20.3 C
London
Wednesday, May 15, 2024
Homeಬ್ಯಾಡ್ಮಿಂಟನ್ವಿಶ್ವ ಚಾಂಪಿಯನ್‌ಷಿಪ್‌ ನಲ್ಲಿ ಚಿನ್ನದ ಪದಕ ಜಯಿಸುವ ಕನಸು : ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

ವಿಶ್ವ ಚಾಂಪಿಯನ್‌ಷಿಪ್‌ ನಲ್ಲಿ ಚಿನ್ನದ ಪದಕ ಜಯಿಸುವ ಕನಸು : ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ಭಾರತದ ಪ್ರಮುಖ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು, ಸೋಮವಾರದಿಂದ ನಡೆಯುವ ವಿಶ್ವ ಚಾಂಪಿಯನ್‌ಷಿಪ್‌ ನಲ್ಲಿ ಚಿನ್ನದ ಪದಕ ಜಯಿಸುವ ಕನಸು ಹೊಂದಿದ್ದಾರೆ.41 ವರ್ಷಗಳ ಇತಿಹಾಸವಿರುವ ಈ ಚಾಂಪಿಯನ್‌ಷಿಪ್‌ನಲ್ಲಿ ಭಾರತ ಎಂಟು ಪದಕಗಳನ್ನು ಗೆದ್ದಿದೆ. ಆದರೆ ಚಿನ್ನ ಮಾತ್ರ ಕೈಗೆಟುಕದಾಗಿದೆ.

ಈ ಕೊರಗನ್ನು ಸಿಂಧು ದೂರ ಮಾಡುವ ನಿರೀಕ್ಷೆ ಗರಿಗೆದರಿದೆ. 24ರ ಹರೆಯದ ಈ ಆಟಗಾರ್ತಿ ಹಿಂದಿನ ಎರಡು ಆವೃತ್ತಿಗಳಲ್ಲಿ ಬೆಳ್ಳಿಯ ಪದಕ ಗೆದ್ದಿದ್ದರು. ಚಾಂಪಿಯನ್‌ಷಿಪ್‌ನಲ್ಲಿ ಐದನೇ ಶ್ರೇಯಾಂಕ ಹೊಂದಿರುವ ಅವರಿಗೆ ಮೊದಲ ಸುತ್ತಿನಲ್ಲಿ ‘ಬೈ’ ಲಭಿಸಿದೆ. ಎರಡನೇ ಸುತ್ತಿನಲ್ಲಿ ಸಿಂಧು, ಚೀನಾ  ತೈಪೆಯ ಪಾಯಿ ಯು ಪೊ ಅಥವಾ ಬಲ್ಗೇರಿಯಾದ ಲಿಂಡಾ ಜೆತ್‌ಚಿರಿ ಎದುರು ಸೆಣಸಲಿದ್ದಾರೆ.

ಎಂಟನೇ ಶ್ರೇಯಾಂಕದ ಆಟಗಾರ್ತಿ ಸೈನಾ ನೆಹ್ವಾಲ್‌ ಕೂಡ ಪದಕದ ವಿಶ್ವಾಸದಲ್ಲಿದ್ದಾರೆ. ಸೈನಾ, ಚಾಂಪಿಯನ್‌ ಷಿಪ್‌ನಲ್ಲಿ ಒಂದು ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದಿದ್ದಾರೆ. ಅವರಿಗೂ ಮೊದಲ ಸುತ್ತಿನಲ್ಲಿ ‘ಬೈ’ ಸಿಕ್ಕಿದೆ.

ಪುರುಷರ ಸಿಂಗಲ್ಸ್‌ನಲ್ಲಿ ಕಿದಂಬಿ ಶ್ರೀಕಾಂತ್‌ ಮೇಲೆ ಹೆಚ್ಚಿನ ಭರವಸೆ ಇಡಲಾಗಿದೆ. ಈ ವರ್ಷದ ಮಾರ್ಚ್‌ನಲ್ಲಿ ನಡೆದಿದ್ದ ಇಂಡಿಯಾ ಓಪನ್‌ನಲ್ಲಿ ಅವರು ಫೈನಲ್‌ ಪ್ರವೇಶಿಸಿದ್ದರು.

ಮೊದಲ ಸುತ್ತಿನಲ್ಲಿ ಶ್ರೀಕಾಂತ್‌ಗೆ ಐರ್ಲೆಂಡ್‌ನ ನಾಹಟ್‌ ನಜುಯೆನ್‌ ಸವಾಲು ಎದುರಾಗಲಿದೆ. ಸಮೀರ್‌ ವರ್ಮಾ ಅವರು ಸಿಂಗಪುರದ ಲೊಹ್‌ ಕೀನ್‌ ಯೀವ್‌ ಎದುರು ಆಡುವ ಮೂಲಕ ಅಭಿಯಾನ ಆರಂಭಿಸಲಿದ್ದಾರೆ. ಬಿ.ಸಾಯಿ ಪ್ರಣೀತ್‌ ಮತ್ತು ಎಚ್‌.ಎಸ್‌.ಪ್ರಣಯ್‌ ಅವರೂ ಪದಕದ ಮೇಲೆ ಕಣ್ಣಿಟ್ಟಿದ್ದಾರೆ.

ಮಹಿಳಾ ಡಬಲ್ಸ್‌ನಲ್ಲಿ ಅಶ್ವಿನಿ ಪೊನ್ನಪ್ಪ ಮತ್ತು ಎನ್‌.ಸಿಕ್ಕಿ ರೆಡ್ಡಿ ಅವರ ಮೇಲೆ ವಿಶ್ವಾಸ ಇಡಲಾಗಿದೆ. ಕನ್ನಡತಿ ಅಶ್ವಿನಿ, ಮಿಶ್ರ ಡಬಲ್ಸ್‌ನಲ್ಲೂ ಆಡುತ್ತಿದ್ದಾರೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

eight + twelve =