ಬ್ಯಾಡ್ಮಿಂಟನ್ವಿಶ್ವ ಚಾಂಪಿಯನ್‌ಷಿಪ್‌ ನಲ್ಲಿ ಚಿನ್ನದ ಪದಕ ಜಯಿಸುವ ಕನಸು : ಬ್ಯಾಡ್ಮಿಂಟನ್‌...

ವಿಶ್ವ ಚಾಂಪಿಯನ್‌ಷಿಪ್‌ ನಲ್ಲಿ ಚಿನ್ನದ ಪದಕ ಜಯಿಸುವ ಕನಸು : ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

-

- Advertisment -spot_img

ಭಾರತದ ಪ್ರಮುಖ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು, ಸೋಮವಾರದಿಂದ ನಡೆಯುವ ವಿಶ್ವ ಚಾಂಪಿಯನ್‌ಷಿಪ್‌ ನಲ್ಲಿ ಚಿನ್ನದ ಪದಕ ಜಯಿಸುವ ಕನಸು ಹೊಂದಿದ್ದಾರೆ.41 ವರ್ಷಗಳ ಇತಿಹಾಸವಿರುವ ಈ ಚಾಂಪಿಯನ್‌ಷಿಪ್‌ನಲ್ಲಿ ಭಾರತ ಎಂಟು ಪದಕಗಳನ್ನು ಗೆದ್ದಿದೆ. ಆದರೆ ಚಿನ್ನ ಮಾತ್ರ ಕೈಗೆಟುಕದಾಗಿದೆ.

ಈ ಕೊರಗನ್ನು ಸಿಂಧು ದೂರ ಮಾಡುವ ನಿರೀಕ್ಷೆ ಗರಿಗೆದರಿದೆ. 24ರ ಹರೆಯದ ಈ ಆಟಗಾರ್ತಿ ಹಿಂದಿನ ಎರಡು ಆವೃತ್ತಿಗಳಲ್ಲಿ ಬೆಳ್ಳಿಯ ಪದಕ ಗೆದ್ದಿದ್ದರು. ಚಾಂಪಿಯನ್‌ಷಿಪ್‌ನಲ್ಲಿ ಐದನೇ ಶ್ರೇಯಾಂಕ ಹೊಂದಿರುವ ಅವರಿಗೆ ಮೊದಲ ಸುತ್ತಿನಲ್ಲಿ ‘ಬೈ’ ಲಭಿಸಿದೆ. ಎರಡನೇ ಸುತ್ತಿನಲ್ಲಿ ಸಿಂಧು, ಚೀನಾ  ತೈಪೆಯ ಪಾಯಿ ಯು ಪೊ ಅಥವಾ ಬಲ್ಗೇರಿಯಾದ ಲಿಂಡಾ ಜೆತ್‌ಚಿರಿ ಎದುರು ಸೆಣಸಲಿದ್ದಾರೆ.

ಎಂಟನೇ ಶ್ರೇಯಾಂಕದ ಆಟಗಾರ್ತಿ ಸೈನಾ ನೆಹ್ವಾಲ್‌ ಕೂಡ ಪದಕದ ವಿಶ್ವಾಸದಲ್ಲಿದ್ದಾರೆ. ಸೈನಾ, ಚಾಂಪಿಯನ್‌ ಷಿಪ್‌ನಲ್ಲಿ ಒಂದು ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದಿದ್ದಾರೆ. ಅವರಿಗೂ ಮೊದಲ ಸುತ್ತಿನಲ್ಲಿ ‘ಬೈ’ ಸಿಕ್ಕಿದೆ.

ಪುರುಷರ ಸಿಂಗಲ್ಸ್‌ನಲ್ಲಿ ಕಿದಂಬಿ ಶ್ರೀಕಾಂತ್‌ ಮೇಲೆ ಹೆಚ್ಚಿನ ಭರವಸೆ ಇಡಲಾಗಿದೆ. ಈ ವರ್ಷದ ಮಾರ್ಚ್‌ನಲ್ಲಿ ನಡೆದಿದ್ದ ಇಂಡಿಯಾ ಓಪನ್‌ನಲ್ಲಿ ಅವರು ಫೈನಲ್‌ ಪ್ರವೇಶಿಸಿದ್ದರು.

ಮೊದಲ ಸುತ್ತಿನಲ್ಲಿ ಶ್ರೀಕಾಂತ್‌ಗೆ ಐರ್ಲೆಂಡ್‌ನ ನಾಹಟ್‌ ನಜುಯೆನ್‌ ಸವಾಲು ಎದುರಾಗಲಿದೆ. ಸಮೀರ್‌ ವರ್ಮಾ ಅವರು ಸಿಂಗಪುರದ ಲೊಹ್‌ ಕೀನ್‌ ಯೀವ್‌ ಎದುರು ಆಡುವ ಮೂಲಕ ಅಭಿಯಾನ ಆರಂಭಿಸಲಿದ್ದಾರೆ. ಬಿ.ಸಾಯಿ ಪ್ರಣೀತ್‌ ಮತ್ತು ಎಚ್‌.ಎಸ್‌.ಪ್ರಣಯ್‌ ಅವರೂ ಪದಕದ ಮೇಲೆ ಕಣ್ಣಿಟ್ಟಿದ್ದಾರೆ.

ಮಹಿಳಾ ಡಬಲ್ಸ್‌ನಲ್ಲಿ ಅಶ್ವಿನಿ ಪೊನ್ನಪ್ಪ ಮತ್ತು ಎನ್‌.ಸಿಕ್ಕಿ ರೆಡ್ಡಿ ಅವರ ಮೇಲೆ ವಿಶ್ವಾಸ ಇಡಲಾಗಿದೆ. ಕನ್ನಡತಿ ಅಶ್ವಿನಿ, ಮಿಶ್ರ ಡಬಲ್ಸ್‌ನಲ್ಲೂ ಆಡುತ್ತಿದ್ದಾರೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

sixteen − 3 =

Latest news

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ

  ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ...

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ ಶಿವ ಬಿಗ್ ಬ್ಯಾಶ್ ಲೀಗ್ ಗೆ ಅದ್ಧೂರಿಯ ಚಾಲನೆ ಕೋಟ-ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಕೋಟ ಸಾಲಿಗ್ರಾಮ...

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಶಾರ್ಜಾದಲ್ಲಿ ಕಾರ್ಪೊರೇಟ್ ಕ್ರಿಕೆಟ್‌ಗೆ ಭರ್ಜರಿ ವೇದಿಕೆ ಬೀಜಾಯ್ಸ್ ಗ್ರೂಪ್ ಆಫ್ ಕಂಪನೀಸ್‌ಗಳ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಕ್ರಿಕೆಟ್ ಟೂರ್ನಮೆಂಟ್...

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...
- Advertisement -spot_imgspot_img

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

Must read

- Advertisement -spot_imgspot_img

You might also likeRELATED
Recommended to you