Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಕುಂದಾಪುರ-ಬೀಜಾಡಿಯಲ್ಲಿ ನಡೆಯಲಿರುವ ಅವಿಘ್ನ ಸೃಷ್ಟಿ ಟ್ರೋಫಿಯಲ್ಲಿ ನೊಂದ ಕುಟುಂಬಗಳಿಗೆ ನೆರವಿನ ಹಸ್ತ

ಗೆಳೆಯರ ಬಳಗ ಬೀಜಾಡಿ ಇವರ ಅಶ್ರಯದಲ್ಲಿ ಯಶಸ್ವಿ ತೃತೀಯ ಬಾರಿಗೆ 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ “ಅವಿಘ್ನ ಸೃಷ್ಟಿ ಟ್ರೋಫಿ-2021” ಆಯೋಜಿಸಲಾಗಿದೆ.
ಡಿಸೆಂಬರ್ 11 ಮತ್ತು 12 ರಂದು ಬೀಜಾಡಿ ಪಡುಶಾಲೆಯ ಹತ್ತಿರ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ತಂಡಗಳನ್ನು 2 ವಿಭಾಗಗಳಾಗಿ ವಿಂಗಡಿಸಲಾಗಿದ್ದು,ಆಯ್ದ ಸ್ಥಳೀಯ 12 ತಂಡಗಳು ಮತ್ತು ಹರಾಜು ಪ್ರಕ್ರಿಯೆಗೆ ಒಳಪಟ್ಟ ಆಟಗಾರರ 15 ಫ್ರಾಂಚೈಸಿ ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿದೆ.
ಪ್ರಥಮ ಪ್ರಶಸ್ತಿ 30,003 ರೂ ನಗದು,ದ್ವಿತೀಯ ಪ್ರಶಸ್ತಿ 20,002 ರೂ ನಗದು ಸಹಿತ ಆಕರ್ಷಕ ಪಾರಿತೋಷಕಗಳನ್ನು ಪಡೆಯಲಿದ್ದಾರೆ ಹಾಗೂ ವೈಯಕ್ತಿಕ ಪ್ರಶಸ್ತಿ ರೂಪದಲ್ಲಿ ಆಕರ್ಷಕ ಉಡುಗೊರೆಗಳನ್ನು ನೀಡಲಾಗುತ್ತಿದೆ.
ಪಂದ್ಯಾವಳಿಯ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭಗಳಿಗೆ ಗಣ್ಯ ಅತಿಥಿಗಳು ಆಗಮಿಸಲಿದ್ದಾರೆ.
ಪ್ರತಿ ವರ್ಷದಂತೆಯೂ,ಈ ಬಾರಿಯೂ ಕೂಡ ನೊಂದ ಕುಟುಂಬಗಳಿಗೆ ನೆರವಿನ ಹಸ್ತ ನೀಡಲಿದ್ದಾರೆ.M ಸ್ಪೋರ್ಟ್ಸ್ ಯೂ ಟ್ಯೂಬ್ ಚಾನೆಲ್ ನಲ್ಲಿ  ಪಂದ್ಯಾಕೂಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

fifteen + six =