22.5 C
London
Sunday, May 19, 2024
Homeಕ್ರಿಕೆಟ್ಅವಿಘ್ನ ಸೃಷ್ಟಿ ಟ್ರೋಫಿ-2021- 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ

ಅವಿಘ್ನ ಸೃಷ್ಟಿ ಟ್ರೋಫಿ-2021- 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಗೆಳೆಯರ ಬಳಗ ಬೀಜಾಡಿ ಇವರ ಆಶ್ರಯದಲ್ಲಿ,ಗ್ರಾಮೀಣ ಮಟ್ಟದ ಪ್ರತಿಭೆಗಳ ಅನಾವರಣ ಹಾಗೂ ಅಶಕ್ತರಿಗೆ ಸಹಾಯಹಸ್ತ ನೀಡುವ ಸದುದ್ದೇಶದಿಂದ,ದ್ವಿತೀಯ ಬಾರಿಗೆ 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಅವಿಘ್ನ ಸೃಷ್ಟಿ ಟ್ರೋಫಿ-2021 ಪಂದ್ಯಾಟವನ್ನು ಫೆಬ್ರವರಿ 6 ಮತ್ತು 7 ರಂದು ಬೀಜಾಡಿ ಪಡುಶಾಲೆಯ ಹತ್ತಿರದ ಮೈದಾನದಲ್ಲಿ ಆಯೋಜಿಸಲಾಗಿದೆ.
6 ಶನಿವಾರದಂದು ಆಯ್ದ ಸ್ಥಳೀಯ ತಂಡಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು,7 ಆದಿತ್ಯವಾರದಂದು ಆಯಾ ಏರಿಯಾದ 16 ತಂಡಗಳಿಗೆ ಅವಕಾಶ ಕಲ್ಪಿಸಲಾಗಿದೆ.
*ಅವಿಘ್ನ ಸೃಷ್ಟಿ ಚಾಂಪಿಯನ್ಸ್ ಟ್ರೋಫಿ-2021*
ಫೆಬ್ರವರಿ 6 ಶನಿವಾರ ಸಂಜೆ 7.30 ರ ನಂತರ ಕುಂದಾಪುರ ವ್ಯಾಪ್ತಿಯ ಬಲಿಷ್ಠ 4 ತಂಡಗಳಾದ ಚಾಲೆಂಜ್ ಕುಂದಾಪುರ,ಜಾನ್ಸನ್ ಹಂಗಳೂರು,ಅಜೇಯ್ ಕುಂಜಿಗುಡಿ ಹಾಗೂ ಫ್ರೆಂಡ್ಸ್ ಗಿಳಿಯಾರು ತಂಡಗಳ ನಡುವೆ ಸೆಣಸಾಟ ನಡೆಯಲಿದ್ದು,ವಿಜೇತ ತಂಡ ವಿಶೇಷವಾಗಿ ಆಯೋಜಿಸಲಾದ ಅವಿಘ್ನ ಸೃಷ್ಟಿ ಚಾಂಪಿಯನ್ಸ್ ಟ್ರೋಫಿ-2021 ಜಯಿಸಲಿದೆ.
ಇದಲ್ಲದೇ  ಪೋಲಿಸ್ ತಂಡ ಹಾಗೂ ಗೆಳೆಯರ ಬಳಗ ಸೀನಿಯರ್ಸ್ ತಂಡಗಳ ನಡುವೆ ಪ್ರದರ್ಶನ ಪಂದ್ಯವೊಂದನ್ನು ಹಮ್ಮಿಕೊಳ್ಳಲಾಗಿದೆ.
ಅವಿಘ್ನ ಸೃಷ್ಟಿ ಟ್ರೋಫಿ ವಿಜೇತ ತಂಡ 22,222 ನಗದು,ದ್ವಿತೀಯ ಸ್ಥಾನಿ 15,555 ನಗದು ಸಹಿತ ಆಕರ್ಷಕ ಪಾರಿತೋಷಕಗಳನ್ನು ಪಡೆಯಲಿದ್ದು,ವೈಯಕ್ತಿಕ ಶ್ರೇಷ್ಟ ನಿರ್ವಹಣೆ ನೀಡಿದ ಆಟಗಾರ ವಿಶೇಷ ಬಹುಮಾನಗಳನ್ನು ಪಡೆಯಲಿದ್ದಾರೆ.ಪಂದ್ಯಾಕೂಟದ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭಕ್ಕೆ ಗಣ್ಯಾತಿಗಣ್ಯರು ಆಗಮಿಸಲಿದ್ದಾರೆ.
M.Sports ಪಂದ್ಯಾಟದ ನೇರ ಪ್ರಸಾರವನ್ನು ಬಿತ್ತರಿಸಲಿದ್ದು,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಸಹಕರಿಸಲಿದ್ದಾರೆ‌.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

8 + 1 =