯಾಟ್ ಕಮಿನ್ಸ್ ” ಗೆ ಪ್ರತಿಯೊಬ್ಬ ಭಾರತಿಯನ ಪರವಾಗಿ ದೊಡ್ಡದೊಂದು ಸಲಾಮ್
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

eighteen − 12 =

Latest news

Spinsy Casino – Quick Spins & Fast Wins

Hai mai desiderato un'esperienza di casinò che ti dia un'esplosione di emozioni in pochi minuti? Spinsy Casino offre proprio...

Legiano Casino: Ekspresowe emocje z Quick Spin dla graczy mobilnych

Legiano Casino wypracowało niszę dla graczy, którzy pragną adrenaliny w krótkim czasie gry. Niezależnie od tego, czy masz przerwę...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...
- Advertisement -spot_imgspot_img

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

Must read

- Advertisement -spot_imgspot_img

You might also likeRELATED
Recommended to you