SportsKannada | ಸ್ಪೋರ್ಟ್ಸ್ ಕನ್ನಡ

ಅವಿಘ್ನ ಸೃಷ್ಟಿ ಬೆಂಗಳೂರು ಮಡಿಲಿಗೆ ಡಾ.ಬಿ‌.ಆರ್.ಅಂಬೇಡ್ಕರ್ ಕಪ್-2022

ಬೆಂಗಳೂರು-ಸರ್ಜಾಪುರ ಸಮೀಪದ ಕೊಡತಿಯಲ್ಲಿ ನಡೆದ 4 ನೇ ವರ್ಷದ ರಾಜ್ಯಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿ ಡಾ.ಬಿ.ಆರ್.ಅಂಬೇಡ್ಕರ್ ಕಪ್
-2022 ಪ್ರಶಸ್ತಿಯನ್ನು ಅವಿಘ್ನ ಸೃಷ್ಟಿ ಬೆಂಗಳೂರು ತಂಡ ಜಯಿಸಿದೆ.
ಫೈನಲ್ ಪಂದ್ಯಾಟದಲ್ಲಿ ಬಲಿಷ್ಠ ಫ್ರೆಂಡ್ಸ್ ಬೆಂಗಳೂರು ತಂಡವನ್ನು ಮಣಿಸಿದ ಅವಿಘ್ನ ಸೃಷ್ಟಿ ತಂಡ ಪ್ರಥಮ ಪ್ರಶಸ್ತಿ 1,23,456 ರೂ ನಗದು,ದ್ವಿತೀಯ ಸ್ಥಾನಿ ಫ್ರೆಂಡ್ಸ್ ಬೆಂಗಳೂರು 65,432 ರೂ ನಗದು ಬಹುಮಾನ ಸಹಿತ ಆಕರ್ಷಕ ಟ್ರೋಫಿಗಳನ್ನು ತಮ್ಮದಾಗಿಸಿಕೊಂಡರು.
ಫೈನಲ್ ನ ಪಂದ್ಯಶ್ರೇಷ್ಟ ಮತ್ತು ಟೂರ್ನಮೆಂಟ್ ನ ಬೆಸ್ಟ್ ಬೌಲರ್ ಸಚಿನ್ ಮಹಾದೇವ್,ಬೆಸ್ಟ್ ಬ್ಯಾಟ್ಸ್‌ಮನ್ ಉತ್ತಪ್ಪ,ಸರಣಿ ಶ್ರೇಷ್ಠ ಪ್ರಶಸ್ತಿ ಫ್ರೆಂಡ್ಸ್ ಬೆಂಗಳೂರು ತಂಡದ ಸಾಗರ್ ಭಂಡಾರಿ ಪಡೆದುಕೊಂಡರು.
ಎಸ್.ಆರ್.ಬಿ ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾವಳಿಯ ನೇರ ಪ್ರಸಾರ ಬಿತ್ತರಗೊಂಡಿತ್ತು…
Exit mobile version