ಬ್ಯಾಡ್ಮಿಂಟನ್ವಿಶ್ವ ಚಾಂಪಿಯನ್‌ಷಿಪ್‌ ನಲ್ಲಿ ಚಿನ್ನದ ಪದಕ ಜಯಿಸುವ ಕನಸು : ಬ್ಯಾಡ್ಮಿಂಟನ್‌...

ವಿಶ್ವ ಚಾಂಪಿಯನ್‌ಷಿಪ್‌ ನಲ್ಲಿ ಚಿನ್ನದ ಪದಕ ಜಯಿಸುವ ಕನಸು : ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

-

- Advertisment -spot_img

ಭಾರತದ ಪ್ರಮುಖ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು, ಸೋಮವಾರದಿಂದ ನಡೆಯುವ ವಿಶ್ವ ಚಾಂಪಿಯನ್‌ಷಿಪ್‌ ನಲ್ಲಿ ಚಿನ್ನದ ಪದಕ ಜಯಿಸುವ ಕನಸು ಹೊಂದಿದ್ದಾರೆ.41 ವರ್ಷಗಳ ಇತಿಹಾಸವಿರುವ ಈ ಚಾಂಪಿಯನ್‌ಷಿಪ್‌ನಲ್ಲಿ ಭಾರತ ಎಂಟು ಪದಕಗಳನ್ನು ಗೆದ್ದಿದೆ. ಆದರೆ ಚಿನ್ನ ಮಾತ್ರ ಕೈಗೆಟುಕದಾಗಿದೆ.

ಈ ಕೊರಗನ್ನು ಸಿಂಧು ದೂರ ಮಾಡುವ ನಿರೀಕ್ಷೆ ಗರಿಗೆದರಿದೆ. 24ರ ಹರೆಯದ ಈ ಆಟಗಾರ್ತಿ ಹಿಂದಿನ ಎರಡು ಆವೃತ್ತಿಗಳಲ್ಲಿ ಬೆಳ್ಳಿಯ ಪದಕ ಗೆದ್ದಿದ್ದರು. ಚಾಂಪಿಯನ್‌ಷಿಪ್‌ನಲ್ಲಿ ಐದನೇ ಶ್ರೇಯಾಂಕ ಹೊಂದಿರುವ ಅವರಿಗೆ ಮೊದಲ ಸುತ್ತಿನಲ್ಲಿ ‘ಬೈ’ ಲಭಿಸಿದೆ. ಎರಡನೇ ಸುತ್ತಿನಲ್ಲಿ ಸಿಂಧು, ಚೀನಾ  ತೈಪೆಯ ಪಾಯಿ ಯು ಪೊ ಅಥವಾ ಬಲ್ಗೇರಿಯಾದ ಲಿಂಡಾ ಜೆತ್‌ಚಿರಿ ಎದುರು ಸೆಣಸಲಿದ್ದಾರೆ.

ಎಂಟನೇ ಶ್ರೇಯಾಂಕದ ಆಟಗಾರ್ತಿ ಸೈನಾ ನೆಹ್ವಾಲ್‌ ಕೂಡ ಪದಕದ ವಿಶ್ವಾಸದಲ್ಲಿದ್ದಾರೆ. ಸೈನಾ, ಚಾಂಪಿಯನ್‌ ಷಿಪ್‌ನಲ್ಲಿ ಒಂದು ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದಿದ್ದಾರೆ. ಅವರಿಗೂ ಮೊದಲ ಸುತ್ತಿನಲ್ಲಿ ‘ಬೈ’ ಸಿಕ್ಕಿದೆ.

ಪುರುಷರ ಸಿಂಗಲ್ಸ್‌ನಲ್ಲಿ ಕಿದಂಬಿ ಶ್ರೀಕಾಂತ್‌ ಮೇಲೆ ಹೆಚ್ಚಿನ ಭರವಸೆ ಇಡಲಾಗಿದೆ. ಈ ವರ್ಷದ ಮಾರ್ಚ್‌ನಲ್ಲಿ ನಡೆದಿದ್ದ ಇಂಡಿಯಾ ಓಪನ್‌ನಲ್ಲಿ ಅವರು ಫೈನಲ್‌ ಪ್ರವೇಶಿಸಿದ್ದರು.

ಮೊದಲ ಸುತ್ತಿನಲ್ಲಿ ಶ್ರೀಕಾಂತ್‌ಗೆ ಐರ್ಲೆಂಡ್‌ನ ನಾಹಟ್‌ ನಜುಯೆನ್‌ ಸವಾಲು ಎದುರಾಗಲಿದೆ. ಸಮೀರ್‌ ವರ್ಮಾ ಅವರು ಸಿಂಗಪುರದ ಲೊಹ್‌ ಕೀನ್‌ ಯೀವ್‌ ಎದುರು ಆಡುವ ಮೂಲಕ ಅಭಿಯಾನ ಆರಂಭಿಸಲಿದ್ದಾರೆ. ಬಿ.ಸಾಯಿ ಪ್ರಣೀತ್‌ ಮತ್ತು ಎಚ್‌.ಎಸ್‌.ಪ್ರಣಯ್‌ ಅವರೂ ಪದಕದ ಮೇಲೆ ಕಣ್ಣಿಟ್ಟಿದ್ದಾರೆ.

ಮಹಿಳಾ ಡಬಲ್ಸ್‌ನಲ್ಲಿ ಅಶ್ವಿನಿ ಪೊನ್ನಪ್ಪ ಮತ್ತು ಎನ್‌.ಸಿಕ್ಕಿ ರೆಡ್ಡಿ ಅವರ ಮೇಲೆ ವಿಶ್ವಾಸ ಇಡಲಾಗಿದೆ. ಕನ್ನಡತಿ ಅಶ್ವಿನಿ, ಮಿಶ್ರ ಡಬಲ್ಸ್‌ನಲ್ಲೂ ಆಡುತ್ತಿದ್ದಾರೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

fifteen + 9 =

Latest news

Chicken Road: Gioco Crash a Quick‑Play per Vincitori dal Ritmo Veloce

IntroduzioneNel mondo dei giochi da casinò online, molti titoli cercano di catturare i giocatori con rulli appariscenti o trame...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...
- Advertisement -spot_imgspot_img

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

Must read

- Advertisement -spot_imgspot_img

You might also likeRELATED
Recommended to you