Categories
ಕ್ರಿಕೆಟ್

ಬೆಂಗಳೂರು-ಸೋನು ಬ್ಯಾಟಿಂಗ್ ಸಾಹಸ-ಸೋಲಿನ ಸುಳಿಯಿಂದ ಗೆಲುವಿನ ದಡಕ್ಕೆ ನಾಗಾ ಇಲೆವೆನ್

ಕೆ.ಟಿ.ಪಿ.ಎಲ್ 5 ನೇ ಪಂದ್ಯದಲ್ಲಿ ನಾಗಾ ಇಲೆವೆನ್,ಗುರು ಕ್ರಿಕೆಟರ್ಸ್ ತಂಡವನ್ನು ಸೋಲಿಸಿ ತನ್ನ ಮೊದಲ ಗೆಲುವನ್ನು ದಾಖಲಿಸಿದೆ.
ನಾಗಾ ಇಲೆವೆನ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿತ್ತು.ಮೊದಲು ಬ್ಯಾಟಿಂಗ್ ನಡೆಸಿದ
ಗುರು ಕ್ರಿಕೆಟರ್ಸ್ ನ ಸ್ಪೋಟಕ ಆರಂಭಿಕ ಆಟಗಾರರಾದ ಅಶೋಕ್ ಪಿಳ್ಳೆ 18,ವಿನೋದ್ 16 ರನ್ ಗಳ ನೆರವಿನಿಂದ 8 ಓವರ್ ಗಳಲ್ಲಿ 55 ರನ್ ಕಲೆಹಾಕಿತ್ತು.
ನಾಗಾ ಇಲೆವೆನ್ ತಂಡ ಕೇವಲ 5 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ 3 ವಿಕೆಟ್ ಗಳನ್ನು ಕಳೆದುಕೊಂಡಿತ್ತು‌.29 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡ ಸಂದರ್ಭದಲ್ಲಿ ಕ್ರೀಸ್ ಗೆ ಆಗಮಿಸಿದ ಸೋನು ಪಡುಬಿದ್ರಿ ಪಂದ್ಯದ ಚಿತ್ರಣವನ್ನೇ ಬದಲಾಯಿಸಿದರು.ಕೊನೆಯ ಹಂತದಲ್ಲಿ 6 ಎಸೆತಗಳಲ್ಲಿ ಭರ್ಜರಿ ಸಿಕ್ಸರ್ ಗಳ‌ ಸಹಿತ 21 ರನ್ ಸಿಡಿಸಿ ಸೋಲಿನ ಸುಳಿಯಲ್ಲಿ ಸಿಲುಕಿದ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದ ಸೋನು ಪಡುಬಿದ್ರಿ ಅರ್ಹವಾಗಿ ಪಂದ್ಯಶ್ರೇಷ್ಟ ಗೌರವಕ್ಕೆ ಪಾತ್ರರಾದರು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

5 × 1 =