ಕ್ರಿಕೆಟ್ಪಿಎಂ ನಿಧಿಗೆ 50,000 ಡಾಲರ್ ದೇಣಿಗೆ ನೀಡಿದ ಆಸ್ಟ್ರೇಲಿಯಾ ಸ್ಟಾರ್ ಕ್ರಿಕೆಟಿಗ...

ಪಿಎಂ ನಿಧಿಗೆ 50,000 ಡಾಲರ್ ದೇಣಿಗೆ ನೀಡಿದ ಆಸ್ಟ್ರೇಲಿಯಾ ಸ್ಟಾರ್ ಕ್ರಿಕೆಟಿಗ ” ಪ್ಯಾಟ್ ಕಮಿನ್ಸ್ “

-

- Advertisment -spot_img
ನವದೆಹಲಿ: ಆಸ್ಟ್ರೇಲಿಯಾದ ಬೌಲರ್ ಪ್ಯಾಟ್ ಕಮಿನ್ಸ್ ‘ಪಿಎಂ ನಿಧಿಗೆ  ಬರೋಬ್ಬರಿ 50,000 ಡಾಲರ್ (37,35,640 ರೂ.) ದೇಣಿಗೆ ನೀಡಿದ್ದಾರೆ. ಭಾರತದಲ್ಲಿ ಕೋವಿಡ್-19 ಪ್ರಕರಣಗಳು ದಿನೆ ದಿನೆ ಹೆಚ್ಚುತ್ತಿದ್ದು, ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಎದುರಾಗಿದೆ ಈ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಕೊರೊನಾ ಸೋಂಕಿತರು ಬಲಿಯಾಗಿದ್ದಾರೆ. ಇದನ್ನು ಗಮನಿಸಿದ ಕಮಿನ್ಸ್ ನೆರವಿಗೆ ಮುಂದಾಗಿದ್ದಾರೆ.
ಟ್ವೀಟ್‌ ಮೂಲಕ ಸ್ವತಃ ಪ್ಯಾಟ್ ಕಮಿನ್ಸ್ ಈ ಸಂಗತಿಯನ್ನು ಹೇಳಿಕೊಂಡಿದ್ದಾರೆ. ಆಮ್ಲಜನಕದ ಸಿಲಿಂಡರ್‌ಗಳ ಕೊರತೆ ಎದುರಿಸುತ್ತಿರುವ ಭಾರತದ ಆಸ್ಪತ್ರೆಗಳಿಗೆ ಆಮ್ಲಜನಕದ ಸಿಲಿಂಡರ್‌ಗಳನ್ನು ಖರೀದಿಸಲು ಕಮಿನ್ಸ್ ಸಹಾಯಹಸ್ತ ಚಾಚಿರುವುದು ತುಂಬಾ ಸಂತೋಷದ ವಿಷಯ,  ಸದ್ಯ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕಮಿನ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಟ್ವೀಟ್ ಮಾಡಿರುವ ಕಮಿನ್ಸ್, ‘ನಾವು  ಪ್ರೀತಿಸುವ ದೇಶಗಳಲ್ಲಿ ಭಾರತವೂ ಒಂದು. ನಾನು ಎಲ್ಲೂ ನೋಡಿರದ  ವಿಶಾಲ ಹೃದಯದ ಪ್ರೀತಿ ನನಗೆ ಭಾರತದಲ್ಲಿ ಸಿಕ್ಕಿದೆ, ಇಂತಹ ಹೃದಯವಂತ  ಮನಸ್ಸಿನ ಜನ ಇಲ್ಲಿದ್ದಾರೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಇಲ್ಲಿನ ಜನ ತೊಂದರೆ ಅನುಭವಿಸುತ್ತಿರುವುದನ್ನು ನೋಡುದಾಗ ನನಗೆ ತುಂಬಾ ನೋವಾಗಿದೆ ಎಂದು ಬರೆದುಕೊಂಡಿದ್ದಾರೆ.
ಟ್ವೀಟ್‌ನ ಮುಂದಿನ ಸಾಲುಗಳಲ್ಲಿ, ನಾನು ಒಬ್ಬ ಆಟಗಾರನಾಗಿ ಐಪಿಎಲ್‌ನಲ್ಲಿ ಕೋಟ್ಯಾಂತರ ಮಂದಿಯನ್ನು ತಲುಪಲು ಇರುವ ಅವಕಾಶವನ್ನು ನಾನು ಬಳಸಿಕೊಳ್ಳಲಿದ್ದೇನೆ. ನಾನು ಪಿಎಂ ನಿಧಿಗೆ ದೇಣಿಗೆ ನೀಡಿದ್ದೇನೆ. ನನ್ನ ಇತರ ಐಪಿಎಲ್ ಆಟಗಾರರಿಗೂ ನಾನು ದೇಣಿಗೆ ನೀಡಲು ಬೆಂಬಲ ನೀಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಪ್ರತಿಯೊಬ್ಬರು ತಲೆಬಾಗಲೆ ಬೇಕು.
ಭಾರತ ದೇಶದಲ್ಲಿ ಕ್ರಿಕೆಟ್ ಅತಿ ಶ್ರೀಮಂತಿಕೆಯ ಆಟವಾಗಿದೆ ದಿನ ಬೇಳಗಾಗುವುದರಲ್ಲಿ ಅದೆಷ್ಟೋ ಮಂದಿ ಕ್ರಿಕೆಟಿಗರು ಶ್ರೀಮಂತರಾಗಿದ್ದಾರೆ ಇನ್ನೂ ಸಾಕಷ್ಟು ಮಂದಿ ಭಾರತದ ಸ್ಟಾರ್ ಕ್ರಿಕೆಟಿಗರು ಕೋಟಿಗಟ್ಟಲೆ ಹಣ ಮಾಡಿಕೊಂಡಿದ್ದಾರೆ ಇವರಲ್ಲಿ ಬೆರಳೆಣಿಕೆಯ ಕೇಲವರು ಸಮಾಜ ಸೇವೆಗೆ, ಕೊರೊನಾ ಸೊಂಕಿತರ ನೆರವಿಗೆ ಸಹಾಯ ಹಸ್ತ ಚಾಚಿದ್ದಾರೆ ಅದರೆ ಇವರಲ್ಲಿ ಕೇಲವರು ಕೋಟಿ ಕೋಟಿ ಸಂಪಾದಿಸಿದರು ಮಾನವೀಯತೆಯನ್ನು ಮರೆತು ತಮ್ಮ ಐಶಾರಾಮಿ ಬದುಕಿನಲ್ಲೆ ಕಳೆದು ಹೋಗಿದ್ದಾರೆ ಅದೇ ದುರಂತ…. ಅದೇನೆ ಇರಲಿ ಭಾರತಿಯ ಅಭಿಮಾನಿಗಳ ಪ್ರೀತಿಗೆ ಬೆಲೆಕೊಟ್ಟು ಕೊರೊನಾ ಸೋಂಕಿತರ ನೆರವಿಗೆ ನಿಂತ ಆಸ್ಟ್ರೇಲಿಯಾದ ಸ್ಟಾರ್ ಕ್ರಿಕೆಟಿಗ  “ಪ್ಯಾಟ್ ಕಮಿನ್ಸ್ ” ಗೆ ಪ್ರತಿಯೊಬ್ಬ ಭಾರತಿಯನ ಪರವಾಗಿ ದೊಡ್ಡದೊಂದು ಸಲಾಮ್
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

14 + fifteen =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you